Fraud Case ಕೆನಡದ ವೀಸಾ ಕೊಡಿಸುವುದಾಗಿ ಹೇಳಿ 15 ಲಕ್ಷ ರೂ. ವಂಚನೆ


Team Udayavani, Jun 7, 2024, 9:47 PM IST

Fraud Case ಕೆನಡದ ವೀಸಾ ಕೊಡಿಸುವುದಾಗಿ ಹೇಳಿ 15 ಲಕ್ಷ ರೂ. ವಂಚನೆ

ಮಂಗಳೂರು: ಕುವೈಟ್‌ನಲ್ಲಿ ಸೇಲ್ಸ್‌ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಮಾಡುತ್ತಿರುವ ಡೊಮಿನಿಕ್‌ ಕಿಶೋರ್‌ ಡಿ’ಸೋಜಾ ಅವರಿಗೆ ಕೆನಡದ ವೀಸಾ ಕೊಡಿಸುವುದಾಗಿ ಹೇಳಿ 15 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಅವರ ತಂದೆ ಹೆರಾಲ್ಡ್‌ ಡಿ’ಸೋಜಾ ಅವರು ಕಾವೂರು ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಡೊಮಿನಿಕ್‌ನ ಸ್ನೇಹಿತನಾದ ಮಂಗಳೂರು ಗಂಜಿಮಠ ನಿವಾಸಿ ರೋಶನ್‌ ನವೀನ್‌ ಕ್ರಾಸ್ಟೋ ಫೋನ್‌ ಮೂಲಕ ಸಂಪರ್ಕಿಸಿ ಕೆನಡ ದೇಶದ ವೀಸಾವನ್ನು ಆತನಿಗೆ ಪರಿಚಯವಿರುವ ಜೇಮ್ಸ್‌ ಡಿ’ಸೋಜಾ ಮಾಡಿಸಿಕೊಡುವುದಾಗಿ ಹಾಗೂ ಯಾರಿಗಾದರೂ ವೀಸಾ ಬೇಕಾಗಿದ್ದರೆ ತಿಳಿಸುವಂತೆ ಹೇಳಿದ್ದ.

ಅದರಂತೆ ಡೊಮಿನಿಕ್‌ಗೆ ರೋಶನ್‌ ನವೀನ್‌ ಕಳೆದ ಜನವರಿ ತಿಂಗಳ ಮೊದಲನೇ ವಾರದಲ್ಲಿ ಫೋನ್‌ ಮುಖಾಂತರ ಜೇಮ್ಸ್‌ ಡಿ’ಸೋಜಾನ ಪರಿಚಯ ಮಾಡಿ ಕೊಟ್ಟಿದ್ದ. 30 ಲಕ್ಷ ರೂ. ಹಣ ನೀಡಿದರೆ ಡೊಮಿನಿಕ್‌ ಹಾಗೂ ಅವರ ಹೆಂಡತಿಗೆ ವೀಸಾ ಮಾಡಿಕೊಡುವುದಾಗಿ ಜೇಮ್ಸ್‌ ತಿಳಿಸಿದ್ದ. ಅದರಲ್ಲಿ 15 ಲಕ್ಷ ರೂ. ಹಣವನ್ನು ವೀಸಾ ಮಾಡುವ ಮೊದಲು ಹಾಗೂ ಉಳಿದ 15 ಲಕ್ಷ ರೂ. ಹಣವನ್ನು ಕೆನಡ ದೇಶಕ್ಕೆ ಹೊದ ಅನಂತರ ನೀಡಬೇಕೆಂದು ತಿಳಿಸಿದ್ದ.

ಅದರಂತೆ ಸುಮಾರು 9 ಕಂತುಗಳಲ್ಲಿ 15 ಲಕ್ಷ ರೂ. ಪಾವತಿಸಿದ್ದು, ಅದರಲ್ಲಿ 5 ಲಕ್ಷ ರೂ. ಹಣವನ್ನು ಅವರ ಸಂಬಂಧಿ ಅರುಣ್‌ ಡೆರಿಕ್‌ ಮೊಂತೇರೊ ಅವರ ಖಾತೆಯ ಮೂಲಕ ಜೇಮ್ಸ್‌ ತಿಳಿಸಿದ ಖಾತೆಗೆ ಜಮೆ ಮಾಡಲಾಗಿದೆ. ವೀಸಾ ಪಡೆಯುವ ಹಿನ್ನಲೆಯಲ್ಲಿ ಮೇ 26ರಂದು ಐ.ಇ.ಎಲ್‌.ಟಿ.ಎಸ್‌. ಪರೀಕ್ಷೆ ಇರುವುದಾಗಿ ತಿಳಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಜೇಮ್ಸ್‌ಗೆ ಕರೆ ಮಾಡಿದಾಗ ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ. ಹಲವು ಬಾರಿ ಪ್ರಯತ್ನಿಸಿದರೂ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು, ಯಾವುದೇ ಉತ್ತರವನ್ನೂ ನೀಡದೆ ಹಣವನ್ನೂ ವಾಪಸು ಮಾಡದೆ ಮೋಸ ಮಾಡಿದ್ದಾನೆ. ಇದೇ ರೀತಿ ಹಲವು ಮಂದಿಗೆ ಮೋಸ ಮಾಡಿರುವ ಮಾಹಿತಿ ಇದೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Mangaluru: ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.