4ನೇ ಶನಿವಾರ: ಕೆಲವೆಡೆ ರಜೆಯಲ್ಲೂ ಕೆಲಸ !

ತಿಳಿಯದೇ ಬಂದು ವಾಪಸ್‌ ಹೋದ ಸಾರ್ವಜನಿಕರು

Team Udayavani, Jun 23, 2019, 5:12 AM IST

holiday

ಕಾಪು ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರತ ಸಿಬಂದಿ.

ಮಂಗಳೂರು/ಉಡುಪಿ: ರಾಜ್ಯ ಸರಕಾರಿ ನೌಕರರಿಗೆ ತಿಂಗಳ ನಾಲ್ಕನೇ ಶನಿವಾರದಂದು ಸರಕಾರ ರಜೆ ಘೋಷಿಸಿದ್ದರಿಂದ ಶನಿವಾರ ಸರಕಾರಿ ಕಚೇರಿಗಳ ಎಲ್ಲ ವಿಭಾಗಗಳು ಮುಚ್ಚಿದ್ದವು. ಆದರೆ ಸರಕಾರದ ಆದೇಶದ ಬಗ್ಗೆ ಮಾಹಿತಿ ಇಲ್ಲದೇ ಇದ್ದ ಕೆಲ ಸಾರ್ವಜನಿಕರು ಕಚೇರಿಗೆ ಬಂದು ಬರಿಗೈಲಿ ವಾಪಸಾಗಬೇಕಾಯಿತು.

ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ, ಜಿ.ಪಂ. ಕಚೇರಿ, ತಾಲೂಕು ಕಚೇರಿಗಳು, ಆರ್‌ಟಿಒ ಕಚೇರಿಗಳು, ನಗರ ಸಭೆ, ನಗರ ಪಾಲಿಕೆ ಕಚೇರಿಗಳು, ರೈತಸಂಪರ್ಕ ಕೇಂದ್ರ, ಮಿನಿ ವಿಧಾನಸೌಧ ಇತ್ಯಾದಿ ಸಾರ್ವಜನಿಕ ಸೇವೆಗೆ ಅಗತ್ಯವಿರುವ ಕಚೇರಿಗಳು ಮುಚ್ಚಿದ್ದವು. ಯಾವತ್ತಿನಷ್ಟು ಜನರು ಇಲ್ಲಿಗೆ ಬರದಿದ್ದರೂ ಒಂದಷ್ಟು ಜನ ಬಂದು, ರಜೆ ಫ‌ಲಕ ನೋಡಿ ವಾಪಸಾದರು.

ರಜೆ ಇದ್ದರೂ ಕೆಲಸ
ಬೆಳ್ತಂಗಡಿ, ಬಂಟ್ವಾಳ, ಸುಳ್ಯ, ಕಾಪು ಮುಂತಾದೆಡೆಗಳಲ್ಲಿ ತಾ.ಪಂ.ಕಚೇರಿಗಳಲ್ಲಿ ಸಿಬಂದಿ ಕೆಲಸ ಮಾಡಿದರು. ಬೆಳ್ತಂಗಡಿ ತಹಶೀಲ್ದಾರ್‌ ಗಣಪತಿ ಶಾಸ್ತ್ರಿ ಸೇರಿದಂತೆ ಕಚೇರಿಯ ಬಹುತೇಕ ಸಿಬಂದಿ ಕರ್ತವ್ಯ ನಿರ್ವಹಿಸಿದ್ದಾರೆ. ಕಡತ ವಿಲೇವಾರಿ ದೃಷ್ಟಿಯಿಂದ ಕೆಲಸ ಮಾಡಲಾಗಿತ್ತು. ಕೆಲವೆಡೆ ಪ್ರಧಾನಮಂತ್ರಿ ಕಿಸಾನ್‌ ಸಮ್ಮನ್‌ ಯೋಜನೆ ನೋಂದಣಿ ನಿಮಿತ್ತ ರೈತರಿಗೆ ಅನುಕೂಲ ಮಾಡಿ ಕೊಡಲು ಸಿಬಂದಿ ಸೇವೆ ಸಲ್ಲಿಸಿದರು.

ಈವರೆಗೆ ಕೇಂದ್ರ ಸರಕಾರಿ ನೌಕರರಿಗೆ ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಇದ್ದರೆ, ರಾಜ್ಯ ಸರಕಾರಿ ನೌಕರರಿಗೆ ತಿಂಗಳ ಎರಡನೇ ಶನಿವಾರ ಮಾತ್ರ ರಜೆ ನೀಡಲಾಗುತ್ತಿತ್ತು. ಆದರೆ, ಕಳೆದ ಕೆಲವು ಸಮಯಗಳ ಹಿಂದೆ ಕೇಂದ್ರ ಸರಕಾರಿ ನೌಕರರಂತೆ ರಾಜ್ಯ ಸರಕಾರಿ ನೌಕರರಿಗೂ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡುವು ದಾಗಿ ರಾಜ್ಯ ಸರಕಾರ ಘೋಷಿಸಿತ್ತು.ಎಲ್ಲೆಡೆ ನ್ಯಾಯಾಲಯ ಎಂದಿನಂತೆ ಕಾರ್ಯಾಚರಿಸಿತು.

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.