ಭ್ರಷ್ಟಾಚಾರ-ಬೆಲೆ ಏರಿಕೆ ವಿರುದ್ದ ಪ್ರತಿಭಟನೆ

ಬಿಜೆಪಿ ಸರ್ಕಾರದಿಂದ 40 ಪರ್ಸೆಂಟ್‌ ಕಮೀಷನ್‌ ದಂಧೆ: ತಾಜ್‌ಪೀರ್‌

Team Udayavani, Apr 18, 2022, 3:13 PM IST

corruption

ಚಿತ್ರದುರ್ಗ: ಬಿಜೆಪಿ ನೇತೃತ್ವದ ಸರ್ಕಾರದ ಭ್ರಷ್ಟಾಚಾರ ಹಾಗೂ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಏ.18 ಸೋಮವಾರ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಂ.ಕೆ. ತಾಜ್‌ಪೀರ್‌ ಹೇಳಿದರು.

ಭಾನುವಾರ ಜಿಲ್ಲಾ ಕಾಂಗ್ರೇಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಶೇ. 40ರಷ್ಟು ಕಮೀಷನ್‌ ವ್ಯವಹಾರ ನಡೆಯುತ್ತಿದೆ. ಕಮೀಷನ್‌ ಇಲ್ಲದೆ ಅಭಿವೃದ್ಧಿ ಕೆಲಸಗಳೇ ನಡೆಯುತ್ತಿಲ್ಲ ಎಂದು ದೂರಿದರು.

‘ನಾನು ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ’ ಎಂದು ಹೇಳುವ ಪ್ರಧಾನಮಂತ್ರಿ ಇರುವ ಪಕ್ಷದ ನೇತೃತ್ವದ ಸರ್ಕಾರದಲ್ಲಿ ಗುತ್ತಿಗೆದಾರರು ಕಮೀಷನ್‌ ಕೊಡಲಾರದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ದುರಂತ. ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಖುದ್ದು ಪ್ರಧಾನಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಕೊನೆಗೆ ಕಮಿಷನ್‌ ಭ್ರಷ್ಟಾಚಾರಕ್ಕೆ ಬೇಸತ್ತು ಜೀವವನ್ನೇ ಕಳೆದುಕೊಳ್ಳಬೇಕಾಯಿತು. ಸಚಿವರಾಗಿದ್ದ ಈಶ್ವರಪ್ಪ ಅವರ ಮೇಲೆ ನೇರವಾಗಿ ಆರೋಪ ಮಾಡಿದರೂ ಕಾನೂನು ಕ್ರಮ ಜರುಗಿಸದೆ ರಾಜೀನಾಮೆ ಪಡೆದುಕೊಂಡು ತಿಪ್ಪೆ ಸಾರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಾಜ್‌ಪೀರ್‌ ಅಸಮಧಾನ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಹಾಲಸ್ವಾಮಿ ಮಾತನಾಡಿ, ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದ ಜನಸಾಮಾನ್ಯರು ಬದುಕುವುದೇ ದುಸ್ತರವಾಗಿದೆ. ದೇಶದಲ್ಲಿ ಬಿಜೆಪಿ ಸರ್ಕಾರ ಇರುವ ಯಾವ ರಾಜ್ಯದಲ್ಲೂ ಬಡವರ ಪರವಾಗಿ ಕೆಲಸ ಮಾಡುತ್ತಿಲ್ಲ ಎಂದರು.

ದೆಹಲಿ, ಪಂಜಾಬ್‌ ಸರ್ಕಾರಗಳು ಜನರಿಗೆ ಉಚಿತ ವಿದ್ಯುತ್‌ ನೀಡುತ್ತಿವೆ. ಆದರೆ ಬಿಜೆಪಿ ಬಾಯಲ್ಲಿ ಮಾತ್ರ ಬಡವರ ಪರ, ಭ್ರಷ್ಟಾಚಾರ ವಿರೋಧವಾಗಿ ಮಾತನಾಡುತ್ತಾ, ಅನಾಚಾರ ಮಾಡುತ್ತಿದೆ. ಈ ಎಲ್ಲಾ ಕಾರಣಗಳನ್ನಿಟ್ಟುಕೊಂಡು ಏ. 18ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಗಾಂಧಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಇದರ ನೇತೃತ್ವವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಆಹಮ್ಮದ್‌ ವಹಿಸಲಿದ್ದಾರೆ. ಆಟೋ ಚಾಲಕರು, ಖಾಸಗಿ ಬಸ್‌ ಮಾಲೀಕರ ಸಂಘ, ಟ್ಯಾಕ್ಸಿ ಚಾಲಕರು ಸೇರಿದಂತೆ ಹಲವು ಸಂಘ-ಸಂಸ್ಥೆಗಳಿಗೆ ಪ್ರತಿಭಟನೆಯಲ್ಲಿ ಭಾಗವಹಿಸಲು ಮನವಿ ಮಾಡಿದ್ದೇವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್‌ಕುಮಾರ್‌, ಮೈಲಾರಪ್ಪ, ನಗರ ಕಾಂಗ್ರೆಸ್‌ ಅಧ್ಯಕ್ಷ ಲಕ್ಷ್ಮೀಕಾಂತ್‌, ಮುದಾಸಿರ್‌, ಯುವ ಮುಖಂಡ ರಘು ಇತರರು ಇದ್ದರು.

ಟಾಪ್ ನ್ಯೂಸ್

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ: ಅಶೋಕ

R. Ashok: ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

3-chitradurga

Chitradurga: ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು; ಓರ್ವ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.