Anganwadi workers; ಅಂಗನವಾಡಿ ಕಾರ್ಯಕರ್ತೆಯರಿಗೆ ಕಳಪೆ ಸೀರೆ

15 ದಿನಗಳಲ್ಲೇ ನೂಲು ಬಿಟ್ಟ ಸೀರೆಯಲ್ಲಿ ಕಪ್ಪು ಕಲೆಗಳೂ ಪ್ರತ್ಯಕ್ಷ!

Team Udayavani, Oct 15, 2024, 6:35 AM IST

1-seers

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸರಕಾರ ಸಮವಸ್ತ್ರವಾಗಿ ನೀಡಿದ ಸೀರೆ ಹದಿನೈದು ದಿನಗಳಲ್ಲೇ ನೂಲು ಬಿಟ್ಟಿದ್ದು, ಇದು ತೀರಾ ಕಳಪೆಯಾಗಿದೆ ಎಂಬ ದೂರು ಕೇಳಿ ಬರುತ್ತಿದೆ.

ರಾಜ್ಯದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ “ಸಮಗ್ರ ಶಿಶು ಅಭಿವೃದ್ಧಿ ಯೋಜನೆ’ಯಡಿ (ಐಸಿಡಿಎಸ್‌) 2024-25ನೇ ಸಾಲಿನಲ್ಲಿ ಸಮವಸ್ತ್ರವಾಗಿ ಸೀರೆ ವಿತರಿಸಿತ್ತು.

ಹದಿನೈದು ದಿನವಾದದಷ್ಟೇ

ಒಂದು ಅಂಗನವಾಡಿಯ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ತಲಾ ಎರಡರಂತೆ ಒಟ್ಟು ನಾಲ್ಕು ಸೀರೆಗಳನ್ನು ವಿತರಿಸಲಾಗಿದೆ. ಮುಂದಿನ ಒಂದು ವರ್ಷದ ತನಕ ದಿನಂಪ್ರತಿ ಈ ಸೀರೆಯನ್ನು ಸಮವಸ್ತ್ರವನ್ನಾಗಿ ಬಳಸಲು ಸೂಚಿಸಲಾಗಿತ್ತು. ಸೆ.15ರಂದು ಸೀರೆ ಬಂದಿದ್ದು, ಅ.2ರಿಂದ ಉಡುವಂತೆ ಸೂಚಿಸಲಾಗಿತ್ತು. ಸೀರೆ ಉಡಲು ಆರಂಭಿಸಿದ ಹದಿನೈದು ದಿನದಲ್ಲೇ ಸೀರೆಯ ಒಂದು ಭಾಗದಲ್ಲಿ ನೂಲು ಬಿಡಲು ಆರಂಭಿಸಿದೆ. ಕೆಲವು ಸೀರೆಗಳಲ್ಲಿ ಕಪ್ಪು ಕಲೆಗಳೂ ಕಂಡು ಬಂದಿವೆ ಎಂದು ದೂರಲಾಗಿದೆ.

ಸೀರೆಯ ಬೆಲೆ 400 ರೂಪಾಯಿ!

ರಾಜ್ಯದ 69,919 ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,37,509 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿರಿಗೆ ಸರಕಾರವೇ ನೇರವಾಗಿ ಸೀರೆ ವಿತರಿಸಿದೆ. ಸೀರೆಗೆ ತಲಾ  400 ರೂ. ಬೆಲೆ ನಿಗದಿಯಾಗಿದೆ. ಆದರೆ  ಗುಣಮಟ್ಟ ನೋಡುವಾಗ 100 ರೂ.ನ ಆಸುಪಾಸಿನಲ್ಲಿದೆ ಎನ್ನುತ್ತಾರೆ ಫ‌ಲಾನುಭವಿಗಳು.

ಸಮವಸ್ತ್ರವಾಗಿ ನೀಡಿರುವ ಸೀರೆ ಹದಿನೈದು ದಿನದಲ್ಲಿಯೇ ನೂಲು ಬಿಟ್ಟಿದೆ. ಹೀಗಾಗಿ ಇದನ್ನು ಒಂದು ವರ್ಷ ಉಡುವುದು ಹೇಗೆ? ಹಲವಾರು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಈ ಸಮಸ್ಯೆಯನ್ನು ಪ್ರಸ್ತಾವಿಸಿದ್ದಾರೆ.

ತಾರಾ ಜೆ. ಬಲ್ಲಾಳ್‌ ಅಧ್ಯಕ್ಷೆ,ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘ, ದ.ಕ.ಜಿಲ್ಲೆ

 

ಟಾಪ್ ನ್ಯೂಸ್

salman

Baba Siddique Case: ಸಲ್ಮಾನ್‌ಗೆ ನೆರವಾಗುವ ಎಲ್ಲರಿಗೂ ಇದೇ ಗತಿ: ಬಿಷ್ಣೋಯ್‌ ಗ್ಯಾಂಗ್‌!

Chinnaswamy

India-New Zeland Test: ಚಿನ್ನಸ್ವಾಮಿ ಮೈದಾನಕ್ಕೆ 25ನೇ ಟೆಸ್ಟ್‌ ಪಂದ್ಯದ ಗರಿಮೆ

HAL

Central Government: ಭದ್ರತಾ ಉದ್ಯಮದ ಪ್ರಧಾನ ಸಂಸ್ಥೆ ಎಚ್‌ಎಎಲ್‌ಗೆ “ಮಹಾರತ್ನ’

1-kp

Kundapura; ಸ್ಪರ್ಧೆಗೆ ತೆರಳಲು ವಿಮಾನ ಟೆಕೆಟ್‌ಗೂ ಹಣ ಇಲ್ಲ!

china-Border

Border Dispute: ಭಾರತದ ಗಡಿಯಲ್ಲಿ ಚೀನಾ ಹೊಸ ವಸಾಹತು ನಿರ್ಮಾಣ

Jai-Shanakar

SCO Meet: ಶಾಂಘೈ ಶೃಂಗಸಭೆ: ಇಂದು ಪಾಕಿಸ್ಥಾನಕ್ಕೆ ವಿದೇಶಾಂಗ ಸಚಿವ ಜೈಶಂಕರ್‌

0555

Horoscope: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ ನಿಮ್ಮದಾಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adike

Areca nut; ಅಡಿಕೆ ಎಲೆ ಹಳದಿ ವ್ಯಾಪಕ ; ನಾಲ್ಕು ವರ್ಷಗಳಿಂದ ನಡೆದೇ ಇಲ್ಲ ಸಮೀಕ್ಷೆ

police

Belthangady; ಟ್ರಸ್ಟ್‌ ಕುರಿತು ಅವಹೇಳನಕಾರಿ ಹೇಳಿಕೆ

1-ra

Aranthodu; ರಬ್ಬರ್‌ ಆ್ಯಸಿಡ್‌ ಸೇವಿಸಿದ್ದ ವ್ಯಕ್ತಿ ಸಾ*ವು

man-a

Belthangady: ಬಾವಿಗೆ ಬಿದ್ದು ಮಹಿಳೆ ಸಾವು

4

Belthangady: ಮೀನು ಹಿಡಿಯಲು ಹೋಗಿದ್ದ ಯುವಕ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

salman

Baba Siddique Case: ಸಲ್ಮಾನ್‌ಗೆ ನೆರವಾಗುವ ಎಲ್ಲರಿಗೂ ಇದೇ ಗತಿ: ಬಿಷ್ಣೋಯ್‌ ಗ್ಯಾಂಗ್‌!

Chinnaswamy

India-New Zeland Test: ಚಿನ್ನಸ್ವಾಮಿ ಮೈದಾನಕ್ಕೆ 25ನೇ ಟೆಸ್ಟ್‌ ಪಂದ್ಯದ ಗರಿಮೆ

HAL

Central Government: ಭದ್ರತಾ ಉದ್ಯಮದ ಪ್ರಧಾನ ಸಂಸ್ಥೆ ಎಚ್‌ಎಎಲ್‌ಗೆ “ಮಹಾರತ್ನ’

1-kp

Kundapura; ಸ್ಪರ್ಧೆಗೆ ತೆರಳಲು ವಿಮಾನ ಟೆಕೆಟ್‌ಗೂ ಹಣ ಇಲ್ಲ!

china-Border

Border Dispute: ಭಾರತದ ಗಡಿಯಲ್ಲಿ ಚೀನಾ ಹೊಸ ವಸಾಹತು ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.