![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
Team Udayavani, Feb 4, 2018, 10:05 AM IST
ಸುಳ್ಯ: ಬೆಂಗಳೂರಿನಲ್ಲಿ ರವಿವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ನಡೆಯಲಿರುವ ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ 10,000 ಕಾರ್ಯಕರ್ತರು ತೆರಳಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಪತ್ರಕರ್ತರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪರ ಜನರ ಒಲವು ಇದೆ. ಜಿಲ್ಲೆಯಲ್ಲಿ ಎಂಟು ಸ್ಥಾನಗಳನ್ನೂ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ರಮಾನಾಥ ರೈ ಅವರು ಹೇಳಿಕೆ ಹುರುಳಿಲ್ಲದ್ದು. ಅವರು ಹಗಲು ಕನಸು ಕಾಣುತ್ತಿದ್ದು, ಜಿಲ್ಲೆಯಲ್ಲಿ ಬಿಜೆಪಿ ಎಲ್ಲ ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಅವರ ಹೇಳಿಕೆಗಳ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ನಳಿನ್ ಅವರು, ಸಚಿವ ಹೆಗಡೆ ಆಡಿದ ಮಾತುಗಳನ್ನು ಬೇರೆಯೇ ಕೋನದಲ್ಲಿ ನೋಡಿ ಅರ್ಥ ಕಲ್ಪಿಸುವ ಪ್ರಯತ್ನ ಕೆಲವರಿಂದ ಆಗುತ್ತಿದೆ ಎಂದರು.
You seem to have an Ad Blocker on.
To continue reading, please turn it off or whitelist Udayavani.