ಮಂಗಳೂರು ವಿಮಾನ ನಿಲ್ದಾಣ: ಬಳಕೆದಾರರ ಶುಲ್ಕ ಏರಿಕೆ ಭೀತಿ
Team Udayavani, Aug 27, 2022, 6:30 AM IST
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದ ಬಳಕೆದಾರರ ಅಭಿವೃದ್ಧಿ ಶುಲ್ಕ (ಯುಡಿಎಫ್)ವನ್ನು ಏರಿಸುವ ಬಗ್ಗೆ ಅದಾನಿ ಗ್ರೂಪ್, ಏರ್ಪೋರ್ಟ್ ಎಕನಾಮಿಕ್ ರೆಗ್ಯುಲೇಟರಿ ಅಥಾರಿಟಿ (ಎಇಆರ್ಎ)ಗೆ ಪ್ರಸ್ತಾವನೆ ಸಲ್ಲಿಸಿದೆ.
ಪ್ರಸ್ತುತ ದೇಶೀಯ ಪ್ರಯಾಣಕ್ಕೆ 150 ರೂ. ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ 825 ರೂ. ಯುಡಿಎಫ್ ಇದೆ. 2026ರ ಮಾರ್ಚ್ 31ರ ವರೆಗೆ ಯುಡಿಎಫ್ ಅನ್ನು ಹೆಚ್ಚಿಸಲು ಅದಾನಿ ಸಂಸ್ಥೆ ಉದ್ದೇಶಿಸಿದೆ.
ಪ್ರಸ್ತಾವನೆಯಂತೆ ಅಕ್ಟೋಬರ್ನಿಂದ ನಿರ್ಗಮನ ಪ್ರಯಾಣಿಕರಿಗೆ 250 ರೂ.ಗೆ ಏರಿಕೆಯಾಗಲಿದ್ದು, 2024ರ ಎಪ್ರಿಲ್ 1ರಿಂದ 725 ರೂ.ಗಳಿಗೆ ಏರಿಸಲು ಪ್ರಸ್ತಾವಿಸಲಾಗಿದೆ. ದೇಶೀಯವಾಗಿ ಆಗಮಿಸುವ ಪ್ರಯಾಣಿಕರೂ ಅಷ್ಟೇ ಮೊತ್ತವನ್ನು ಪಾವತಿಸಬೇಕಿದೆ.
ಈ ಪ್ರಸ್ತಾವನೆಗೆ ಪ್ರಯಾಣಿಕರಿಂದ ವಿರೋಧ ವ್ಯಕ್ತವಾಗಿದ್ದು, ಪ್ರಧಾನಮಂತ್ರಿ ಕಚೇರಿ, ಸಚಿವೆೆ ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿ ಮೊದಲಾದವರಿಗೆ ಟ್ವೀಟ್ ಮಾಡಿ ದರ ಹೆಚ್ಚಳ ಮಾಡಿರುವುದನ್ನು ಖಂಡಿಸಿದ್ದಾರೆ.
ಶೇ. 30ರಷ್ಟು ದರ ಹೆಚ್ಚಿಸುವ ಮೂಲಕ ಪ್ರಯಾಣಿಕರ ಮೇಲೆ ವಿಮಾನ ನಿಲ್ದಾಣ ಸಂಸ್ಥೆ ಗದಾಪ್ರಹಾರ ನಡೆಸುತ್ತಿದೆ ಎಂದು ಬಳಕೆದಾರರಾದ ಮೋಹನದಾಸ ಕಾಮತ್ ಕಳವಳ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ವಿಮಾನ ನಿಲ್ದಾಣದಲ್ಲಿ ಜಾರಿಯಲ್ಲಿರುವ ದರಪಟ್ಟಿ ಹಳೆಯದು. 2010ರಲ್ಲಿ ಕೊನೇ ಬಾರಿಗೆ ಯುಡಿಎಫ್ ದರ ಪರಿಷ್ಕರಣೆಯಾಗಿತ್ತು ಎಂದು ಆಗಸ್ಟ್ 12ರಂದು ಅದಾನಿ ಗ್ರೂಪ್ ಎಇಆರ್ಎ ಕಳುಹಿಸಿರುವ ಪ್ರಸ್ತಾವನೆಯಲ್ಲಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.