ಬಸ್, ಕಾರು ಹಾಗು ಕ್ಯಾಂಟರ್ ವಾಹನಗಳ ನಡುವೆ ಸರಣಿ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
Team Udayavani, Nov 14, 2020, 12:32 PM IST
ಚಿತ್ರದುರ್ಗ: ಶನಿವಾರ ಬೆಳಗಿನ ಜಾವ ಬಸ್, ಕಾರು ಹಾಗು ಕ್ಯಾಂಟರ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪಟ್ರೇಹಳ್ಳಿ ಬಳಿ ಗ್ರೀನ್ ಲ್ಯಾಂಡ್ ಹೋಟೆಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ 04ರಲ್ಲಿ ಈ ಅಪಘಾತ ನಡೆದಿದೆ.
ಖಾಸಗಿ ಬಸ್ ಇಂಡಿಕಾ ಕಾರು, ಮಾರುತಿ ಓಮ್ನಿ, ಕ್ಯಾಂಟರ್ ವಾಹನ ಹಾಗು ಟಾಟಾ ಏಸ್ ನಡುವೆ ಅಪಘಾತ ಸಂಭವಿಸಿದ್ದು ಓಮಿನಿ ಕಾರಿನಲ್ಲಿದ್ದ ಹಾವೇರಿ ಮೂಲದ ಲತಾ (28) ಮತ್ತು ಬೆಂಗಳೂರಿನ ಅತ್ತಿಬೆಲೆ ನಿವಾಸಿ ಟಾಟಾ ಏಸ್ ಚಾಲಕ ಶಶಿಕುಮಾರ್ (26) ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ರೈಲಿನಿಂದ ಆಕಸ್ಮಿಕವಾಗಿ ತುಂಗಾ ನದಿಗೆ ಬಿದ್ದ ಯುವತಿ: ಶವ ಪತ್ತೆ
ಶೃತಿ (03), ಜ್ಯೋತಿ (25), ಜಾಗೃತಿ (04), ದ್ಯಾಮಣ್ಣ (24) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಖಾಸಗಿ ಬಸ್ ಚಾಲಕನ ಅಜಾಗರೂಕತೆಯೇ ಸರಣಿ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ವಿಷಯ ತಿಳಿದ ತಕ್ಷಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Actor Darshan: ನಟ ದರ್ಶನ್ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ಇಂದು ವಿಚಾರಣೆ
Assembly By Election: ಗೆದ್ದು ಬನ್ನಿ; ಕಾಂಗ್ರೆಸ್ ಸಚಿವರಿಗೆ ರಣದೀಪ್ ಸುರ್ಜೇವಾಲ ಹುಕುಂ
Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ
ಕನ್ನಡದಲ್ಲಿ ಎಂಜಿನಿಯರಿಂಗ್ ಓದಲು ಹಿಂದೇಟು! ಕಳೆದ 4 ವರ್ಷಗಳಲ್ಲೂ ಪ್ರವೇಶಕ್ಕೆ ನಿರಾಸಕ್ತಿ
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.