ಸೌಜನ್ಯಾ ಪ್ರಕರಣ ಮರು ತನಿಖೆಗೆ ABVP ಆಗ್ರಹ
Team Udayavani, Aug 12, 2023, 1:34 AM IST
ಮಂಗಳೂರು: ಸೌಜನ್ಯಾ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಬಿವಿಪಿ ಮನವಿ ಸಲ್ಲಿಸಿದೆ.
ಪ್ರಕರಣ ನಡೆದ ಮೊದಲ ದಿನದಿಂದಲೂ ವಿದ್ಯಾರ್ಥಿ ಪರಿಷತ್ ರಾಜ್ಯಾದ್ಯಂತ ಉಗ್ರ ಹೋರಾಟವನ್ನು ನಡೆಸಿ ಪ್ರಕರಣವನ್ನು ಭೇದಿಸಲು ಸಿಬಿಐ ತನಿಖೆಗೆ ಆಗ್ರಹಿಸಿತ್ತು. ಸಂಘಟಿತ ಹೊರಾಟದ ಫಲವಾಗಿ ರಾಜ್ಯ ಸರಕಾರ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಆದರೆ ಸಿಬಿಐ ತನಿಖೆಯ ಅನಂತರ ನ್ಯಾಯಾಲಯದ ಅಂತಿಮ ತೀರ್ಪಿನಲ್ಲಿ ಸೌಜನ್ಯಾಗೆ ನ್ಯಾಯ ಸಿಗದೇ ಇರುವುದು ಅತ್ಯಂತ ಬೇಸರದ ಸಂಗತಿ. ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ಕೂಡಲೇ ಮರು ತನಿಖೆಗೆ ಆದೇಶಿಸಬೇಕು. ತನ್ಮೂಲಕ ನೈಜ ಅಪರಾಧಿಗಳನ್ನು ಪತ್ತೆ ಮಾಡಿ ಬಂಧಿಸಿ ಸೌಜನ್ಯಾ ಹಾಗೂ ನೊಂದ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದೆ.
ಜತೆಗೆ ಸೌಜನ್ಯಾ ಹಾಗೂ ಸಂಬಂಧಿತ ಘಟನೆಯನ್ನು ದಾಳವಾಗಿ ಉಪಯೋಗಿಸಿ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಘನತೆಗೆ ಮತ್ತು ಸಾಮಾನ್ಯ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಪ್ರಕರಣಗಳು ಕಂಡು ಬರುತ್ತಿದ್ದು ಇದನ್ನು ರಾಜ್ಯ ಸರಕಾರ ಗಮನಿಸಿ ಕೂಡಲೇ ಹತ್ತಿಕ್ಕಬೇಕು ಎಂದು ಎಬಿವಿಪಿ ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ
Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ
Kutumba Awards-2024: ವೀಕೆಂಡ್ ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ
Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್
Harapanahalli: ಕೆಎಸ್ಆರ್ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.