ಯೋಗ-ಧ್ಯಾನದಿಂದ ಸದೃಢ ಆರೋಗ್ಯ

ಶ್ರಮ ಸಂಸ್ಕೃತಿ ಮರೆತಿದ್ದರಿಂದ ಮಾನವನಿಗೆ ಒಂದಿಲ್ಲೊಂದು ರೋಗ ಬಾಧೆ: ರಂಗಪ್ಪ

Team Udayavani, May 2, 2019, 5:21 PM IST

2-MAY-38

ಚಿತ್ರದುರ್ಗ: ಯೋಗ ತರಬೇತಿ ಶಿಬಿರವನ್ನು ಆಯಿತೋಳು ಗ್ರಾಮ ಪಂಚಾಯತ್‌ ಸದಸ್ಯ ರಂಗಪ್ಪ ಉದ್ಘಾಟಿಸಿದರು.

ಚಿತ್ರದುರ್ಗ: ಹಿತಮಿತವಾದ ಆಹಾರದ ಜೊತೆಯಲ್ಲಿ ಯೋಗ, ಧ್ಯಾನಗಳ ಮೂಲಕ ಆರೋಗ್ಯ ವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದು ಗ್ರಾಮ ಪಂಚಾಯತ್‌ ಸದಸ್ಯ ರಂಗಪ್ಪ ಹೇಳಿದರು.

ತಾಲೂಕಿನ ಆಯಿತೋಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಪತಂಜಲಿ ಭಾರತ್‌ ಸ್ವಾಭಿಮಾನ್‌ ಟ್ರಸ್ಟ್‌, ಪತಂಜಲಿ ಯೋಗ ಪ್ರಚಾರಕ ಪ್ರಕಲ್ಪ ಹರಿದ್ವಾರ ಹಾಗೂ ಆಯಿತೋಳು ಗ್ರಾಮಸ್ಥರ ಸಹಯೋಗದೊಂದಿಗೆ ಏರ್ಪಡಿಸದಲಾಗಿರುವ ಐದು ದಿನಗಳ ಉಚಿತ ಯೋಗ ತರಬೇತಿ ಶಿಬಿರವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ಹಳ್ಳಿಗಳಲ್ಲೂ ಆಹಾರ ಪದ್ಧತಿ, ಜನರ ದಿನಚರಿ, ಜೀವನ ಶೈಲಿ ಎಲ್ಲವೂ ಬದಲಾಗುತ್ತಿದೆ. ಶ್ರಮ ಸಂಸ್ಕೃತಿ ಕಡಿಮೆಯಾಗುತ್ತಿದೆ. ಹಾಗಾಗಿ ಮಾನವನಿಗೆ ಸಾಕಷ್ಟು ರೋಗ ಬಾಧೆ ಕಾಡುತ್ತಿದೆ. ಶ್ರಮ ಸಂಸ್ಕೃತಿ ಅಳವಡಿಸಿಕೊಂಡರೆ ಆರೋಗ್ಯಪೂರ್ಣ ಜೀವನ ನಡೆಸಬಹುದಾಗಿದೆ ಎಂದರು.

ಜಿಲ್ಲಾ ಪತಂಜಲಿ ಯೋಗ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನಪ್ಪ ಮಾತನಾಡಿ, ಯೋಗಾಸನ ಮಾಡುವುದರಿಂದ ಸೊಂಟ ಮತ್ತು ನಮ್ಮ ದೇಹದ ಸುತ್ತಳತೆಯಲ್ಲಿ ಗಮನಾರ್ಹ ಇಳಿಕೆ ಉಂಟಾಗುತ್ತದೆ. ದೇಹದಲ್ಲಿರುವ ಇನ್ಸುಲಿನ್‌ ಪ್ರಮಾಣದಲ್ಲಿಯೂ ಬದಲಾವಣೆ ಉಂಟಾಗುತ್ತದೆ ಎಂದು ತಿಳಿಸಿದರು.

ಯೋಗ ಗುರು ರವಿ ಕೆ. ಅಂಬೇಕರ್‌ ಮಾತನಾಡಿ, ಚಿತ್ರದುರ್ಗ ಜಿಲ್ಲೆಯನ್ನು ಔಷಧ ಮುಕ್ತ ಮತ್ತು ರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಸಲುವಾಗಿ ಜಿಲ್ಲೆಯಾದ್ಯಂತ ಪ್ರತಿ ಗ್ರಾಮಗಳಲ್ಲಿ ಉಚಿತ ಯೋಗ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. 2017ರ ಅಕ್ಟೋಬರ್‌ನಿಂದ ಆರಂಭಿಸಲಾದ ಯೋಗ ಅಭಿಯಾನದಲ್ಲಿ ಸುಮಾರು 48 ಹಳ್ಳಿಗಳಲ್ಲಿ ಶಿಬಿರಗಳನ್ನು ಆಯೋಜಿಸಿ ಸಾವಿರಾರು ಜನರಿಗೆ ಯೋಗ ಕಲಿಸಿಕೊಡಲಾಗಿದೆ. ಯೋಗ ಕಲಿತವರು ಈಗ ತಾವೇ ಮನೆಯಲ್ಲಿ ಅಭ್ಯಾಸ ಮಾಡಿಕೊಂಡು ಆರೋಗ್ಯಪೂರ್ಣ ಜೀವನ ನಡೆಸುತ್ತಿದ್ದಾರೆ. ಹಾಗೆಯೇ ಮಂದಿನ ದಿನಗಳಲ್ಲಿ ನಾವು ಎಲ್ಲೆಲ್ಲಿ ಶಿಬಿರಗಳನ್ನು ಆಯೋಜಿಸುತ್ತೇವೆಯೋ ಅಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಲಾಭವನ್ನು ಪಡೆಯಬೇಕೆಂದು ಮನವಿ ಮಾಡಿದರು.

ಆಯಿತೋಳು ಗ್ರಾಮ ಪಂಚಾಯತ್‌ ಸದಸ್ಯೆ ಜಿ.ಸಿ. ಕೋಮಲ ಕ್ಯಾತಪ್ಪ, ಕಲಾವಿದರಾದ ಮಾರುತಿ, ವಿರೂಪಾಕ್ಷಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಚಿತ್ರದುರ್ಗ ಜಿಲ್ಲೆಯನ್ನು ಔಷಧ ಮುಕ್ತ ಮತ್ತು ರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಸಲುವಾಗಿ ಜಿಲ್ಲೆಯಾದ್ಯಂತ ಪ್ರತಿ ಗ್ರಾಮಗಳಲ್ಲಿ ಉಚಿತ ಯೋಗ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. 2017ರ ಅಕ್ಟೋಬರ್‌ನಿಂದ ಆರಂಭಿಸಲಾದ ಯೋಗ ಅಭಿಯಾನದಲ್ಲಿ ಸುಮಾರು 48 ಹಳ್ಳಿಗಳಲ್ಲಿ ಶಿಬಿರಗಳನ್ನು ಆಯೋಜಿಸಿ ಸಾವಿರಾರು ಜನರಿಗೆ ಯೋಗ ಕಲಿಸಿಕೊಡಲಾಗಿದೆ. •ರವಿ ಕೆ. ಅಂಬೇಕರ್‌ ಯೋಗ ಗುರು

ಟಾಪ್ ನ್ಯೂಸ್

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.