![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 14, 2022, 10:22 AM IST
ಚಿತ್ರದುರ್ಗ: ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲರ್ ಢಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ನಡೆದಿದೆ.
ಮೃತರಲ್ಲಿ ಬೆಂಗಳೂರು ಮೂಲದ ಶ್ವೇತಾ (24 ವ) ಗುರುತು ಪತ್ತೆಯಾಗಿದೆ. ಮತ್ತೊಬ್ಬ ವ್ಯಕ್ತಿ ಟೆಂಪೊ ಟ್ರಾವೆಲರ್ ಕ್ಲೀನರ್ ಮೃತನಾಗಿದ್ದು, ಗುರುತು ಪತ್ತೆಯಾಗಿಲ್ಲ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಹಿರಿಯೂರು ತಾಲ್ಲೂಕಿನ ಕೆ.ಆರ್.ಹಳ್ಳಿ ಗೇಟ್ ಸಮೀಪದ ಶಾಹಿ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಬಳಿ ಸೋಮವಾರ ಬೆಳಗಿನ ಜಾವ ಘಟನೆ ನಡೆದಿದೆ.
ಇದನ್ನೂ ಓದಿ:ಭೋಪಾಲ್ನಲ್ಲಿ ಮದ್ಯದಂಗಡಿಯನ್ನು ಧ್ವಂಸಗೊಳಿಸಿದ ಬಿಜೆಪಿ ನಾಯಕಿ ಉಮಾಭಾರತಿ; ವಿಡಿಯೋ
ಟೆಂಪೋ ಟ್ರಾವೆಲರ್ ಗೋಕರ್ಣದಿಂದ ಬೆಂಗಳೂರು ಕಡೆ ಹೋಗುವಾಗ ಈ ಅವಘಡ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಶ್ವೇತಾ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಮಹಿಳೆಯರು ಎಂಟು ಜನ ಪುರುಷರು ಗೋಕರ್ಣಕ್ಕೆ ಪ್ರವಾಸ ಹೋಗಿ ವಾಪಾಸಾಗುವಾಗ ಈ ಅವಘಡ ನಡೆದಿದೆ ಎನ್ನಲಾಗಿದೆ.
ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.