![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 22, 2019, 4:09 AM IST
ಮಂಗಳೂರು: ಕರ್ಫ್ಯೂ ವಿಧಿಸಿದ ಪರಿಣಾಮ ನಂದಿನಿ ಹಾಲು ಪೂರೈಸುವ ಕೆಎಂಎಫ್ನ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಮೇಲೂ ಬಿದ್ದಿದೆ. ಎರಡು ದಿನಗಳಿಂದ ಸಮರ್ಪಕವಾಗಿ ಹಾಲು ಪೂರೈಕೆ ಮಾಡಲು ಸಾಧ್ಯವಾಗಿಲ್ಲ. ಅಗತ್ಯ ವಸ್ತುವಾದ ಹಾಲು ಸರಬರಾಜಿಗೆ ವಿನಾಯಿತಿ ಇದ್ದರೂ ಪೊಲೀಸರು ನಂದಿನಿ ಅಧಿಕೃತ ಮಳಿಗೆ ತೆರೆದಿರಿಸಲು ಅವಕಾಶ ನೀಡಿರಲಿಲ್ಲ. ನಗರದೊಳಗೆ ಹಾಲಿನ ವಾಹನ ಪ್ರವೇಶಕ್ಕೂ ಅವಕಾಶ ನೀಡಿಲ್ಲ. ಇದು ನಂದಿನಿ ಡೈರಿಗೂ ಅನನುಕೂಲ ಸೃಷ್ಟಿಸಿದರೆ ಗ್ರಾಹಕರಿಗೂ ಹಾಲು ದೊರೆಯದೆ ತೊಂದರೆಯಾಯಿತು.
ಮಂಗಳೂರು ಮತ್ತು ಉಳ್ಳಾಲ ಪರಿಸರದ ಬಹುತೇಕ ಎಲ್ಲ ಮಾರ್ಗಗಳಲ್ಲಿಯೂ ಹಾಲಿನ ವಾಹನಗಳನ್ನು ಪೊಲೀಸರು ತಡೆದಿ ದ್ದಾರೆ. ಹಲವೆಡೆ ಗರಿಷ್ಠ ಪ್ರಯತ್ನ ಮಾಡಿ ಒದಗಿಸಲಾಗಿದೆ. ಆದರೂ ದಿನವೊಂದಕ್ಕೆ 60 ರಿಂದ 70 ಸಾವಿರ ಲೀ. ಹಾಲು, 10ರಿಂದ 12 ಸಾವಿರ ಲೀ. ಮೊಸರು ಮಾರಾಟ ಕಡಿಮೆಯಾಗಿದೆ. ಹಿಂದೆ ಕರ್ಫ್ಯೂ ಹೇರಿದ್ದಾಗ ಹಾಲಿನ ವಾಹನಗಳಿಗೆ ವಿನಾಯಿತಿ ನೀಡಲಾಗಿತ್ತು. ಈ ಬಾರಿ ಪೊಲೀಸರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಶನಿವಾರ ಜಿಲ್ಲಾಧಿಕಾರಿಯವರಿಗೂ ಮನವಿ ಮಾಡಿ ಹಾಲಿನ ವಾಹನಗಳಿಗೆ ವಿನಾಯಿತಿ ಪಾಸ್ ನೀಡಲು ಮನವಿ ಮಾಡಿದ್ದೇವೆ ಎಂದು ದ.ಕ. ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಈ ಬಗ್ಗೆ “ಉದಯವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.
“ವಿತರಣೆಗೆ ಅಡ್ಡಿ’
ಹೈನುಗಾರರಿಂದ ದಿನನಿತ್ಯ 4.55 ಲಕ್ಷ ಲೀ. ಹಾಲು ಸಂಗ್ರಹಿಸುತ್ತೇವೆ. ಅದನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ವಿತರಿಸಲು ಅಡ್ಡಿಯಾಗಿದೆ. ಉಳಿದಿರುವ ಹಾಲನ್ನು ಧಾರವಾಡ ಮತ್ತು ಹಾಸನದಲ್ಲಿರುವ ಹಾಲಿನ ಪುಡಿ ಘಟಕಗಳಿಗೆ ಅನಿವಾರ್ಯವಾಗಿ ರವಾನಿಸಬೇಕಾಗುತ್ತದೆ. ಇದು ಒಟ್ಟಾರೆ ಹಾಲು ಒಕ್ಕೂಟಕ್ಕೆ ಹೊರೆ, ಸಾರ್ವಜನಿಕರಿಗೂ ತೊಂದರೆ. ಜಿಲ್ಲಾಡಳಿತ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ರವಿರಾಜ ಹೆಗ್ಡೆ ಅವರು ಹೇಳಿದ್ದಾರೆ.
ಪೇಪರ್ ವಿತರಣೆಗೂ ಅಡ್ಡಿ
ಬಿಗಿ ಪೊಲೀಸ್ ಬಂದೋಬಸ್ತ್, ಕರ್ಫ್ಯೂ ವಿಧಿಸಿದ್ದರೂ ಆವಶ್ಯಕವಾದ ಹಾಲು, ದಿನಪತ್ರಿಕೆ ಮತ್ತು ಔಷಧ ಪೂರೈಕೆ-ಮಾರಾಟಕ್ಕೆ ವಿನಾಯಿತಿ ನೀಡಲಾಗುತ್ತದೆ. ಆದರೆ ಎರಡು ದಿನಗಳಲ್ಲಿ ಕರ್ಫ್ಯೂ ಸಂದರ್ಭ ದಿನಪತ್ರಿಕೆ ವಿತರಣೆ, ಮಾರಾಟವೂ ಬಹಳಷ್ಟು ಕಡೆ ಸಾಧ್ಯವಾಗಿಲ್ಲ. ಕುದ್ರೋಳಿ, ಕಂಕನಾಡಿ, ಮಂಗಳಾದೇವಿ, ಅಳಪೆ, ಸ್ಟೇಟ್ಬ್ಯಾಂಕ್ ಮುಂತಾದ ಕಡೆ ಪೇಪರ್ ವಿತರಣೆಗೆ ಪೊಲೀಸರು ಅವಕಾಶ ನೀಡಿರಲಿಲ್ಲ. ಮಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿಯೂ ಪೇಪರ್ ಮಾರಾಟ ಮಾಡುವುದಕ್ಕೆ ಅವಕಾಶ ನೀಡದೆ ಪೊಲೀಸರು ಬಲವಂತವಾಗಿ ಅಂಗಡಿ ಬಾಗಿಲು ಹಾಕಿಸಿದ್ದಾರೆ ಎಂದು ಕೆಲವು ಪತ್ರಿಕಾ ಏಜೆಂಟ್ಗಳು ದೂರಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.