Mangalore: ಬಾಲಕಿಯ ಮೇಲೆ ಅತ್ಯಾಚಾರ ಆರೋಪಿಗೆ 20 ವರ್ಷ ಕಠಿನ ಶಿಕ್ಷೆ
Team Udayavani, Aug 3, 2024, 8:05 PM IST
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ನ್ಯಾಯಾಲಯ 20 ವರ್ಷಗಳ ಕಠಿನ ಶಿಕ್ಷೆ ವಿಧಿಸಿದೆ.
ಬೆಳ್ತಂಗಡಿ ತಾಲೂಕು ಕೊಕ್ರಾಡಿಯ ಯೋಗೀಶ (26) ಶಿಕ್ಷೆಗೊಳಗಾದವನು. 2020ರಲ್ಲಿ ಆರೋಪಿ ಬಾಲಕಿಯನ್ನು ಪುಸಲಾಯಿಸಿಕೊಂಡು ಕಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ. ಬಾಲಕಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ವೃತ್ತ ನಿರೀಕ್ಷಕ ಶಿವ ಕುಮಾರ್ ಬಿ. ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. 13 ಸಾಕ್ಷಿದಾರರನ್ನು ವಿಚಾರಿಸಿ 29 ದಾಖಲೆಗಳನ್ನು ಗುರುತಿಸಲಾಗಿತ್ತು. ಡಿಎನ್ಎ ವರದಿಗಳು, ಸಾಕ್ಷ್ಯ, ಪೂರಕ ಸಾಕ್ಷ್ಯ ಪರಿಗಣಿಸಿ ಹಾಗೂ ವಾದ ವಿವಾದ ಆಲಿಸಿದ ನ್ಯಾಯಾಲಯವು ಆರೋಪಿತನ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿದೆ. ಆ. 2ರಂದು ನ್ಯಾಯಾಧೀಶರಾದ ಮಾನು ಕೆ.ಎಸ್.ಅವರು ಆರೋಪಿಗೆ ಪೋಕ್ಸೋ ಕಾಯಿದೆಯಂತೆ 20 ವರ್ಷಗಳ ಕಠಿನ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದ್ದಾರೆ. ದಂಡದ ಹಣವನ್ನು ನೊಂದ ಬಾಲಕಿಗೆ ಪಾವತಿಸುವಂತೆ ಆದೇಶಿಸಿದ್ದಾರೆ. ಅಲ್ಲದೆ ಸಂತ್ರಸ್ತರ ಪರಿಹಾರ ಯೋಜನೆಯಡಿ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 1,50,000 ರೂ. ಹಾಗೂ ಆಕೆಯ ಹೆಣ್ಣು ಮಗುವಿಗೆ 3 ಲಕ್ಷ ರೂ. ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಸರಕಾರದ ಪರವಾಗಿ ವಿಶೇಷ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.