ಕುಡಿಯುವ ನೀರು ಪೂರೈಸಲು ಸದಸ್ಯರ ಮನವಿ


Team Udayavani, Mar 4, 2021, 7:46 PM IST

Request of members to supply drinking water

ಹೊಳಲ್ಕೆರೆ: ಪಟ್ಟಣ ನಿವಾಸಿಗಳಿಗೆ ಸಕಾಲಕ್ಕೆ ಕುಡಿಯುವ ನೀರು ಸಿಗುತ್ತಿಲ್ಲ. ಚರಂಡಿ ಸ್ವತ್ಛತೆ ಇಲ್ಲ, ಬೀದಿ ದೀಪಗಳಿಲ್ಲದೆ ಎಲ್ಲೆಡೆ ಕತ್ತಲೆ, ತಿಂಗಳು ಕಳೆದರೂ ಕಸದ ವಿಲೇವಾರಿ ಇಲ್ಲ. ಹೀಗೆ ಪುರಸಭೆ ಸದಸ್ಯರು ಶಾಸಕ ಎಂ.ಚಂದ್ರಪ್ಪ ಮುಂದೆ ಅಳಲು ತೋಡಿಕೊಂಡರು. ಪಟ್ಟಣ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಮಾತನಾಡಿ, ಜನರ ಕೆಲಸವನ್ನುಜನಪ್ರತಿನಿ ಧಿಗಳೇ ಹೊಣೆಗಾರಿಕೆ ಹೊತ್ತು  ಮಾಡಬೇಕು. ಸಿಬ್ಬಂದಿ ಬೆನ್ನು ಬಿದ್ದು ಕೆಲಸ ತೆಗೆದುಕೊಳ್ಳಬೇಕು. ಕೆಲಸ ಮಾಡದವರನ್ನುಶಾಶ್ವತವಾಗಿ ಮನೆಗೆ ಕಳುಹಿಸಿ ಎಂದು ಖಡಕ್‌ ಉತ್ತರ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ಇದೆ. ನೀರಿನ ಸಿಬ್ಬಂದಿ ವಾರದಲ್ಲಿ 2 ದಿನ ನೀರು ಪೂರೈಕೆ ಮಾಡಬೇಕು. ಇಲ್ಲವಾದಲ್ಲಿ ಮನೆ ಕಳುಹಿಸಿ ಎಂದ ಶಾಸಕರು, ಇಲ್ಲಿನ ಸಮಸ್ಯೆಅರಿತು 300 ಕೋಟಿ ಅನುದಾನದಲ್ಲಿ ಕುಡಿಯುವ ನೀರಿನ ಶಾಶ್ವತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮಾರಿಕಣಿವೆಯಿಂದ ನೀರು ತರಲಾಗುತ್ತದೆ. ಅದಕ್ಕಾಗಿ 5 ಲಕ್ಷ ಲೀ ನೀರಿನ ಸಾಮರ್ಥ್ಯವಿರುವ 1 ಟ್ಯಾಂಕ್‌ ಕಟ್ಟಲಾಗಿದೆ. ಇನ್ನೊಂದು ಕಟ್ಟಲಿದ್ದೇವೆ. 50 ಲಕ್ಷ ಹಣದಲ್ಲಿ ಹೊಂಡವನ್ನು ಅಭಿವೃದ್ಧಿಗೊಳಿಸಿ ನೀರು ಶೇಖರಣೆ ಮಾಡಲಾಗುತ್ತದೆ. ಕೆರೆಗಳಿಗೆ ನೀರು ತುಂಬಿಸಿ ಬೋರ್‌ ನೀರಿನ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದರು.

ಸದಸ್ಯ ಬಿ.ಎಸ್‌.ರುದ್ರಪ್ಪ ಮಾತನಾಡಿ, ಕಳೆದ ಸಭೆಯಲ್ಲಿ ನಡೆದ ಯಾವುದೇ ರೆಗ್ಯೂಲೆಶನ್‌ ಬರೆಯುತ್ತಿಲ್ಲ. ಕಳೆದ ಸಭೆಯಲ್ಲಿಮಂಡಿಸಿದ ವಿಷಯಗಳೇ ಪ್ರಸ್ತಾವವಾಗುತ್ತಿಲ್ಲ  ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸದಸ್ಯ ವಿಜಯಸಿಂಹ ಖಾಟ್ರೋತ್‌ ಮಾತನಾಡಿ, ಸಭೆಯಲ್ಲಿ ಅಜಂಡವೇ ಇಲ್ಲ. ಸರಿಯಾಗಿ ಮಾಹಿತಿ ಇಲ್ಲದೆ ಸಭೆನಡೆಸಿ ಸದಸ್ಯರಿಗೆ ಮಾಹಿತಿ  ನೀಡುವಲ್ಲಿಇಲ್ಲಿನ ಸಿಬ್ಬಂದಿ ವಂಚಿಸುತ್ತಿದ್ದಾರೆ ಎಂದು ದೂರಿದರು.

ಸೈಯದ್‌ ಸಜೀಲ್‌ ಮಾತನಾಡಿ, ಜಮೀನುಗಳನ್ನು ನಿವೇಶನಗಳಾಗಿ ಪರಿವರ್ತಿಸುವ ಬೆಂಗಳೂರಿನ ಉದ್ಯಮಿಗಳು ಬಡಾವಣೆಗಳಿಗೆ ಬೇಕಾದ ಸೌಲಭ್ಯ ಕಲ್ಪಿಸುತ್ತಿಲ್ಲ. ಪೈಲ್‌ಲೈನ್‌, ವಿದ್ಯುತ್‌ ದೀಪ ಹಾಕಿರುವ ಮಾಹಿತಿ ನಕಾಶೆಯಲ್ಲಿ ಇರಲಿದ್ದು, ಮೂಲ ಸೌಲಭ್ಯಗಳಿಲ್ಲದ ಬಡಾವಣೆಗೆ ಖಾತೆ ನೀಡಬಾರದು ಎಂದು ತಿಳಿಸಿದರು. ಉಪಾಧ್ಯಕ್ಷ ಕೆ.ಸಿ.ರಮೇಶ್‌ ಪಟ್ಟಣದ ಸಂಪೂರ್ಣ ಮಾಹಿತಿ ಸಂಗ್ರಹಿಸಬೇಕು. ಯಾವ ವಾರ್ಡ್‌ಗಳಲ್ಲಿ ಯಾವೆಲ್ಲ ಸಮಸ್ಯೆಗಳಿವೆ ಎನ್ನುವ ಕಡತ ಸಿದ್ಧಪಡಿಸಬೇಕು ಎಂದರು.

ಪುರಸಭೆ ಅಧ್ಯಕ್ಷ ಆರ್‌.ಎ.ಅಶೋಕ್‌ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಪಿ.ಎಚ್‌. ಮುರುಗೇಶ್‌, ಸೈಯದ್‌ ಮನ್ಸೂರ್‌, ಡಿ.ಎಸ್‌. ವಿಜಯ್‌, ಪಿ.ಆರ್‌.ಮಲ್ಲಿಕಾರ್ಜುನ್‌, ಎಚ್‌. ಆರ್‌.ನಾಗರತ್ನವೇದಮೂರ್ತಿ, ಸುಧಾ ಬಸವರಾಜ್‌, ಸವಿತ ನರಸಿಂಹ ಖಾಟ್ರೋತ್‌, ಮಮತ ಜಯಸಿಂಹ ಖಾಟ್ರೋತ್‌, ಶಭೀನ ಆಶ್ರಫ್‌ವುಲ್ಲಾ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

CTD-Vanivilasa

Chitradurga: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರ ಬಿಡಿಗಾಸು ಕೊಟ್ಟಿಲ್ಲ: ಸಿಎಂ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.