Siddaramaiah ಭಂಡತನದಿಂದ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ: ಗೋವಿಂದ ಕಾರಜೋಳ
ರಾಮಕೃಷ್ಣ ಹೆಗಡೆ ಅವರನ್ನ ಸಿದ್ದರಾಮಯ್ಯ ಒಮ್ಮೆ ನೆನಪು ಮಾಡಿಕೊಳ್ಳಬೇಕು
Team Udayavani, Sep 25, 2024, 2:10 PM IST
ಚಿತ್ರದುರ್ಗ : ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್ ನೀಡಿರುವುದು ನಿರೀಕ್ಷಿತ ಆದೇಶ, ತಪ್ಪು ಮಾಡಿದ್ದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಚಿತ್ರದುರ್ಗ ಬಿಜೆಪಿ ಸಂಸದ ಗೋವಿಂದ ಕಾರಜೋಳ ಬುಧವಾರ(ಸೆ25)ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ತಪ್ಪು ಮಾಡಿದ್ದಾರೆ. ಆದರೆ ಭಂಡತನದಿಂದ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಬೇರೆಯವರ ಮೇಲೆ ಬೊಟ್ಟು ಮಾಡಿ ತೋರುತ್ತಿದ್ದಾರೆ.ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ಕೌಟುಂಬಿಕ ಲಾಭಕ್ಕೆ, ಸ್ವಾರ್ಥಕ್ಕೆ ಬಲಿಯಾದ ಸಿಎಂ ಸಿದ್ದರಾಮಯ್ಯ” ಎಂದು ಕಿಡಿ ಕಾರಿದರು.
‘ಸಿಎಂ ಸ್ಥಾನಕ್ಕೆ ಕೂಡಲೇ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು. ಕಾಂಗ್ರೆಸ್ ಪಕ್ಷವೇ ಜಾರಿಗೆ ತಂದ ಪಾರದರ್ಶಕ ಕಾಯ್ದೆಯಲ್ಲಿ ಅವರೇ ಸಿಲುಕಿದ್ದಾರೆ.ಕಾನೂನು ಕ್ರಮವನ್ನ ಅವರೇ ಎದುರಿಸುವ ಸ್ಥಿತಿ ಬಂದಿದೆ. ಮಾಹಿತಿ ಹಕ್ಕು ಕಾರ್ಯಕರ್ತರ ಹೋರಾಟಕ್ಕೆ ಸಿಕ್ಕಂತ ಜಯವಾಗಿದ್ದು, ಈಗಾಗಲೇ ಸಾಕಷ್ಟು ವಿಳಂಬ ಆಗಿದೆ. ಸಿದ್ದರಾಮಯ್ಯ ಅವರು ಗೌರವದಿಂದ ರಾಜೀನಾಮೆ ನೀಡಬೇಕು’ ಎಂದರು.
”ರಾಜ್ಯದಲ್ಲಿ ಅಪಾದನೆ ಬಳಿಕ ಸಾಕಷ್ಟು ಮಂದಿ ರಾಜೀನಾಮೆ ಕೊಟ್ಟ ಉದಾಹರಣೆ ಇದೆ. ರಾಮಕೃಷ್ಣ ಹೆಗಡೆ ಟೆಲಿಫೋನ್ ಕದ್ದಾಲಿಕೆ ಅಪಾದನೆ ಬಂದಾಗ ನೇರವಾಗಿ ಬಂದು ರಾಜೀನಾಮೆ ಕೊಟ್ಟರು. ಸಿದ್ದರಾಮಯ್ಯ ಅವರು ರಾಮಕೃಷ್ಣ ಹೆಗ್ಡೆ ಗರಡಿಯಲ್ಲೇ ಬೆಳೆದವರು.ರಾಮಕೃಷ್ಣ ಹೆಗಡೆ ಅವರನ್ನ ಸಿದ್ದರಾಮಯ್ಯ ಒಮ್ಮೆ ನೆನಪು ಮಾಡಿಕೊಳ್ಳಬೇಕು. ಈ ದೇಶದ ಪ್ರಧಾನಿ ಆಗಿದ್ದಾಗ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ರೈಲ್ವೆ ಅಪಘಾತ ಆದಾಗ ರಾಜೀನಾಮೆ ಕೊಟ್ಟವರು” ಎಂದರು.
”ಸಿದ್ದರಾಮಯ್ಯ ಅವರದ್ದು ಒಂದೇ ಹಗರಣ ಅಲ್ಲ, ಮುಡಾ ಮುಗಿಯಿತು ಮುಂದೆ ವಾಲ್ಮೀಕಿ ಹಗರಣ ಇದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ವಿರುದ್ಧ ಹರಿಯಾಣದಲ್ಲಿ ಪ್ರಧಾನಿ ಮೋದಿ ತೀವ್ರ ವಾಗ್ದಾಳಿ
Shiroor landslide: ಕೊನೆಗೂ 71 ದಿನಗಳ ಬಳಿಕ ಅರ್ಜುನ್ ಲಾರಿ ಹಾಗೂ ಮೃತದೇಹ ಪತ್ತೆ
Siddaramaiah ಪತ್ನಿ ಮುಗ್ದ, ಸಾತ್ವಿಕ ಹೆಣ್ಣು ಮಗಳು; ಅನ್ಯಾಯವಾಗಬಾರದು: ಈಶ್ವರಪ್ಪ
Siddaramaiah ಬೆಂಬಲಿಸಿ ಅಹಿಂದದಿಂದ ಹುಬ್ಬಳ್ಳಿ-ಬೆಂಗಳೂರು ಜಾಗೃತಿ ಜಾಥಾ
Kalaburagi: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಸರಕಾರಗಳ ಮೇಲೆ ಒತ್ತಡ, ಬೃಹತ್ ಸಮ್ಮೇಳನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kodailbail: ಕೆ.ಎಸ್.ರಾವ್ ರಸ್ತೆ; ಪಾದಚಾರಿಗಳಿಗಿಲ್ಲ ಸುರಕ್ಷತೆ !
Pushpa 2: ಅಲ್ಲು ಅರ್ಜುನ್ ʼಪುಷ್ಪ-2ʼನಿಂದ ಖ್ಯಾತ ನಟಿ ಔಟ್
Netravati Trek: ದಿ ನೆಕ್ಸ್ಟ್ ಸ್ಟಾಪ್ ಈಸ್ ನೇತ್ರಾವತಿ ಪೀಕ್!
Mangaluru: ಟ್ರಾಫಿಕ್ ಸಮಸ್ಯೆ: ಶಾಲಾ ಸಮಯ ವ್ಯತ್ಯಾಸ ಸೂತ್ರ ಮತ್ತೆ ಚರ್ಚೆಗೆ
ವಿದ್ಯುತ್ ಪರಿವರ್ತಕದ ಬಳಿ ಮೇಯುತ್ತಿದ್ದ 2 ಎಮ್ಮೆಗಳಿಗೆ ವಿದ್ಯುತ್ ಪ್ರವಹಿಸಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.