11 ರಂದು ಬೂತ್‌ ಮಟ್ಟದಲ್ಲಿ ಮಕ್ಕಳಿಗೆ ಲಸಿಕೆ


Team Udayavani, Mar 6, 2018, 7:16 PM IST

s-3.jpg

ಚಿತ್ರದುರ್ಗ: ಜಿಲ್ಲೆಯಲ್ಲಿನ 5 ವರ್ಷದೊಳಗಿನ 1.52 ಲಕ್ಷ ಮಕ್ಕಳಿಗೆ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮದಡಿ ಮಾ.
11 ರಂದು ಬೂತ್‌ ಮಟ್ಟದಲ್ಲಿ ಮಕ್ಕಳಿಗೆ ಲಸಿಕೆ ಹಾಕುವ ಪ್ರಯತ್ನ ಮಾಡಬೇಕು ಎಂದು ಜಿಪಂ ಸಿಇಒ ಪಿ.ಎನ್‌. ರವೀಂದ್ರ
ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಎರಡನೇ ಸುತ್ತಿನ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾ. 11 ರಂದು ನಗರ, ಪಟ್ಟಣ ಹಾಗೂ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಎಲ್‌ ಕೆಜಿ, ಯುಕೆಜಿ ಮಕ್ಕಳನ್ನು ಭಾನುವಾರ ತಪ್ಪದೇ ಶಾಲೆಗೆ ಕರೆ ತಂದು ಶಿಕ್ಷಕರು ಸಹ ಹಾಜರಿದ್ದು, ಪಲ್ಸ್‌ ಪೋಲಿಯೋ ಲಸಿಕೆ ಹಾಕಿಸಬೇಕು ಎಂದರು.

ಮೊದಲ ಸುತ್ತಿನಲ್ಲಿ ಶೇ. 106 ರಷ್ಟು ಸಾಧನೆ ಮಾಡಿರುವ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಸಿಇಒ ಈ ಬಾರಿಯು ನೂರಕ್ಕೆ ನೂರಷ್ಟು
ಅರ್ಹ ಮಕ್ಕಳಿಗೆ ಲಸಿಕೆ ನೀಡಲು ಅವರು ಸೂಚನೆ ನೀಡಿದರು. ಮಾರ್ಚ್‌ 12, 13, 14 ರಂದು  ಮನೆ ಮನೆಗಳಿಗೆ ಭೇಟಿ ನೀಡಿ
ಲಸಿಕೆಯಿಂದ ವಂಚಿತರಾದ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಲು ಅಂಗನವಾಡಿ, ಆಶಾ ಕಾರ್ಯಕರ್ತೆರಿಗೆ ಸೂಚನೆ ನೀಡಬೇಕು. ಲಸಿಕೆ ಹಾಕಲಾದ ಮಕ್ಕಳಿಗೆ ಅಳಿಸಲಾರದಂತಹ ಶಾಯಿಯಿಂದ ಗುರುತು ಹಾಕುವುದು ಕಡ್ಡಾಯವಾಗಿ ಮಾಡಬೇಕೆಂದು ತಿಳಿಸಿದರು.

ಸಾರ್ವಜನಿಕ ಸ್ಥಳಗಳಾದ ಬಸ್‌ ನಿಲ್ದಾಣ, ರೈಲ್ವೆ ಸ್ಟೇಷನ್‌, ಮತ್ತಿತರ ಕಡೆ ದುಡಿಯಲು ಕೂಲಿಗಾಗಿ ಬಂದಿರುವ ಜನರ  ಜೊತೆಗಿರುವ 5 ವರ್ಷದೊಳಗಿನ ಮಕ್ಕಳನ್ನು ಗುರುತಿಸುವುದು ಹಟ್ಟಿ, ತಾಂಡಾ ಹಾಗೂ ಕೊಳಚೆ ಪ್ರದೇಶಗಳಲ್ಲಿ ವಾಸವಾಗಿರುವ ಮಕ್ಕಳನ್ನು ಅದ್ಯತೆ ಮೇಲೆ ಸಂಚಾರಿ ಲಸಿಕಾ ವಾಹನಗಳ ಮೂಲಕ ಪಲ್ಸ್‌ ಪೋಲಿಯೋ ಲಸಿಕೆ ನೀಡುವ ಬಗ್ಗೆ ಗಮನ ಹರಿಸಲಾಗುತ್ತದೆ ಎಂದರು.

ನೆರೆಯ ಪಾಕ್ತಿಸ್ತಾನ, ಆಫ್ಘಾನಿಸ್ತಾನ ದೇಶಗಳಲ್ಲಿ ಪೋಲಿಯೋ ರೋಗ ಕಂಡು ಬರುತ್ತಿರುವುದರಿಂದ ಭಾರತವು ಪೋಲಿಯೋ ಮುಕ್ತ ದೇಶವಾಗಿದ್ದರೂ ನಿರಂತರವಾಗಿ ಪಲ್ಸ್‌ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮ ಜಾರಿಯಲ್ಲಿರಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು. ಮೊದಲ ಸುತ್ತಿನ ಆಗಿರುವ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಜಿಲ್ಲೆಯ ಎಲ್ಲಾ
ಅರ್ಹ ಮಕ್ಕಳಿಗೆ ಲಸಿಕೆ ನೀಡುವ ಮೂಲಕ ವಿಶೇಷ ಸಾಧನೆ ಮಾಡಬೇಕೆಂದು ಸಿಇಒ  ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆರೋಗ್ಯ ಇಲಾಖೆ ಅಧಿಕಾರಿ ಡಾ|ಕುಮಾರಸ್ವಾಮಿ ಮಾತನಾಡಿ, ಮಾ 9 ಮತ್ತು 10ರಂದು ಚಿತ್ರದುರ್ಗ ನಗರದಲ್ಲಿ ಪಲ್ಸ್‌ ಪೋಲಿಯೋ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು. ಉಪವಿಭಾಗಾಧಿ ಕಾರಿ ವಿಜಯ್‌ ಕುಮಾರ್‌, ಜಿಲ್ಲಾ ಮಲೇರಿಯಾ
ನಿಯಂತ್ರಣಾಧಿ ಕಾರಿ ಡಾ| ಜಯಮ್ಮ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ.ಜೆ. ಅಂಥೋಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ, ಜಿಲ್ಲಾಮಟ್ಟದ ಅಧಿಕಾರಿಗಳು, ವೈದ್ಯರು ಇದ್ದರು.

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.