ರಾಮಕೃಷ್ಣ  ಮಿಷನ್‌ ಆಶ್ರಯದಲ್ಲಿ 4ನೇ ವಾರದ ಸ್ವಚ್ಛತಾ ಅಭಿಯಾನ


Team Udayavani, Nov 27, 2017, 10:19 AM IST

27-Nov-3.jpg

ಮಹಾನಗರ : ಶ್ರೀ ರಾಮಕೃಷ್ಣ ಮಿಷನ್‌ ಸ್ವಚ್ಛತಾ ಅಭಿಯಾನದ ಅಂಗವಾಗಿ 4ನೇ ವಾರದ ಸ್ವಚ್ಛತಾ ಕಾರ್ಯಕ್ರಮವು ರವಿವಾರ ನಗರದ ಕಾಸ್ಸಿಯಾ ಶಾಲೆಯ ಎದುರಿನ ರಸ್ತೆಯಲ್ಲಿ ಹಮ್ಮಿಕೊಳ್ಳಲಾಯಿತು.

ಸ್ವಾಮಿ ಜಿತಕಾಮಾನಂದಜೀ ಅವರ ಉಪಸ್ಥಿತಿಯಲ್ಲಿ ವಿಧಾನ ಪರಿಷತ್‌ ವಿಪಕ್ಷ ಮುಖ್ಯ ಸಚೇತಕ ಕ್ಯಾ| ಗಣೇಶ್‌ ಕಾರ್ಣಿಕ್‌ ಹಾಗೂ ಕಾಸ್ಸಿಯಾ ಹೈಸ್ಕೂಲಿನ ಮುಖ್ಯೋಪಾಧ್ಯಾಯ ಎವರಿಸ್ಟ್‌ ಕ್ರೆಸ್ಟಾ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಅಭಿಯಾನದ ಪ್ರಧಾನ ಸಂಯೋಜಕ ದಿಲ್‌ ರಾಜ್‌ ಆಳ್ವ, ಸೌರಜ್‌, ಸುರೇಶ್‌ ಶೆಟ್ಟಿ, ಬಜಪೆ ಪೊಲೀಸ್‌ ಠಾಣೆಯ ಅಧಿಕಾರಿ ಮದನ್‌ ಮತ್ತಿತರರು ಉಪಸ್ಥಿತರಿದ್ದರು.

ಕಾಸ್ಸಿಯಾ ವಿದ್ಯಾರ್ಥಿಗಳು ಶಾಲೆಯ ಮುಂಭಾಗದ ಗೋಡೆ ಹಾಗೂ ತೋಡುಗಳನ್ನು ಸ್ವಚ್ಛಗೊಳಿಸಿದರು. ನಿವೇದಿತಾ ಬಳಗದ ಸದಸ್ಯರು ರಸ್ತೆಯ ಎರಡೂ ಬದಿಯಲ್ಲಿ ಬಿದ್ದಿದ್ದ ಕಲ್ಲು ರಾಶಿ ಹಾಗೂ ರಸ್ತೆ ಮೇಲೆ ಹರಡಿಕೊಂಡಿದ್ದ ಮರಳು ತೆಗೆದು ಶುಚಿ ಮಾಡಿದರು. ಎಸ್‌. ಎಂ. ಕುಶೆ ಶಾಲಾ ವಿದ್ಯಾರ್ಥಿಗಳು ಮನೆ ಮನೆ ಭೇಟಿ ನೀಡಿ ಸ್ವಚ್ಛತಾ ಕರಪತ್ರ ಹಂಚಿದರು.

ಬಸ್‌ ತಂಗುದಾಣದ ನವೀಕರಣ
ಹಿಂದೂ ವಾರಿಯರ್ಸ್‌ ಯುವಕರು ಮಾರ್ನಮಿಕಟ್ಟೆಯ ಹತ್ತಿರವಿರುವ ಬಸ್‌ ತಂಗುದಾಣವನ್ನು ಸ್ವಚ್ಛಗೊಳಿಸಿ ಸುಣ್ಣ ಬಣ್ಣ ಹಚ್ಚಿ ಸುಂದರಗೊಳಿಸಿದರು. ನುರಿತ ಗಾರೆ ಕೆಲಸದವರಿಂದ ನೆಲಹಾಸಿಗೆ ಹೊಸದಾಗಿ ಕಾಂಕ್ರೀಟ್‌ ಹಾಕಿ ಸಮತಟ್ಟುಗೊಳಿಸಲಾಯಿತು. ಅನಂತರ ಅದರ ಎದುರಿನ ವೃತ್ತಕ್ಕೆ ಬಣ್ಣ ಬಳಿದು ಅಂದ ಹೆಚ್ಚಿಸಲು ಪ್ರಯತ್ನಿಸಲಾಯಿತು.

ಬ್ಯಾನರ್‌, ಪೋಸ್ಟರ್‌ ತೆರವು
ಸೌಂದರ್ಯಕ್ಕೆ ಧಕ್ಕೆ ತರುವ ಸುಮಾರು 100ಕ್ಕೂ ಅಧಿಕ ಅನಧಿಕೃತ ಫ್ಲೆಕ್ಸ್‌ ಬ್ಯಾನರ್‌ ಗಳನ್ನು ಸ್ವಚ್ಛ ಪುತ್ತೂರು ಕಾರ್ಯಕರ್ತರು ಶ್ಯಾಮ್‌ ಸುದರ್ಶನ್‌ ಭಟ್‌ ನಿರ್ದೇಶನದಲ್ಲಿ ತೆರವು ಮಾಡಿದರು. ಜಪ್ಪು, ಮಂಗಳಾದೇವಿ ಹಾಗೂ ಮೋರ್ಗನ್ಸ್‌ ಗೇಟ್‌ ಮತ್ತಿತರ ಪ್ರದೇಶಗಳಲ್ಲಿ ಈ ಕಾರ್ಯ ನಡೆಯಿತು.

ಸ್ವಚ್ಛ ಮನಸ್ಸು ಅಭಿಯಾನ
ಅಭಿಯಾನದ ಪ್ರಮುಖ ಅಂಗವಾದ ಸ್ವಚ್ಛ  ಮನಸ್ಸು ಅಭಿಯಾನ ಮಂಗಳೂರು ನಗರ ಹಾಗೂ ಹೊರವಲಯದಲ್ಲಿ ನಿರಂತರವಾಗಿ ನಡೆಯುತ್ತಿದೆ. ಕಳೆದ 20 ದಿನಗಳಲ್ಲಿ 73 ಪ್ರೌಢಶಾಲೆಗಳಲ್ಲಿ ಸ್ವಚ್ಛ ಮನಸ್ಸು ಎಂಬ ಜಾಗೃತಿ ಅಭಿಯಾನವನ್ನು ಏರ್ಪಡಿಸಲಾಗಿತ್ತು. ಇಂದಿನವರೆಗೆ 73 ಶಾಲೆಗಳಿಂದ 6,988 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಎಲ್ಲ ವಿದ್ಯಾರ್ಥಿಗಳಿಗೂ ‘ಸ್ವಚ್ಛತಾ ಸೇನಾನಿ’ ಎಂಬ ವಿಶೇಷ ಬ್ಯಾಡ್ಜ್ ನೀಡಲಾಗಿದೆ. 

ಸುಮಾರು 60 ಜನ ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ನಿವೃತ್ತ ನಿರ್ದೇಶಕ ಎಂ. ಆರ್‌. ವಾಸುದೇವ್‌ ಮಾರ್ಗದರ್ಶನದಲ್ಲಿ ಈ ಅಭಿಯಾನ ನಡೆಯುತ್ತಿದೆ. ಒಟ್ಟು 101 ಶಾಲೆಗಳು ನೋಂದಣಿ ಮಾಡಿಕೊಂಡಿದ್ದು ,10358 ವಿದ್ಯಾರ್ಥಿಗಳನ್ನು ಸ್ವಚ್ಛತಾ ಸೇನಾನಿಗಳೆಂದು ಗುರುತಿಸಲಾಗಿದೆ.

ಸ್ವಚ್ಛ ಗ್ರಾಮ ಅಭಿಯಾನ
ರಾಮಕೃಷ್ಣ ಮಿಷನ್‌ ನೇತೃತ್ವದಲ್ಲಿ ಸ್ವಚ್ಛ  ದಕ್ಷಿಣ ಕನ್ನಡ ಅಭಿಯಾನದ ಪ್ರಯುಕ್ತ ಮಂಗಳೂರು ತಾಲೂಕಿನ ಮಳವೂರು, ಮೂಡುಶೆಡ್ಡೆ, ಐಕಳ, ಕಟೀಲು, ಪಿಲಾತಬೆಟ್ಟು, ಕೆಮ್ರಾಲ್‌ ಮುಂತಾದ ಸುಮಾರು 30 ಗ್ರಾಮಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಒಟ್ಟು ಸುಮಾರು 1,300 ಕಾರ್ಯಕರ್ತರು ಪಾಲ್ಗೊಂಡರು. ಸ್ವಚ್ಛತೆಗೆ ಬೇಕಾದ ಸಲಕರಣೆಗಳು, ಟೀಶರ್ಟ್‌ ಗಳು, ಬ್ಯಾನರ್‌ ಮತ್ತಿತರ ಸಾಮಗ್ರಿಗಳನ್ನು ಹಾಗೂ ಎಲ್ಲ ಸ್ವಯಂ ಸೇವಕರಿಗೆ ಉಪಾಹಾರದ ವ್ಯವಸ್ಥೆಯನ್ನೂ ರಾಮಕೃಷ್ಣ ಮಿಷನ್‌ ವತಿಯಿಂದ ಒದಗಿಸಲಾಗಿತ್ತು. ಜಿ.ಪಂ. ಸ್ವಚ್ಛ ದಕ್ಷಿಣ ಕನ್ನಡ ಅಭಿಯಾನಕ್ಕೆ ಸಹಕಾರ ನೀಡುತ್ತಿದೆ. ಎಂಆರ್‌ಪಿಎಲ್‌ ಪ್ರಾಯೋಜಕತ್ವ ನೀಡಿ ಪ್ರೋತ್ಸಾಹಿಸುತ್ತಿದೆ.

ಪುಟ್‌ಪಾತ್‌ ನಿರ್ಮಾಣ
ಕಾಸ್ಸಿಯಾ ಶಾಲೆಯ ಎದುರಿನ ಕಾಲುದಾರಿಗೆ ನಿಗದಿಪಡಿಸಿದ ಸ್ಥಳವು ತ್ಯಾಜ್ಯ ಬಿಸಾಡುವ ಸ್ಥಳವಾಗಿತ್ತು. ವಿದ್ಯಾರ್ಥಿಗಳು
ಹಾಗೂ ದಾರಿಹೋಕರು ಕಾಲುದಾರಿ ಬಳಸಲಾಗದೆ ಪರದಾಡುತ್ತಿದ್ದರು. ಅಲ್ಲದೆ ಆ ಪರಿಸರ ದುರ್ನಾತ ಬೀರುತ್ತ ಅಸಹ್ಯವಾಗಿತ್ತು. ಕಳೆದೆರಡು ದಿನಗಳಿಂದ ಅಲ್ಲಿಂದ ನಾಲ್ಕುಟಿಪ್ಪರ್‌ ಕಟ್ಟಡ ತ್ಯಾಜ್ಯ ಹಾಗೂ ಕಸ ತೆಗೆದು ಸ್ವತ್ಛಗೊಳಿಸಲಾಯಿತು. ಅಲ್ಲಿ ಈಗ ಇಂಟರ್‌ಲಾಕ್‌ ಹಾಕಿ ಕಾಲುದಾರಿಯನ್ನು ನಿರ್ಮಿಸಲಾಗುತ್ತಿದೆ. ಮುಂದಿನ ವಾರದಲ್ಲಿ ಹೂಗಿಡಗಳನ್ನು ನೆಟ್ಟು ಸುಂದರಗೊಳಿಸಲಾಗುವುದು. 

ಟಾಪ್ ನ್ಯೂಸ್

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

6-katapady

Katapady: ಟ್ಯಾಂಕರ್‌, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ

INDvsNZ; ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ: ಭಾರತ ಕೇವಲ 46ಕ್ಕೆ ಆಲೌಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

Sathish-Kumpala

Hubballi: ಪೊಲೀಸ್‌ ಠಾಣೆ ಮೇಲೆ ದಾಳಿ ಪ್ರಕರಣ ವಾಪಸ್‌: ದ. ಕನ್ನಡ ಜಿಲ್ಲಾ ಬಿಜೆಪಿ ಖಂಡನೆ

Ullal-Acci

Ullala: ಮರಕ್ಕೆ ಸ್ಕೂಟರ್‌ ಢಿಕ್ಕಿ: ಸವಾರ ಸಾವು

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

6(1)

Kinnigoli: ಮೂರು ಕಾವೇರಿ ಜಂಕ್ಷನ್‌ನಲ್ಲೇ ಬೃಹತ್‌ ಟ್ಯಾಂಕ್‌!

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

6-katapady

Katapady: ಟ್ಯಾಂಕರ್‌, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.