ಸುರತ್ಕಲ್ನಲ್ಲಿ ಪವಿತ್ರಾ ಗೌಡ ಹೋಲುವ ಕೇಸ್: ಯುವತಿಗೆ ಅಶ್ಲೀಲ ಫೋಟೋ- ಸಂದೇಶ ಕಳಿಸಿ ಕಿರುಕುಳ
ಕಿರುಕುಳಕ್ಕೆ ಬೇಸತ್ತು ಅನಾರೋಗ್ಯಕ್ಕೆ ಒಳಗಾದ ಯುವತಿ
Team Udayavani, Oct 1, 2024, 12:09 PM IST
ಸುರತ್ಕಲ್: ಚಿತ್ರನಟಿ ಪವಿತ್ರ ಗೌಡ ಅವರ ಕೇಸಿಗೆ ಹೋಲುವ ಪ್ರಕರಣವೊಂದು ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ನಡೆದಿರುವುದು ವರದಿಯಾಗಿದೆ.
ಮಂಗಳೂರಿನಲ್ಲಿ ಶಿಕ್ಷ,ಣ ಪಡೆಯುತ್ತಿರುವ ಯುವತಿಗೆ ಯುವಕನೊಬ್ಬ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸಿ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಏನಿದು ಘಟನೆ?: 19 ವರ್ಷ ಯುವತಿ ಈ ಹಿಂದೆ ಸುರತ್ಕಲ್ ನಲ್ಲಿ ಕಲಿಯುತ್ತಿರುವಾಗ ಮಂಜನಾಡಿ ಬಳಿಯ ಮೊಹಮ್ಮದ್ ಶಾಕಿಬ್ ಎಂಬಾತ ಚೊಕ್ಕಬೆಟ್ಟಿನ ಸ್ನೇಹಿತೆಯ ಬಳಿಯಿಂದ ನಂಬರ್ ಪಡೆದುಕೊಂಡು ಯುವತಿಗೆ ಪ್ರತಿದಿನ ಮೆಸೇಜ್ ಮಾಡುತ್ತಿದ್ದ. ಯುವತಿಯ ಹಿಂದೆ ಬಿದ್ದಿದ್ದ ಶಾಕಿಬ್ ಆಕೆಗೆ ವಾಟ್ಸಾಪ್ನಲ್ಲಿ ಪ್ರತಿದಿನ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸುತ್ತಿದ್ದ. ಯುವತಿಗೆ ಮರ್ಮಾಂಗದ ಚಿತ್ರವನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ ಎಂದು ದೂರಿನಲ್ಲಿ ಹೇಳಲಾಗಿದೆ.
ಇದರಿಂದಾಗಿ ಮಾನಸಿಕವಾಗಿ ನೊಂದ ಯುವತಿ ಅನಾರೋಗ್ಯಕ್ಕೆ ತುತ್ತಾಗಿದ್ದಾಳೆ. ಆಕೆ ಕಡಿಮೆ ರಕ್ತದೊತ್ತಡದ ಸಮಸ್ಯೆಗೂ ಒಳಗಾಗಿ ಕಾಲೇಜಿಗೂ ಹೋಗಲಾಗದೆ ಮನೆಯಲ್ಲಿಯೇ ಉಳಿಯುವಂತ ಸ್ಥಿತಿಗೆ ಬಂದಿದ್ದಾಳೆ.
ಈ ವಿಚಾರವನ್ನು ಯುವತಿ ಪೋಷಕರಿಗೆ ತಿಳಿಸಿದ್ದು, ಬಳಿಕ ಯುವಕನ ವಿರುದ್ಧ ದೂರು ದಾಖಲಿಸಿದ್ದಾರೆ, ದೂರು ಸ್ವೀಕರಿಸಿದ ಪೊಲೀಸರು ಬೆಂಗಳೂರಿನಲ್ಲಿ ಕೆಲಸಕ್ಕಿದ್ದ ಶಾಕಿಬ್ ನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.
ಯುವತಿ ಕಡೆಯವರು ಒಟ್ಟಾಗಿ ಠಾಣೆಯಲ್ಲಿ ಸೇರಿ ಯುವಕನ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಹೋಟೆಲ್ ಒಂದರಲ್ಲಿ ರಿಸೆಪ್ಷನ್ ವಿಭಾಗದಲ್ಲಿ ಕೆಲಸಕ್ಕೆ ಸೇರಿರುವ ಈ ಯುವಕ ಹೋಟೆಲ್ ಗೆ ಬರುವ ಗ್ರಾಹಕರ ವಿರುದ್ದವೂ ಇಂತಹ ದುಷ್ಕೃತ್ಯ ಮಾಡಿದ್ದಾನೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಯಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.