ಜೋಡಣೆ ತೆರವಿಗೆ ಮಹಾನಗರ ಪಾಲಿಕೆಯಿಂದ ವಾರದ ಗಡುವು


Team Udayavani, Jun 17, 2018, 12:19 PM IST

17-june-1.jpg

ಮಹಾನಗರ: ಮಳೆ ನೀರು ಹರಿಯಲು ಚರಂಡಿ ವ್ಯವಸ್ಥೆ ಇದ್ದರೂ ನಗರದ ಸುಮಾರು 500ರಷ್ಟು ಮನೆ/ ಫ್ಲ್ಯಾಟ್‌ನವರು ಶೌಚಾಲಯದ ನೀರು ಹರಿಯುವ ಒಳಚರಂಡಿಗೆ ಮಳೆ ನೀರನ್ನು ಜೋಡಣೆ ಮಾಡಿದ್ದಾರೆ ಎಂಬ ಆತಂಕಕಾರಿ ವಿಚಾರ ಇದೀಗ ಬೆಳಕಿಗೆ ಬಂದಿದೆ. ನಗರದ ಒಳಚರಂಡಿ ಬಳಕೆದಾರರುಗಳು ಮನೆಯ ಸುತ್ತಮುತ್ತ ಬೀಳುವ ಮಳೆ ನೀರನ್ನು ಒಳಚರಂಡಿಗೆ ಕಳುಹಿಸಿದ ಹಿನ್ನೆಲೆಯಲ್ಲಿ ನಗರದ ವಿವಿಧ ಮ್ಯಾನ್‌ ಹೋಲ್‌ಗ‌ಳು ತೆರೆದು ತ್ಯಾಜ್ಯ ನೀರು ರಸ್ತೆಯಲ್ಲಿ ಹರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಮಾಹಿತಿ ಇದ್ದರೂ ಇಲ್ಲಿಯವರೆಗೆ ಮೌನವಾಗಿದ್ದ ಮನಪಾ ಇದೀಗ ಅಂತಹ ಜೋಡಣೆ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದೆ.

ಮನೆ/ಫ್ಲ್ಯಾಟ್‌ ಬಳಿಯಲ್ಲಿ ಮಳೆ ನೀರು ನಿಲ್ಲಬಾರದು ಅಂತ ಕೆಲವು ಮನೆ, ಫ್ಲ್ಯಾಟ್ ನವರು ಒಳಚರಂಡಿ ಲೈನ್‌ನಲ್ಲಿ ಮಳೆ ನೀರಿನ್ನು ಲಿಂಕ್‌ ಮಾಡಿದ್ದಾರೆ. ಇನ್ನೂ ಕೆಲವು ಕಡೆಗಳಲ್ಲಿ ಮಳೆ ನೀರು ಹರಿಯಲು ಚರಂಡಿ ವ್ಯವಸ್ಥೆ ಸಮರ್ಪಕವಾಗಿ ಇಲ್ಲ ಎಂದು ಮಳೆ ನೀರು ತೆರವಿಗಾಗಿ ಒಳಚರಂಡಿಗೆ ಜೋಡಣೆ ಮಾಡಿದ ಬಗ್ಗೆ ತಿಳಿದು ಬಂದಿದೆ. 

ಮಳೆ ನೀರು ಹರಿದರೆ ಮ್ಯಾನ್‌ ಹೋಲ್‌ ಅವಾಂತರ!
ಕುದ್ರೋಳಿ, ಪಾಂಡೇಶ್ವರ, ಪಡೀಲ್‌, ಎಕ್ಕೂರು, ಕೊಟ್ಟಾರಚೌಕಿ ಸೇರಿದಂತೆ ಮಂಗಳೂರಿನ ಒಟ್ಟು 22 ಕಡೆಗಳಲ್ಲಿ ವೆಟ್‌ವೆಲ್‌ ನಿರ್ಮಿಸಲಾಗಿದೆ. ಅಂದರೆ, ಶೌಚಾಲಯ, ಪಾತ್ರೆ ತೊಳೆಯುವ ನೀರು ಒಳಚರಂಡಿಯ ಮೂಲಕ ಮ್ಯಾನ್‌ ಹೋಲ್‌ (ಒಟ್ಟು 24,365) ದಾಟಿ, ವೆಟ್‌ ವೆಲ್‌ಗೆ ಹರಿಯುತ್ತದೆ. ಅಲ್ಲಿಂದ ಮಂಗಳೂರಿನ ನಾಲ್ಕು ಕಡೆಗಳಲ್ಲಿ ಪಾಲಿಕೆ ವತಿಯಿಂದ ನಿರ್ಮಿಸಿರುವ ಎಸ್‌ಟಿಪಿಗೆ (ಸಂಸ್ಕರಣಾ ಘಟಕ) ಬರುತ್ತದೆ. 16 ಎಂಎಲ್‌ಡಿ ಸಾಮರ್ಥ್ಯದ ಸುರತ್ಕಲ್‌ ಎಸ್‌ಟಿಪಿ, 20 ಎಂಎಲ್‌ಡಿಯ ಜಪ್ಪಿನ ಮೊಗರು ಎಸ್‌ಟಿಪಿ, 44.4 ಎಂಎಲ್‌ ಡಿಯ ಕಾವೂರು ಎಸ್‌ಟಿಪಿ ಹಾಗೂ 8.7 ಎಂಎಲ್‌ಡಿ ಸಾಮರ್ಥ್ಯದ ಪಚ್ಚನಾಡಿ ಎಸ್‌ಟಿಪಿಯಲ್ಲಿ ತ್ಯಾಜ್ಯ ನೀರು ಸಂಸ್ಕರಣೆಯಾಗುತ್ತದೆ.

ಈ ಲೆಕ್ಕಾಚಾರದಷ್ಟೇ ಒಳ ಚರಂಡಿ ನೀರು ಎಸ್‌ಟಿಪಿಗೆ ಬರ ಬೇಕು. ಇದರ ಸಾಮರ್ಥ್ಯಕ್ಕಿಂತ ಅಧಿಕ ನೀರು ಎಸ್‌ ಟಿಪಿಗೆ ಬಂದರೆ ಅದು ಸ್ವೀಕರಿಸುವುದಿಲ್ಲ. ಹೀಗಾಗಿ ಬಂದ ನೀರು ವಾಪಾಸ್‌ ಒಳಚರಂಡಿ ಕೊಳವೆ ಮೂಲಕ ಹೋಗುತ್ತದೆ. ಈ ವೇಳೆ ಒತ್ತಡ ತಾಳದೆ ಮಧ್ಯದ ಮ್ಯಾನ್‌ಹೋಲ್‌ಗ‌ಳಿಂದ ನೀರು ಹೊರಗೆ ಬರುವಂತಾಗುತ್ತದೆ!

ಮಳೆಯ ನೀರನ್ನು ಕೂಡ ಒಳಚರಂಡಿ ಕೊಳವೆಯಲ್ಲಿ ಹರಿಸಿದ ಕಾರಣದಿಂದಾಗಿ ನಗರದ ರಸ್ತೆಗಳಲ್ಲಿ ಹಾಕಲಾಗಿರುವ ಮ್ಯಾನ್‌ಹೋಲ್‌ಗ‌ಳಿಂದ ತ್ಯಾಜ್ಯ ನೀರು ಮಳೆಯ ಸಂದರ್ಭ ಉಕ್ಕಿ ಹರಿದು ರಸ್ತೆಯಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿ ಇರುವ ಮನೆಗಳಿಗೆ ನುಗ್ಗುತ್ತಿದೆ. ಅಲ್ಲದೆ ಒಳಚರಂಡಿ ಸಂಸ್ಕರಣ ಘಟಕಗಳಿಗೂ ವಿನ್ಯಾಸಗೊಳಿಸಿದ ಪ್ರಮಾಣಕ್ಕಿಂತ ದುಪ್ಪಟ್ಟು ಪ್ರಮಾಣದಲ್ಲಿ ತ್ಯಾಜ್ಯ ನೀರು ಹರಿದು ಬಂದು ಸಂಸ್ಕರಣಾ ಘಟಕಗಳಲ್ಲಿ ತೀವ್ರ ತೊಂದರೆ ಉಂಟಾಗುತ್ತಿದೆ.

ಅಂದಹಾಗೆ, ಕಾವೂರು ಎಸ್‌ ಟಿಪಿಯ ತ್ಯಾಜ್ಯ ನೀರನ್ನು ಎಸ್‌ ಇಝಡ್‌ನ‌ವರು ಸಂಸ್ಕರಿಸಿ ತನ್ನ ಬಳಕೆಗಾಗಿ ಕೊಂಡೊಯ್ಯುತ್ತಿದ್ದಾರೆ. ಜತೆಗೆ ಪಚ್ಚನಾಡಿ ಎಸ್‌ಟಿಪಿ ತ್ಯಾಜ್ಯ ನೀರನ್ನು ಪಿಲಿಕುಳಕ್ಕೆ ಕಳುಹಿಸಲಾಗುತ್ತದೆ. ಜಪ್ಪಿನಮೊಗರು ಹಾಗೂ ಸುರತ್ಕಲ್‌ ಎಸ್‌ಟಿಪಿ ತ್ಯಾಜ್ಯ ನೀರು ಅಲ್ಲಿಯೇ ಬಳಕೆಯಾಗುತ್ತಿದ್ದು, ಮುಂದೆ ಅಲ್ಲಿಂದ ಎಸ್‌ ಇಝಡ್‌ನ‌ವರೇ ಪಡೆದುಕೊಳ್ಳಲಿದ್ದಾರೆ.

24,365 ಮ್ಯಾನ್‌ಹೋಲ್‌ಗ‌ಳು!
ಮಂಗಳೂರು ಪಾಲಿಕೆಯ ಒಳಚರಂಡಿ ಮೂಲ ಯೋಜನೆಯು 1957ರ ನಿರ್ದೇಶನದಂತೆ ಕಾಮಗಾರಿಯನ್ನು 1970-71ರಲ್ಲಿ
ಪೂರ್ಣಗೊಳಿಸಲಾಗಿತ್ತು. ಅಂದಿನ ಜನಸಂಖ್ಯೆ 1,80,000ಕ್ಕೆ ತಯಾರಿಸಿ ಅಂದಾಜಿತ 2 ಲಕ್ಷ ಜನಸಂಖ್ಯೆಗೆ ಇದನ್ನು ವಿನ್ಯಾಸಗೊಳಿಸಲಾಗಿತ್ತು. ಆ ಕಾಲದಲ್ಲಿ 6,000 ಮ್ಯಾನ್‌ಹೋಲ್‌ ಮಾಡಲಾಗಿತ್ತು. ಅನಂತರ 2006ರಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಂಡ ಎಡಿಬಿ ಯೋಜನೆಯಡಿ ಒಟ್ಟು 14,365 ಮ್ಯಾನ್‌ಹೋಲ್‌ ಮಾಡಲಾಗಿದೆ. ಆ ಬಳಿಕ ಅಗತ್ಯವಿರುವ ಕಾರಣದಿಂದ ಹೆಚ್ಚುವರಿಯಾಗಿ ಮಂಗಳೂರು ಪಾಲಿಕೆಯು 4,000ದಷ್ಟು ಮ್ಯಾನ್‌ಹೋಲ್‌ಗ‌ಳನ್ನು ನಿರ್ಮಿಸಿದೆ. ಈಗ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 24,365 ಮ್ಯಾನ್‌ಹೋಲ್‌ಗ‌ಳು ಕಾರ್ಯಾಚರಿಸುತ್ತಿವೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ. 

ವಾರದ ಗಡುವು
ಸಾರ್ವಜನಿಕರು ತಮ್ಮ ನಿವಾಸದ ತ್ಯಾಜ್ಯ ನೀರನ್ನು ಮಾತ್ರ ಒಳಚರಂಡಿಗೆ ಸಂಪರ್ಕಿಸಬೇಕು. ಮಳೆಯ ನೀರನ್ನು ಒಳಚರಂಡಿ ಜೋಡಣೆಯಲ್ಲಿದ್ದರೆ ಅದನ್ನು ಒಂದು ವಾರದೊಳಗೆ ತೆರವು ಮಾಡಿ, ಚರಂಡಿಯಲ್ಲಿ ಹರಿಯುವಂತೆ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ತಪ್ಪಿದರೆ ಯಾವನೇ ವ್ಯಕ್ತಿ, ಸಂಸ್ಥೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.
 - ಮಹಮ್ಮದ್‌ ನಝೀರ್‌ ಆಯುಕ್ತರು, ಮನಪಾ

ಒಳಚರಂಡಿಗೆ ಮಳೆ ನೀರು; ತೆರವು ಅಗತ್ಯ
ಮನೆಯ ಬಳಿಯಲ್ಲಿ ನೀರು ನಿಲ್ಲಬಾರದು ಅಂತ ಕೆಲವು ಮನೆ, ಫ್ಲ್ಯಾಟ್ ನವರು ತಮಗೆ ಸಂಪರ್ಕದ ಒಳಚರಂಡಿ ಲೈನ್‌ನಲ್ಲಿ ಮಳೆ ನೀರಿನ್ನು ಲಿಂಕ್‌ ಮಾಡಿದ್ದಾರೆ. ಮಂಗಳೂರಿನಲ್ಲಿ ಇಂತಹ ಸುಮಾರು 500ಕ್ಕಿಂತಲೂ ಅಧಿಕ ಪ್ರಕರಣಗಳಿರುವ ಬಗ್ಗೆ ಮಾಹಿತಿ ಇದೆ. ಹೀಗಾಗಿ ಸಂಬಂಧಪಟ್ಟವರು ಜೋಡಣೆಯನ್ನು ತಾವಾಗಿಯೇ ತೆರವುಗೊಳಿಸಬೇಕು. ಇಲ್ಲವಾದಲ್ಲಿ ಪಾಲಿಕೆ ಕ್ರಮ ಕೈಗೊಳ್ಳಲಿದೆ.
 - ಎಂ. ಶಶಿಧರ ಹೆಗ್ಡೆ, ಮುಖ್ಯಸಚೇತಕರು, ಪಾಲಿಕೆ

ದಿನೇಶ್‌ ಇರಾ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.