Fraud Case ಕೆನಡದ ವೀಸಾ ಕೊಡಿಸುವುದಾಗಿ ಹೇಳಿ 15 ಲಕ್ಷ ರೂ. ವಂಚನೆ
Team Udayavani, Jun 7, 2024, 9:47 PM IST
ಮಂಗಳೂರು: ಕುವೈಟ್ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿರುವ ಡೊಮಿನಿಕ್ ಕಿಶೋರ್ ಡಿ’ಸೋಜಾ ಅವರಿಗೆ ಕೆನಡದ ವೀಸಾ ಕೊಡಿಸುವುದಾಗಿ ಹೇಳಿ 15 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಅವರ ತಂದೆ ಹೆರಾಲ್ಡ್ ಡಿ’ಸೋಜಾ ಅವರು ಕಾವೂರು ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಡೊಮಿನಿಕ್ನ ಸ್ನೇಹಿತನಾದ ಮಂಗಳೂರು ಗಂಜಿಮಠ ನಿವಾಸಿ ರೋಶನ್ ನವೀನ್ ಕ್ರಾಸ್ಟೋ ಫೋನ್ ಮೂಲಕ ಸಂಪರ್ಕಿಸಿ ಕೆನಡ ದೇಶದ ವೀಸಾವನ್ನು ಆತನಿಗೆ ಪರಿಚಯವಿರುವ ಜೇಮ್ಸ್ ಡಿ’ಸೋಜಾ ಮಾಡಿಸಿಕೊಡುವುದಾಗಿ ಹಾಗೂ ಯಾರಿಗಾದರೂ ವೀಸಾ ಬೇಕಾಗಿದ್ದರೆ ತಿಳಿಸುವಂತೆ ಹೇಳಿದ್ದ.
ಅದರಂತೆ ಡೊಮಿನಿಕ್ಗೆ ರೋಶನ್ ನವೀನ್ ಕಳೆದ ಜನವರಿ ತಿಂಗಳ ಮೊದಲನೇ ವಾರದಲ್ಲಿ ಫೋನ್ ಮುಖಾಂತರ ಜೇಮ್ಸ್ ಡಿ’ಸೋಜಾನ ಪರಿಚಯ ಮಾಡಿ ಕೊಟ್ಟಿದ್ದ. 30 ಲಕ್ಷ ರೂ. ಹಣ ನೀಡಿದರೆ ಡೊಮಿನಿಕ್ ಹಾಗೂ ಅವರ ಹೆಂಡತಿಗೆ ವೀಸಾ ಮಾಡಿಕೊಡುವುದಾಗಿ ಜೇಮ್ಸ್ ತಿಳಿಸಿದ್ದ. ಅದರಲ್ಲಿ 15 ಲಕ್ಷ ರೂ. ಹಣವನ್ನು ವೀಸಾ ಮಾಡುವ ಮೊದಲು ಹಾಗೂ ಉಳಿದ 15 ಲಕ್ಷ ರೂ. ಹಣವನ್ನು ಕೆನಡ ದೇಶಕ್ಕೆ ಹೊದ ಅನಂತರ ನೀಡಬೇಕೆಂದು ತಿಳಿಸಿದ್ದ.
ಅದರಂತೆ ಸುಮಾರು 9 ಕಂತುಗಳಲ್ಲಿ 15 ಲಕ್ಷ ರೂ. ಪಾವತಿಸಿದ್ದು, ಅದರಲ್ಲಿ 5 ಲಕ್ಷ ರೂ. ಹಣವನ್ನು ಅವರ ಸಂಬಂಧಿ ಅರುಣ್ ಡೆರಿಕ್ ಮೊಂತೇರೊ ಅವರ ಖಾತೆಯ ಮೂಲಕ ಜೇಮ್ಸ್ ತಿಳಿಸಿದ ಖಾತೆಗೆ ಜಮೆ ಮಾಡಲಾಗಿದೆ. ವೀಸಾ ಪಡೆಯುವ ಹಿನ್ನಲೆಯಲ್ಲಿ ಮೇ 26ರಂದು ಐ.ಇ.ಎಲ್.ಟಿ.ಎಸ್. ಪರೀಕ್ಷೆ ಇರುವುದಾಗಿ ತಿಳಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಜೇಮ್ಸ್ಗೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿದೆ. ಹಲವು ಬಾರಿ ಪ್ರಯತ್ನಿಸಿದರೂ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಯಾವುದೇ ಉತ್ತರವನ್ನೂ ನೀಡದೆ ಹಣವನ್ನೂ ವಾಪಸು ಮಾಡದೆ ಮೋಸ ಮಾಡಿದ್ದಾನೆ. ಇದೇ ರೀತಿ ಹಲವು ಮಂದಿಗೆ ಮೋಸ ಮಾಡಿರುವ ಮಾಹಿತಿ ಇದೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.