ಶರಣರ ಜಯಂತಿ ಆಚರಣೆ ಅನಗತ್ಯ


Team Udayavani, Aug 13, 2021, 6:38 PM IST

13-22

ಶಿವಮೊಗ್ಗದ ಸಹಚೇತನ ನಾಟ್ಯಾಲಯ ಕೇಂದ್ರದ ಕಲಾವಿದರು ವಚನ ನೃತ್ಯ ಪ್ರದರ್ಶಿಸಿದರು

ಹೊಸದುರ್ಗ: ಶರಣರು ಜಾತಿಗೆ ಅಂಟಿಕೊಳ್ಳದೆ ಜಾತ್ಯತೀತರಾಗಿ ಬಾಳಿದವರು. ಆದರೆ ಇಂದು ಅದೇ ಶರಣರ ಹೆಸರಿನಲ್ಲಿ ಜಾತಿಯ ಪೋಷಣೆ ನಡೆಯುತ್ತಿರುವುದು ವಿಷಾದನೀಯ ಎಂದು ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಸಾಣೇಹಳ್ಳಿಯ ತರಳಬಾಳು ಜಗದ್ಗುರು ಶಾಖಾ ಮಠದಿಂದ ಆಯೋಜಿಸಿರುವ “ಮತ್ತೆ ಕಲ್ಯಾಣ’ ಅಂತರ್ಜಾಲ ಉಪನ್ಯಾಸ ಮಾಲಿಕೆಯ 12 ನೇ ದಿನದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು. ಯಾವುದೇ ಶರಣರ, ಮಹಾತ್ಮರ ಜಯಂತಿಗಳನ್ನು ಸರಕಾರ ಮಾಡಬೇಕಿಲ್ಲ, ರಜೆ ನೀಡಬೇಕಿಲ್ಲ. ಹಾಗೆ ಮಾಡಿದರೆ ಅವರ ಕಾಯಕ ಶ್ರದ್ಧೆಯನ್ನು ಕಡೆಗಣಿಸಿದ ಹಾಗೆ ಆಗುತ್ತದೆ ಎಂದರು.

ಜಯಂತಿಗಳನ್ನು ಆಚರಿಸುವ ಹಣದಲ್ಲಿ ಶರಣರ, ಮಹಾತ್ಮರ ವಚನ-ಮಾತು-ಆಲೋಚನೆಗಳನ್ನು ಚಿಕ್ಕ ಪುಸ್ತಕಗಳಲ್ಲಿ ಪ್ರಕಟಿಸಬೇಕು. ಅವುಗಳನ್ನು ಸಾರ್ವಜನಿಕರಿಗೆ ಅದರಲ್ಲೂ ಮಕ್ಕಳಿಗೆ ಸಿಗುವಂತೆ ಮಾಡಿದರೆ ಜಯಂತಿಗಳ ಆಚರಣೆ ಅರ್ಥಪೂರ್ಣವಾಗುವುದು ಎಂದು ಅಭಿಪ್ರಾಯಪಟ್ಟರು.

ಮಡಿವಾಳ ಮಾಚಿದೇವರದು ಬಿಜಾಪುರ ಜಿಲ್ಲೆಯ ಹಿಪ್ಪರಿಗಿ ಗ್ರಾಮ. ಕಾರ್ಯಕ್ಷೇತ್ರ ಕಲ್ಯಾಣ. ಮಲಿನವಾದ ಬಟ್ಟೆಗಳನ್ನು, ಮನಸ್ಸುಗಳನ್ನು ಮಡಿ ಮಾಡುವ ಕಾಯಕ. ಭಕ್ತರಲ್ಲದ ಭವಿಗಳ ಬಟ್ಟೆ ತೊಳೆಯುವುದಿಲ್ಲ ಎನ್ನುವುದು ಅವರ ಪ್ರತಿಜ್ಞೆ. ಕಲಿದೇವರದೇವ ಅಂಕಿತ. ಇವರ 346 ವಚನಗಳು ದೊರೆತಿವೆ. ಆಚಾರ, ವಿಚಾರ, ಏಕದೇವ ನಿಷ್ಠೆಗೆ ಹೆಸರಾದವರು. ಸ್ವಾಭಿಮಾನಿಯಾಗಿ ಇದ್ದದ್ದನ್ನು ಇದ್ದ ಹಾಗೆ ಹೇಳಿ ಜನರ ಅಂಕು ಡೊಂಕುಗಳನ್ನು ತಿದ್ದುವವರು ಗಣಾಚಾರಿ. ಅವರ ವಚನಗಳಲ್ಲಿ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡುವ ಆಶಯವಿದೆ. ಗುರುಸೇವೆ, ಲಿಂಗಪೂಜೆ, ಜಂಗಮ ದಾಸೋಹಗಳಲ್ಲಿ ಒಂದನ್ನ ಅರಿತು ಮತ್ತೂಂದನ್ನು ಆಚರಿಸಿ ಬಿಡುವಂಥದ್ದಲ್ಲ. ಇವುಗಳ ಜೊತೆಗೆ ಶರಣರ ಸಂಗವೂ ಮುಖ್ಯ ಎಂದವರು. ಇಂಥ ಸಂಗದ ಮಹತ್ವವನ್ನು ತಿಳಿಸಿದ್ದು ಅನುಭ ಮಂಟಪ ಎಂದರು.

ಉಪನ್ಯಾಸ ಮಾಲಿಕೆಯಲ್ಲಿ “ಮಡಿವಾಳ ಮಾಚಿದೇವ; ವಿಷಯದ ಕುರಿತಂತೆ ಪತ್ರಕರ್ತ, ಸಾಹಿತಿ ಮೈಸೂರಿನ ಗಣೇಶ ಅಮೀನಗಡ ಮಾತನಾಡಿ, ಶರಣರ ಜನ್ಮದಿನಗಳನ್ನು ಆಯಾ ಜಾತಿಯವರು ಮಾತ್ರ ಆಚರಿಸುತ್ತಿರುವುದು ಆ ಶರಣರ ಆಶಯಗಳಿಗೇ ವಿರುದ್ಧವಾದುದು. ಮಡಿವಾಳ ಮಾಚಿದೇವರಿಗೆ ಪ್ರಖರವಾದ ಚಿಂತನೆಗಳಿರುವುದು ಅವರ ವಚನಗಳಿಂದ ತಿಳಿಯುತ್ತದೆ. ಕಲಿದೇವರ ದೇವ ಎನ್ನುವುದು ಇವರ ವಚನಾಂಕಿತ. ಬಂಡಾಯ ಮನೋಧರ್ಮದ ಮಾಚಿದೇವರು ನಡೆ-ನುಡಿಗಳನ್ನು ಪ್ರಶ್ನಿಸುತ್ತಲೇ ಸಮಕಾಲೀನರಾಗುವರು. “ವಚನದ ರಚನೆಯ ನುಡಿವ ಬಯಲ ರಂಜಕರೆಲ್ಲ ಭಕ್ತರಪ್ಪರೇ, ವಚನ ತನ್ನಂತಿರದು, ತಾನು ವಚನದಂತಿರ ಎನ್ನುವ ಮೂಲಕ ಶಬ್ದಾಡಂಭರಿಗರನ್ನು ವಿಡಂಬಿಸಿದ್ದಾರೆ ಎಂದು ಹೇಳಿದರು.

ಚಿಕ್ಕಮಗಳೂರಿನ ವೈಷ್ಣವಿ ಎನ್‌. ರಾವ್‌ ಸ್ವಾಗತಿಸಿದರು. ಶಿವಸಂಚಾರದ ಕೆ. ಜ್ಯೋತಿ, ಕೆ. ದಾûಾಯಣಿ, ಎಚ್‌. ಎಸ್‌. ನಾಗರಾಜ್‌ ತಬಲಾ ಸಥ್‌ ನೀಡಿದರು. ಶರಣ್‌ ತಬಲಾ ಸಾಥ್‌ ನೀಡಿದರು. ಶಿವಮೊಗ್ಗದ ಸಹಚೇತನ ನಾಟ್ಯಾಲಯ ಕೇಂದ್ರದ ಕಲಾವಿದರು ವಚನ ನೃತ್ಯ ಪ್ರದರ್ಶಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.