![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Sep 24, 2019, 2:17 PM IST
ಚಿತ್ರದುರ್ಗ: ವೀರಶೈವ ಸಮಾಜ ಹೊಡೆಯುವ ಕೆಲಸಕ್ಕೆ ಕೈ ಹಾಕಿದವರು ಕೈ ಸುಟ್ಟುಕೊಂಡಿದ್ದಾರೆ ಎಂದು ಮಾಜಿ ಸಚಿವ ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.
ಸಿರಿಗೆರೆ ತರಳಬಾಳು ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಾನು ವೀರಶೈವ ಮಹಾಸಭಾ ಅಧ್ಯಕ್ಷನಾಗಬೇಕು ಎಂಬ ಪ್ರಸ್ತಾಪ ಬಂದಾಗ ನಿರಾಕರಿಸಿದ್ದೆ. ಈ ಬಗ್ಗೆ ಸಿರಿಗೆರೆ ಗುರುಗಳ ಬಳಿ ಹೇಳಿದಾಗ ಜವಾಬ್ದಾರಿ ತೆಗೆದುಕೊಳ್ಳಲು ಸೂಚಿಸಿದರು.
ಮಹಾಸಭಾ ಅಧ್ಯಕ್ಷನಾದ ನಂತರ ಜಗಳ ಪ್ರಾರಂಭ ಆಯ್ತು. ವೀರಶೈವ ಸಮಾಜ ಹೊಡೆಯುವ ಕೆಲಸ ಮಾಡಿದರು. ಈ ಕೆಲಸ ಮಾಡಿ ಯಾರು ಕೈ ಸುಟ್ಟುಕೊಂಡಿದ್ದಾರೆ ಎನ್ನುವುದು ನಿಮಗೆ ಗೊತ್ತಿದೆ ಎಂದು ಸಭಿಕರಿಗೆ ಹೇಳಿದರು.
ವೀರಶೈವರು ಒಳಪಂಗಡಗಳನ್ನು ಮರೆತು ಎಲ್ಲರೂ ಒಂದೇ ಎಂಬ ಭಾವನೆ ಹೊಂದಬೇಕು ಎಂದರು.
ಈ ಹಿಂದೆ ನಡೆದ ಜನಗಣತಿಯಂತೆ ರಾಜ್ಯದಲ್ಲಿ 2 ಕೋಟಿ ವೀರಶೈವರಿದ್ದೆವು. ಆದರೆ, ಇತ್ತೀಚೆಗೆ ಎಲ್ಲ ಒಳಪಂಗಡಗಳ ಹೆಸರು ಬರೆಸಿ 80 ಲಕ್ಷಕ್ಕೆ ಬಂದಿದ್ದೇವೆ. ಮುಂದಿನ ದಿನಗಳಲ್ಲಿ ವೀರಶೈವ ಎಂದು ಬರೆಯಿಸಿ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಮನವಿ ಮಾಡಿದರು.
ಸಿರಿಗೆರೆ ತರಳಬಾಳು ಡಾ.ಶ್ರೀ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಕೆರೆಗಳಿಗೆ ನೀರು ತುಂಬಿಸಿದಂತೆ, ವೀರಶೈವ ಒಳಪಂಗಡಗಳನ್ನು ಒಂದುಗೂಡಿಸುವ ಕೆಲಸ ಮಾಡಿದರೆ ನಮಗೆ ಹೆಮ್ಮೆ ಎಂದು ಶಾಮನೂರು ಅಭಿಪ್ರಾಯಪಟ್ಟರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.