ಕರಾವಳಿ ಅಭಿವೃದ್ಧಿಗಾಗಿ 35 ಕೋ.ರೂ. ಮೀಸಲು: ಮಟ್ಟಾರು ರತ್ನಾಕರ ಹೆಗ್ಡೆ


Team Udayavani, Jul 21, 2022, 6:35 AM IST

ಕರಾವಳಿ ಅಭಿವೃದ್ಧಿಗಾಗಿ 35 ಕೋ.ರೂ. ಮೀಸಲು: ಮಟ್ಟಾರು ರತ್ನಾಕರ ಹೆಗ್ಡೆ

ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ತನ್ನ ಕಾರ್ಯವ್ಯಾಪ್ತಿಯ 3 ಜಿಲ್ಲೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಈ ಸಾಲಿನ ಆಯವ್ಯಯದಲ್ಲಿ ಪ್ರಾಧಿಕಾರದ ಇತಿಹಾಸದಲ್ಲೇ ಮೊದಲ ಬಾರಿಗೆ ಗರಿಷ್ಠ 35 ಕೋ.ರೂ.ಗಳನ್ನು ಕಾದಿರಿಸಿದೆ ಹಾಗೂ 10 ಕೋ.ರೂ. ಹೆಚ್ಚುವರಿಯಾಗಿ ಸರಕಾರದಿಂದ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2021-22ರಲ್ಲಿ 229 ಕಾಮಗಾರಿ ಕೈಗೊಂಡಿದ್ದು, ಈ ಪೈಕಿ 151 ಪೂರ್ಣವಾಗಿವೆ, 78 ಪ್ರಗತಿಯಲ್ಲಿವೆ. 2022-23ರಲ್ಲಿ 104 ರಸ್ತೆ ನಿರ್ಮಾಣ/ಅಭಿವೃದ್ಧಿ, 12 ಕಾಲುಸಂಕ/ಕಿರು ಸೇತುವೆ, 12 ಸಮುದಾಯ ಭವನ, 25 ಕಟ್ಟಡ ನಿರ್ಮಾಣ/ಅಭಿವೃದ್ಧಿ, 11 ಶಾಲಾ ಕಟ್ಟಡ ಅಭಿವೃದ್ಧಿ ಸಹಿತ 207 ಕಾಮಗಾರಿಯನ್ನು ಒಟ್ಟು 2,433.50 ಲಕ್ಷ ರೂ.ಗಳಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದರು.

1 ಕೋ.ರೂ. ವೆಚ್ಚದಲ್ಲಿ ಶಾಂಭವಿ ನದಿಗೆ ತೂಗುಸೇತುವೆ, ಭಟ್ಕಳದ ಆಳ್ವೆಕೋಡಿ ತೆಂಗಿನಗುಂಡಿ ತೂಗು ಸೇತುವೆ, ಪುತ್ತೂರಿನ ಬೆಟ್ಟಂಪಾಡಿಯಲ್ಲಿ ಹಾಗೂ ಸುಳ್ಯದ ಪಾಲ್ತಾಡಿ ಗ್ರಾಮದಲ್ಲಿ ಗೌರಿಹೊಳೆಗೆ ಪ್ರತ್ಯೇಕ ತೂಗು ಸೇತುವೆ ಕಾಮಗಾರಿ ಕೈಗೊಳ್ಳಲಾಗಿದೆ. ಕಾರ್ಕಳದ ಬೈಲೂರಿನಲ್ಲಿ ಪರಶುರಾಮ ಥೀಂ ಪಾರ್ಕ್‌ ಅಭಿವೃದ್ಧಿಗೆ 1 ಕೋ.ರೂ., ಬೆಳ್ತಂಗಡಿ ತಾಲೂಕು ಕ್ರೀಡಾಂಗಣ ನಿರ್ಮಾಣಕ್ಕೆ 1 ಕೋ.ರೂ. ಸಹಿತ ಕಾಮ ಗಾರಿಗಳನ್ನು ಕೈಗೊಳ್ಳಲಾಗಿದೆ ಎಂದರು.

ಮಳೆಯಿಂದಾಗಿ ಮೂರು ಜಿಲ್ಲೆಗಳಲ್ಲಿ ವಿವಿಧ ರಸ್ತೆ, ಕಾಲುಸಂಕ ಸಹಿತ ವಿವಿಧ ಸಮಸ್ಯೆ ಎದುರಾಗಿದೆ. ಜತೆಗೆ ಕೆಲವು ಕಡೆ ಮೀನು ಮಾರುಕಟ್ಟೆ ನಾದುರಸ್ತಿಯಲ್ಲಿದೆ ಹಾಗೂ ಕೆಲವು ಕಡೆಯಲ್ಲಿ ಇನ್ನೂ ಆಗಿಲ್ಲ. ಇಂತಹ ಸ್ಥಳಕ್ಕೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ತಂಡ ಭೇಟಿ ನೀಡಿ ಪರಿಶೀಲಿಸಲಿದೆ ಎಂದರು.

ಕರಾವಳಿ ಜಿಲ್ಲೆಯ 32 ಸಮುದ್ರ ಪ್ರದೇಶದಲ್ಲಿ ನೀರಿನ ಗುಣಮಟ್ಟ ಪರೀಕ್ಷಿಸಲು ನೀರಿನ ಮಾದರಿ ಸಂಗ್ರಹದ ಮೂಲಕ ಸಮೀಕ್ಷೆ ಕೈಗೊಳ್ಳಲು ನಿರ್ಧರಿಸಲಾಗಿದೆ. ಗೋವಾದ ಸಂಸ್ಥೆಯವರು 80 ಲಕ್ಷ ರೂ. ದರಪಟ್ಟಿ ಪಡೆದಿದ್ದಾರೆ. ಇದಕ್ಕೆ ಸರಕಾರದಿಂದ ಅನುಮತಿ ಕೋರಲಾಗಿದೆ ಎಂದರು.

ಪ್ರಾಧಿ ಕಾರದ ಕಾರ್ಯದರ್ಶಿ ಪ್ರದೀಪ್‌ ಡಿ’ಸೋಜಾ, ಸದಸ್ಯೆ ಕೇಸರಿ ಯುವರಾಜ್‌, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಮಂಜುನಾಥ್‌ ಶೆಟ್ಟಿ, ವಿಶೇಷ ಕರ್ತವ್ಯಾಧಿಕಾರಿ ಪವನ್‌ ಶೆಟ್ಟಿ, ವಲಯಾಧಿಕಾರಿ ಹರಿಕಾಂತ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

ಸಸಿಹಿತ್ಲು ಮೀನುಗಾರಿಕೆ ಗ್ರಾಮಕ್ಕೆ ಸ್ಥಳದ ಸಮಸ್ಯೆ
ಪ್ರಧಾನಮಂತ್ರಿಗಳ ಮತ್ಸ éಸಂಪದ ಯೋಜನೆಯಡಿ ಮಂಗಳೂರಿನ ಸಸಿಹಿತ್ಲು ಗ್ರಾಮದಲ್ಲಿ 7.50 ಕೋ.ರೂ ವೆಚ್ಚದಲ್ಲಿ ಮೀನುಗಾರಿಕೆ ಗ್ರಾಮವನ್ನು ನಿರ್ಮಿಸಲು ಅನುಮೋದನೆ ಪಡೆಯಲಾಗಿದೆ. ಇದರ ಡಿಪಿಆರ್‌ಗಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಅನುಷ್ಠಾನ ಸಂಸ್ಥೆಯಾಗಿ ನೇಮಿಸಲಾಗಿದೆ. ಆದರೆ ಅಲ್ಲಿ ಜಂಗಲ್‌ ಲಾಡ್ಜ್ನ ಸ್ಥಳದ ಸಮಸ್ಯೆ ಕಾರಣದಿಂದ ವರದಿ ತಯಾರಿಸಲು ವಿಳಂಬವಾಗಿದೆ. ಈ ವಿಚಾರ ಈಗಾಗಲೇ ಮಾತುಕತೆ ಹಂತದಲ್ಲಿದೆ. ಇದು ಇತ್ಯರ್ಥವಾದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಇತ್ಯರ್ಥವಾಗದಿದ್ದರೆ ಪ್ರತ್ಯೇಕ ಸ್ಥಳ ಪರಿಶೀಲಿಸಲು ಸರಕಾರವನ್ನು ಕೋರಲಾಗುವುದು ಎಂದು ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.