Holalkere: ರಾಷ್ಟ್ರ ಪ್ರಶಸ್ತಿ ತಂದುಕೊಟ್ಟ ಗರಿಮೆ ಪುರಸಭೆಯ ಪೌರಕಾರ್ಮಿಕರಿಗೆ ಸಲ್ಲಬೇಕು


Team Udayavani, Sep 23, 2023, 3:49 PM IST

10–holalkere

ಹೊಳಲ್ಕೆರೆ: ಪುರಸಭೆಯ ವ್ಯಾಪ್ತಿಯ ಸ್ವಚ್ಛತೆ ಕಾಪಾಡುವ ಸರ್ಕಾರದ ಸೈನಿಕರೇ ಪೌರಕಾರ್ಮಿಕರು. ಸ್ವಚ್ಛತೆ ಮೂಲಕ ಪುರಸಭೆಗೆ ರಾಷ್ಟ್ರೀಯ ಪ್ರಶಸ್ತಿ ತಂದುಕೊಟ್ಟ ಗರಿಮೆ ಇಲ್ಲಿನ ಪುರಸಭೆಯ ಪೌರಕಾರ್ಮಿಕರಿಗೆ ಸಲ್ಲಿಸಬೇಕೆಂದು ಪುರಸಭೆಯ ಮುಖ್ಯಾಧಿಕಾರಿ ಎ ವಾಸಿಂ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಪಟ್ಟಣದ ಸಂವಿಧಾನ ಸೌದ ಆವರಣದಲ್ಲಿ ಸೆ.23ರ ಶನಿವಾರ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪುರಸಭೆಯ ವ್ಯಾಪ್ತಿಯಲ್ಲಿ ಸ್ವಚ್ಛತೆ, ನೈರ್ಮಲ್ಯತೆ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಬೇಕಾದ ಎಲ್ಲಾ ಕಾರ್ಯಕ್ರಮಗಳನ್ನು ಕೈಗೊಳ್ಳಲು ಪುರಸಭೆಯ ಪೌರಕಾರ್ಮಿಕರು, ಸಿಬ್ಬಂದಿಗಳ ಪರಸ್ಪರ ಪ್ರೋತ್ಸಾಹ ಹಾಗೂ ಅವಿರತ ಪರಿಶ್ರಮದ ಪರಿಣಾಮವಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ.

ಪುರಸಭೆಯಲ್ಲಿರುವ ಪೌರಕಾರ್ಮಿಕರ, ಪ್ರಾಮಾಣಿಕತೆ, ದಕ್ಷತೆ, ನಿಸ್ವಾರ್ಥ ಸೇವಾ-ಮನೋಭಾವನೆಯಿಂದ ಸಮಾಜದ ಸ್ವಚ್ಛತೆಯನ್ನು ಕೈಗೊಳ್ಳುವ ಮೂಲಕ ಆರೋಗ್ಯವಂತ ಸಮಾಜವನ್ನು ಕಟ್ಟುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಹಾಗಾಗಿ ಪೌರಕಾರ್ಮಿಕರ ದಿನಾಚರಣೆಯ ಹಿನ್ನೆಲೆ ಸಮಾಜದ ಪ್ರತಿಯೊಬ್ಬರು ಗೌರವ ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುವ ಅಗತ್ಯವಿದೆ ಎಂದು ತಿಳಿಸಿದರು.

ಪುರಸಭೆಯ ಮಾಜಿ ಅಧ್ಯಕ್ಷರು ಹಾಲಿ ಸದಸ್ಯ ಬಿ.ಎಸ್. ರುದ್ರಪ್ಪ ಮಾತನಾಡಿ, ಪೌರಕಾರ್ಮಿಕರು ಸಮಾಜದ ಕಣ್ಣುಗಳಿದ್ದಂತೆ. ಅವರ ಪರಿಶ್ರಮದಿಂದ ಪಟ್ಟಣ ಸ್ವಚ್ಛ ಸುಂದರವಾಗಿ ಕಾಣಲು ಸಾಧ್ಯ. ಹಾಗಾಗಿ ಪಟ್ಟಣದಲ್ಲಿರುವ ಪ್ರತಿಯೊಬ್ಬರು ಪೌರಕಾರ್ಮಿಕರನ್ನು ಸ್ಮರಿಸುವ ಮೂಲಕ ಆಭಿನಂದಿಸಬೇಕು. ಈ ನಿಟ್ಟಿನಲ್ಲಿ ಪೌರಕಾರ್ಮಿಕರ ದಿನಾಚರಣೆ ಮಹತ್ವ ಪಡೆದುಕೊಂಡಿದ್ದು, ನಾವೆಲ್ಲರೂ ಅವರಿಗೆ ಅಭಿನಂದನೆ ಸಲ್ಲಿಸಬೇಕಾಗಿದೆ ಎಂದು ತಿಳಿಸಿದರು.

ಹಿರಿಯ ಸದಸ್ಯರು ಮಾಜಿ ಉಪಾಧ್ಯಕ್ಷ ಕೆ.ಸಿ. ರಮೇಶ್ ಮಾತನಾಡಿ, ಪೌರಕಾರ್ಮಿಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು. ಅವರಿಗೆ ಪೂರಕವಾದ ಸೌಲಭ್ಯವನ್ನು ಕಲ್ಪಿಸಿ ಕೊಡಬೇಕು. ಪೌರಕಾರ್ಮಿಕರಿಗೆ ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಹೆಚ್ಚಿನ ನೆರವು ನೀಡಲು ಮುಂದಾಗಬೇಕೆಂದರು.

ಪುರಸಭೆ ಸದಸ್ಯ ವಿಜಯಸಿಂಹ ಮಾತನಾಡಿ, ಪೌರಕಾರ್ಮಿಕರು ಪುರಸಭೆಯ ಸ್ವಚ್ಛತೆ ಕಾಪಾಡುವ ಸೈನಿಕರು. ಅವರ ಆರೋಗ್ಯ ಕಾಪಾಡುವ ಹೊಣೆಗಾರಿಕೆ ನಮ್ಮ ಮೇಲಿದೆ. ನಮ್ಮ ಸಮಾಜದ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಾಕಷ್ಟು ಶ್ರಮಿಸುತ್ತಾರೆ. ಹಾಗಾಗಿ ಪೌರಕಾರ್ಮಿಕರ ಹೊಣೆಗಾರಿಕೆಯನ್ನು ಸರ್ಕಾರದ ಜೊತೆ ಸಮಾಜದಲ್ಲಿರುವ ಪ್ರತಿಯೊಬ್ಬರು ಹೊಂದಬೇಕಾಗಿದೆ. ಪೌರಕಾರ್ಮಿಕರಿಗೆ ಬೇಕಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕಾಗಿದೆ. ಪೌರಕಾರ್ಮಿಕರು ಶಿಸ್ತಿನ ಸಿಪಾಯಿ ರೀತಿಯಲ್ಲಿ ಸಮಾಜವನ್ನು ಆರೋಗ್ಯವಂತವಾಗಿರಲು ಶ್ರಮಿಸುತ್ತಾರೆ ಎಂದು ಹೇಳಿದರು.

ಪುರಸಭೆಯ ಸದಸ್ಯ ಎಚ್.ಆರ್. ನಾಗರತ್ನ ವೇದಮೂರ್ತಿ ಮಾತನಾಡಿ, ಪುರಸಭೆಯ ಪೌರಕಾರ್ಮಿಕರು ಹಬ್ಬದ ರೀತಿಯಲ್ಲಿ ದಿನಾಚರಣೆಯನ್ನು ಹಮ್ಮಿಕೊಳ್ಳಬೇಕು. ಸಾಹಿತ್ಯ ಮತ್ತಿತರರ ಅನನ್ಯ ಪ್ರತಿಭೆಗಳನ್ನು ಹೊರತರಲು ದಿನಾಚರಣೆಗಳು ಅವಕಾಶ ನೀಡಬೇಕು ಎಂದು ತಿಳಿಸಿದರು.

ಹಿರಿಯ ಪೌರಕಾರ್ಮಿಕರಾದ ಕಮಲಮ್ಮ, ಆರೋಗ್ಯ ಅಧಿಕಾರಿ ಪ್ರಶಾಂತ್, ಪುರಸಭೆಯ ಸಿಬ್ಬಂದಿಗಳಾದ ನಾಗಭೂಷಣ್, ನೌಶಾದ್, ಕಿಶೋರ್, ಶೌಕತ್,  ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಇದೇ ಸಮಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಪೌರಕಾರ್ಮಿಕರನ್ನು ಪುರಸಭೆ ವತಿಯಿಂದ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ: ಅಶೋಕ

R. Ashok: ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

3-chitradurga

Chitradurga: ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು; ಓರ್ವ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.