ಒಣತ್ಯಾಜ್ಯ ನಿರ್ವಹಣೆಗೆ ಇನ್ನೂ 3 ಎಂಆರ್‌ಎಫ್‌ ಘಟಕ


Team Udayavani, Jun 21, 2022, 6:45 AM IST

ಒಣತ್ಯಾಜ್ಯ ನಿರ್ವಹಣೆಗೆ ಇನ್ನೂ 3 ಎಂಆರ್‌ಎಫ್‌ ಘಟಕ

ಮಂಗಳೂರು: ಒಣ ತ್ಯಾಜ್ಯ ನಿರ್ವಹಣೆಗಾಗಿ ದಕ್ಷಿಣ ಕನ್ನಡಕ್ಕೆ ಇನ್ನೂ ಮೂರು ಮೆಟೀರಿಯಲ್‌ ರಿಕವರಿ ಫೆಸಿಲಿಟಿ (ಎಂಆರ್‌ಎಫ್‌) ಫಟಕಗಳು ಮಂಜೂರು ಗೊಂಡಿವೆ. ಬೆಳ್ತಂಗಡಿ ತಾಲೂಕಿನ ಉಜಿರೆ, ಪುತ್ತೂರಿನ ಕೆದಂಬಾಡಿ ಹಾಗೂ ಬಂಟ್ವಾಳದ ಶಂಭೂರಿನಲ್ಲಿ ಶೀಘ್ರದಲ್ಲೇ ನಿರ್ಮಾಣಗೊಳ್ಳಲಿವೆ.

ದ.ಕ.ದಲ್ಲಿ ಪೈಲಟ್‌ ಯೋಜನೆ ಯಾಗಿ ಎಡಪದವಿನಲ್ಲಿ ಈಗಾಗಲೇ ದಿನಕ್ಕೆ 10 ಟನ್‌ ಒಣಕಸ ನಿರ್ವ ಹಣೆಯ ಎಂಆರ್‌ಎಫ್‌ ಘಟಕ ಸ್ಥಾಪನೆ ಗೊಳ್ಳುತ್ತಿದ್ದು ಆಗಸ್ಟ್‌ ನಲ್ಲಿ ಕಾರ್ಯಾ ರಂಭ ಗೊಳ್ಳುವ ನಿರೀಕ್ಷೆ ಇದೆ.

ದಿನಕ್ಕೆ 5 ಟನ್‌ ಸಾಮರ್ಥ್ಯ :

ಹೊಸ ಘಟಕಗಳು ದಿನವೊಂದಕ್ಕೆ ತಲಾ 5 ಟನ್‌ ಒಣತ್ಯಾಜ್ಯ ನಿರ್ವಹಣೆ ಸಾಮರ್ಥ್ಯವನ್ನು ಹೊಂದಿವೆ. ಬೆಳ್ತಂಗಡಿ ತಾಲೂಕಿನಲ್ಲಿ 48 ಗ್ರಾ. ಪಂ.ಗಳು, ಪುತ್ತೂರು ತಾಲೂಕಿನ ಕೆದಂಬಾಡಿಯಲ್ಲಿ ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕುಗಳ ಒಟ್ಟು 69 ಗ್ರಾ.ಪಂ.ಗಳು ಹಾಗೂ ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಒಟ್ಟು 56 ಗ್ರಾ.ಪಂ.ಗಳು ಎಂಆರ್‌ಎಫ್‌ ಅನುಷ್ಠಾನದಲ್ಲಿ ಒಳಗೊಳ್ಳಲಿದ್ದು ಬಹುತೇಕ ಗ್ರಾಮಗಳ ಒಣತ್ಯಾಜ್ಯ ನಿರ್ವಹಣೆಯಾಗಲಿವೆ. ಪ್ರತಿಯೊಂದು ಘಟಕದ ಅಂದಾಜು ವೆಚ್ಚ 1.95 ಕೋ.ರೂ. ಆಗಿದ್ದು ಇದರಲ್ಲಿ ತಲಾ 30 ಲಕ್ಷ ರೂ. ಗಳನ್ನು ಜಿ.ಪಂ.ನಿಂದ ನೀಡಲಾಗು ತ್ತದೆ. ಜನ ಸಂಖ್ಯೆಗೆ ಅನು ಗುಣವಾಗಿ ಗ್ರಾ.ಪಂ. ಗಳು ತಮ್ಮ ಮೊತ್ತವನ್ನು ನೀಡಬೇಕಾಗು ತ್ತದೆ. ಇದನ್ನು 15ನೇ ಹಣಕಾಸಿನ ಅನುದಾನದ ಕ್ರಿಯಾ ಯೋಜನೆ ತಯಾರಿ ಯಲ್ಲಿ ಎಂಆರ್‌ಎಫ್‌ ಘಟಕ ನಿರ್ಮಾಣಕ್ಕೆ ಗ್ರಾ.ಪಂ. ವಂತಿಗೆ ಎಂದು ಕಾದಿರಿಸಿ ಹೊಂದಿಸಿಕೊಳ್ಳಲಾಗುತ್ತದೆ.

ಉಜಿರೆ ಘಟಕದ ವೆಚ್ಚದಲ್ಲಿ 1.29 ಕೋ.ರೂ.ಗಳನ್ನು ಅನುಷ್ಠಾನದಲ್ಲಿ ಒಳಗೊಳ್ಳುವ ಗ್ರಾ.ಪಂ.ಗಳು ಭರಿಸ ಬೇಕಾಗಿದೆ. ಸ್ವತ್ಛಭಾರತ್‌ ಮಿಷನ್‌ನಲ್ಲಿ 16 ಲಕ್ಷ ರೂ., ತಾ.ಪಂ.ನಿಂದ 20 ಲಕ್ಷ ರೂ. ನೀಡಲಾಗುತ್ತದೆ. ಕೆದಂಬಾಡಿ ಘಟಕದ ಅಂದಾಜು ವೆಚ್ಚದಲ್ಲಿ 72 ಲಕ್ಷ ರೂ. ಮೊತ್ತವನ್ನು ಮೂರು ತಾಲೂಕುಗಳ ಅನುಷ್ಠಾನಕ್ಕೆ ಒಳಪಡುವ ಗ್ರಾ.ಪಂ.ಗಳು ಭರಿಸ ಬೇಕಾಗುತ್ತದೆ. ಉಳಿದಂತೆ ಸ್ವತ್ಛ ಭಾರತ್‌ ಮಿಷನ್‌ನಿಂದ 48 ಲಕ್ಷ ರೂ., ಮೂರು ತಾ.ಪಂ.ಗಳಿಂದ ತಲಾ  15 ಲಕ್ಷದಂತೆ 45 ಲಕ್ಷ ರೂ. ಭರಿಸ ಲಾಗುತ್ತದೆ. ಶಂಭೂರು ಘಟಕದ ಅಂದಾಜು ವೆಚ್ಚದಲ್ಲಿ 98 ಲಕ್ಷ ರೂ. ಗಳನ್ನು ಎರಡು ತಾಲೂಕು ಗಳ ಅನುಷ್ಠಾನಕ್ಕೆ ಒಳ ಪಡುವ ಗ್ರಾ.ಪಂ. ಗಳು, 32 ಲಕ್ಷ ರೂ.ಗಳನ್ನು ಸ್ವಚ್ಛ ಭಾರತ್‌ ಮಿಷನ್‌ ಹಾಗೂ ಬಂಟ್ವಾಳ  ತಾ.ಪಂ. 20 ಲಕ್ಷ ರೂ. ಹಾಗೂ ಉಳ್ಳಾಲ ತಾ.ಪಂ. 15 ಲಕ್ಷ ರೂ. ಸೇರಿದಂತೆ 35 ಲಕ್ಷ ರೂ.ಗಳನ್ನು ಭರಿಸಬೇಕಾಗುತ್ತದೆ. ದ.ಕ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅನುಷ್ಠಾನ ಇಲಾಖೆಯಾಗಿದ್ದು ಉಪವಿಭಾಗಗಳ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು ಹಾಗೂ ಸಂಬಂಧಪಟ್ಟ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಅನುಷ್ಠಾನದ ಜವಾಬ್ದಾರಿಯನ್ನು ನಿರ್ವಹಿಸುತ್ತಾರೆ.

ಪ್ರಸ್ತುತ ಗ್ರಾಮೀಣ ಪ್ರದೇಶದಲ್ಲಿ ಸ್ವತ್ಛ ಸಂಕೀರ್ಣ ಘಟಕದಲ್ಲಿ ಒಣ ತ್ಯಾಜ್ಯವನ್ನು ಮಾನವ ಶ್ರಮದ ಮೂಲಕ 10ರಿಂದ 12 ವರ್ಗಗಳಾಗಿ ವಿಂಗಡಿಸಲಾಗುತ್ತಿದೆ. ಇದರಿಂದ ಸಾಕಷ್ಟು ಸಮಯ ವಿಳಂಬವಾಗುತ್ತಿದೆ ಹಾಗೂ ವಿಂಗಡಿಸಿದ ವಸ್ತುಗಳು ವ್ಯವಸ್ಥಿತವಾಗಿ ಮಾರಾಟವಾಗದೆ ಘಟಕಗಳಲ್ಲೇ ಉಳಿದು ಬಿಡುತ್ತಿವೆ. ಎಂಆರ್‌ಎಫ್‌ ಸೌಲಭ್ಯದಲ್ಲಿ ಯಾಂತ್ರಿಕವಾಗಿ ಇನ್ನೂ ಹೆಚ್ಚಿನ ವರ್ಗಗಳಾಗಿ ಒಣ ಕಸವನ್ನು ವಿಂಗಡಿಸಿ ಹೆಚ್ಚಿನ ತ್ಯಾಜ್ಯವನ್ನು ಮರುಬಳಕೆ ಮಾಡಲಾಗುತ್ತದೆ.

ತೆಂಕಎಡಪದವು ಎಂಆರ್‌ಎಫ್‌ ಘಟಕ :

ಮಂಗಳೂರು ತಾಲೂಕಿನ ತೆಂಕಎಡಪದವು ಬ್ರಿಂಡೇಲ್‌ನಲ್ಲಿ 2.50 ಕೋ.ರೂ. ವೆಚ್ಚದಲ್ಲಿ ಎಂಆರ್‌ಎಫ್ ಘಟಕ ನಿರ್ಮಾಣದ ಶೇ. 50ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಇದರಲ್ಲಿ ದಿನವೊಂದಕ್ಕೆ 10 ಟನ್‌ ಒಣ ತ್ಯಾಜ್ಯವನ್ನು ನಿರ್ವಹಿಸಬಹುದಾಗಿದೆ.

ದ.ಕ. ಜಿಲ್ಲೆಯ ಮೂರು ಕಡೆಗಳಲ್ಲಿ ಎಂಆರ್‌ಎಫ್‌ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದ್ದು ಪೂರಕ ಪ್ರಕ್ರಿಯೆಗಳು ನಡೆಯುತ್ತಿವೆ. ಅನುದಾನವನ್ನು ವಿವಿಧ ಮೂಲಗಳಿಂದ ಹೊಂದಿಸಿಕೊಳ್ಳಲಾಗುತ್ತಿದೆ. ಈಗಾಗಲೇ ಎಡಪದವು ಎಂಆರ್‌ಎಫ್‌ ಘಟಕ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಹೊಸ ಮೂರು ಘಟಕಗಳ ಸ್ಥಾಪನೆಯಿಂದ ಒಟ್ಟು 4 ಎಂಆರ್‌ಎಫ್‌ ಘಟಕಗಳನ್ನು ಹೊಂದಿದಂತಾಗುತ್ತದೆ ಮತ್ತು ಒಣತ್ಯಾಜ್ಯ ನಿರ್ವಹಣೆ ಸುಗಮವಾಗಲಿದೆ.  –  ಡಾ| ಕುಮಾರ್‌, ದ.ಕ. ಜಿ.ಪಂ. ಸಿಇಒ  

 

ಕೇಶವ ಕುಂದರ್‌

ಟಾಪ್ ನ್ಯೂಸ್

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!

Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

8-bng

Bengaluru: ಚರ್ಚ್‌ ಸ್ಟ್ರೀಟ್‌ ನಲ್ಲಿದ್ದ 50 ಅನಧಿಕೃತ ಅಂಗಡಿ ತೆರವು

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.