“ವ್ಯಸನ ಮುಕ್ತಿಯ ಸಂಕಲ್ಪವೇ ಸುಧಾರಣೆಗೆ ನಾಂದಿ’

ಜನಜಾಗೃತಿ ವೇದಿಕೆ ನವಜೀವನ ಸಮಿತಿ ಸದಸ್ಯರ ಶತದಿನೋತ್ಸವ, ಸಾಧಕರ ಅಭಿನಂದನೆ

Team Udayavani, Apr 9, 2022, 4:26 AM IST

“ವ್ಯಸನ ಮುಕ್ತಿಯ ಸಂಕಲ್ಪವೇ ಸುಧಾರಣೆಗೆ ನಾಂದಿ’

ಬೆಳ್ತಂಗಡಿ: ಮನುಷ್ಯನ ವಿನಾ ಬೇರೆ ಯಾವುದೇ ಪ್ರಾಣಿಗಳು ದುರಾಭ್ಯಾಸದಲ್ಲಿ ತೊಡಗುವುದಿಲ್ಲ. ಪ್ರಾಣಿಗಳಿಂದ ಶ್ರೇಷ್ಠರಾಗಿರುವ ನಾವು ತಮ್ಮ ಪೀಳಿಗೆಗೆ ಯಾವ ಸಂದೇಶ ನೀಡುತ್ತಿದ್ದೇವೆ ಎಂಬುದು ಮುಖ್ಯ. ಸಂಕಲ್ಪ ಮತ್ತು ವಿಕಲ್ಪ ಮನೋಭಾವ ಎಲ್ಲರಲ್ಲೂ ಇದೆ.

ವ್ಯಸನಮುಕ್ತರಾಗಬೇಕೆಂಬ ಸಂಕಲ್ಪವೇ ಸಾಮಾಜಿಕ ಸುಧಾರಣೆಗೆ ನಾಂದಿ ಎಂದು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವೀ. ಹೆಗ್ಗಡೆ ಹೇಳಿದರು.

ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಎ. 5ರಂದು ಧರ್ಮಸ್ಥಳ ಜನಜಾಗೃತಿ ವೇದಿಕೆಯಿಂದ 2021-22ನೇ ಸಾಲಿನಲ್ಲಿ ನಡೆಸಲಾದ ಮದ್ಯವರ್ಜನ ಶಿಬಿರಗಳ ನವಜೀವನ ಸಮಿತಿ ಸದಸ್ಯರ ಶತದಿನೋತ್ಸವ ಮತ್ತು ಸಾಧಕರ ಅಭಿನಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮದ್ಯವ್ಯಸನವು ಮನಸ್ಸಿನ ಸಂಕಲ್ಪ ಕುಗ್ಗಿಸುತ್ತದೆ. ಆದರ್ಶ ವ್ಯಕ್ತಿತ್ವ, ಪ್ರೀತಿ- ವಿಶ್ವಾಸ ನಾಶ ಮಾಡಿ ಸಂಬಂಧ ಗಳನ್ನು ಕೆಡಿಸುತ್ತದೆ. ಶಿಬಿರದಲ್ಲಿ ಪಾಲ್ಗೊಂಡು 100 ದಿನ ಮದ್ಯವಸನ ತ್ಯಜಿಸುವ ಮೂಲಕ ನೈಜ ದೇವರ ದರ್ಶನವಾಗಿದೆ. ನೂರು ದಿನಗಳ ಈ ಸಂಕಲ್ಪ ನೂರು ವರ್ಷಗಳ ವರೆಗೆ ಕಡೆದಂತೆ ಕಾಪಾಡಿ ಕುಟುಂಬವನ್ನು ಪ್ರೀತಿಯಿಂದ ಕಾಣುವ ಮೂಲಕ ನವಜೀವನ ಪ್ರಾಪ್ತಿಯಾಗಲಿ ಎಂದು ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹರಸಿದರು.

ಮಂಗಳೂರಿನ ಫಾದರ್‌ ಮುಲ್ಲರ್ಸ್‌ ನರ್ಸಿಂಗ್‌ ಕಾಲೇಜಿನ ವಿಭಾಗ ಮುಖ್ಯಸ್ಥ ಡಾ| ಶಿಜಿ ಪಿ.ಜೆ. ಅವರು ಶಿಬಿರಾರ್ಥಿಗಳನ್ನು ಆಧಾರವಾಗಿಟ್ಟುಕೊಂಡು ರಚಿಸಿದ ಸಂಶೋಧನ ಪ್ರಬಂಧಕ್ಕೆ ಪಿಎಚ್‌ಡಿ ಪ್ರಾಪ್ತಿ ಯಾಗಿದ್ದು, ಅದರ ಪ್ರತಿ ಯನ್ನು ಡಾ| ಹೆಗ್ಗಡೆ ಅವರಿಗೆ ಹಸ್ತಾಂತರಿಸಿದರು.

ವಿಧಾನ ಪರಿಷತ್‌ ಸದಸ್ಯ ಕೆ. ಪ್ರತಾಪಸಿಂಹ ನಾಯಕ್‌, ಉಡುಪಿ ಡಾ| ಎ.ವಿ. ಬಾಳಿಗಾ ಆಸ್ಪತ್ರೆಯ ಮನೋವೈದ್ಯ ಡಾ| ಪಿ.ವಿ. ಭಂಡಾರಿ ಮಾತನಾಡಿದರು. ಶ್ರೀಧಾಮ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಮಂಗಳೂರು ಕೆ.ಎಸ್‌. ಹೆಗ್ಡೆ ಆಸ್ಪತ್ರೆ ಮನೋವೈದ್ಯ ಡಾ| ಶ್ರೀನಿವಾಸ ಭಟ್‌, ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯನಿರ್ವಹಣಾಧಿಕಾರಿ ಅನಿಲ್‌ ಕುಮಾರ್‌ ಉಪಸ್ಥಿತರಿದ್ದರು.

ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್‌ ವಿ. ಸ್ವಾಗತಿಸಿದರು. ವೇದಿಕೆಯ ರಾಜ್ಯಾಧ್ಯಕ್ಷ ರಾಮಸ್ವಾಮಿ ವಂದಿಸಿದರು. ಯೋಜನಾಧಿಕಾರಿಗಳಾದ ಗಣೇಶ್‌ ಪಿ. ಆಚಾರ್ಯ, ಮೋಹನ್‌ ಕಾರ್ಯಕ್ರಮ ನಿರೂಪಿಸಿದರು.

ಜಾಗೃತಿ ಅಣ್ಣ, ಜಾಗೃತಿ ಮಿತ್ರ ಪ್ರಶಸ್ತಿ
ಪಾನಮುಕ್ತ ಸಾಧಕರಾದ ಕಾಸರಗೋಡು ತಾಲೂಕಿನ ನಾರಾಯಣ ಪೂಜಾರಿ ಮತ್ತು ಶಿರಾ ತಾಲೂಕಿನ ರಂಗನಾಥ್‌ ಟಿ. ಅವರಿಗೆ “ಜಾಗೃತಿ ಅಣ್ಣ’ ಪ್ರಶಸ್ತಿ ಹಾಗೂ ಶಿಡ್ಲಘಟ್ಟ ತಾಲೂಕಿನ ದೇವರಾಜ್‌, ಮದ್ದೂರು ತಾಲೂಕಿನ ವೆಂಕಟೇಶ್‌ ಬಿ.ಆರ್‌., ತೀರ್ಥಹಳ್ಳಿ ತಾಲೂಕಿನ ಭಾಸ್ಕರ್‌ ಆಚಾರ್‌, ಪಿರಿಯಾಪಟ್ಟಣದ ವಸಂತ ಜೆ. ಅವರಿಗೆ “ಜಾಗೃತಿ ಮಿತ್ರ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ದಿಲೀಪ್‌ ಪಿರಿಯಾಪಟ್ಟಣ ಹಾಗೂ ಚೆನ್ನರಾಯಪಟ್ಟಣದ ಶಿವಮ್ಮ ಗಂಗಾಧರ್‌ ಅನಿಸಿಕೆ ಹಂಚಿಕೊಂಡರು.

ನವಜೀವನ ಗುರುತಿನ ಚೀಟಿ ವಿತರಿಸಲಾಯಿತು. 2021-22ನೇ ಸಾಲಿನಲ್ಲಿ ಮೈಸೂರು, ಬೆಂಗಳೂರು ಮತ್ತು ಉಡುಪಿ ಪ್ರಾದೇಶಿಕ ವಿಭಾಗದ 14 ಶಿಬಿರಗಳ‌ 696 ನವಜೀವನ ಸದಸ್ಯರು ಮತ್ತು ಕುಟುಂಬಸ್ಥರು ಸೇರಿ ಒಟ್ಟು 1,520 ಮಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.