AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು
Team Udayavani, Sep 10, 2024, 12:38 AM IST
ಮಂಗಳೂರು: ಮುಂಬಯಿಯ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನಲ್ಲಿರುವ ಕೀಮಾ ಹೊಟೇಲ್ ಒಂದರ ಕಾರ್ಪೊರೇಟ್ ಕಟ್ಟಡದಲ್ಲಿ ಹೊರಾಂಗಣದ ಏರ್ ಕಂಡಿಷನರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ಸೂರಿಂಜೆ ಮೂಲದ ತಾರಾನಾಥ ವಿ.ಬಂಜನ್ (50) ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು 4 ದಿನಗಳಿಂದ ಚಿಕಿತ್ಸೆ ನಡೆಯುತ್ತಿದ್ದ ಅವರು ಸೆ.8ರಂದು ಸಾವನ್ನಪ್ಪಿದರು. ಕೆಟ್ಟು ಹೋಗಿದ್ದ ಏರ್ ಕಂಡಿಷನರ್ ಅನ್ನು ದುರಸ್ತಿ ಮಾಡುತ್ತಿದ್ದಾಗ ಘಟನೆ ನಡೆದಿದೆ.
ಜತೆ ಕೆಲಸಗಾರರಾಗಿದ್ದ ವಾಮನ ಬಂಜನ್ ಮತ್ತು ಸುಜಿತ್ ಪಾಲ್ ಕೂಡ ಗಾಯಗೊಂಡಿದ್ದಾರೆ.
ಹೊಟೇಲ್ ಮಾಲಕ ಎನ್.ಟಿ.ಪೂಜಾರಿ ಅವರು ಗಾಯಾಳುಗಳ ಚಿಕಿತ್ಸೆಗೆ ನೆರವಾಗಿದ್ದು, ಬಂಜನ್ ಅವರು ಆಸ್ಪತ್ರೆಯಲ್ಲಿದ್ದ ಸಂದರ್ಭದ ಸಂಪೂರ್ಣ ಚಿಕಿತ್ಸೆಯ 8 ಲಕ್ಷ ರೂ. ವೆಚ್ಚವನ್ನು ಭರಿಸಿದ್ದಾರೆ.
ಮೂಲತಃ ಸೂರಿಂಜೆಯವರಾದ ತಾರಾನಾಥ ವಾಮಯ ಬಂಜನ್ ಅವರು ಭಯಂದರ್ ಪೂರ್ವದ ಸಾಯಿ ಬಾಬಾ ನಗರ ಬಾಲಕೃಷ್ಣ ಅಪಾರ್ಟ್ಮೆಂಟ್ ನಿವಾಸಿಯಾಗಿದ್ದರು. ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.