ದೇಸಿ ನಾಯಿ, ಬೆಕ್ಕಿನ ಮರಿಗಳ ದತ್ತು ಕೊಡುವ ಶಿಬಿರ 


Team Udayavani, Apr 30, 2018, 11:27 AM IST

30-April-6.jpg

ಮಹಾನಗರ: ಅನಾಥ ನಾಯಿ ಬೆಕ್ಕುಗಳಿಗೆ ಅಕ್ಕರೆಯ ಆಶ್ರಯ ಕಲ್ಪಿಸುವ ಉದಾತ್ತ ಕಾರ್ಯಕ್ರಮ ಇದು. ರಸ್ತೆಗಳಲ್ಲಿ ವಾಹನಗಳ ಅಡಿಗೆ ಸಿಲುಕಿ ಜೀವ ಕಳೆದುಕೊಳ್ಳಬೇಕಾಗಿದ್ದ ಬೀದಿಬದಿ ಗಳಲ್ಲಿ ಆಹಾರವಿಲ್ಲದೆ ಹಸಿವಿನಿಂದ ನರಳಬೇಕಾಗಿದ್ದ ಮುಗ್ಧ ಜೀವಿಗಳಿಗೆ ನೆಲೆಯೊಂದನ್ನು ಕಲ್ಪಿಸುವ ನಿಟ್ಟಿನಲ್ಲಿ ನಗರದಲ್ಲಿ ನಡೆದ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಶಕ್ತಿನಗರದ ಅನಿಮಲ್‌ ಕೇರ್‌ ಟ್ರಸ್ಟ್‌ ಆಶ್ರಯದಲ್ಲಿ ಉರ್ವ ಕೆನರಾ ಪ್ರೌಢ ಶಾಲೆ ಆವರಣದಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಕೊಡುವ ಶಿಬಿರ ರವಿವಾರ ಆಯೋಜಿಸಲಾಗಿತ್ತು.

11 ನಾಯಿ, ಬೆಕ್ಕಿನ ಮರಿ ದತ್ತು
ಶಿಬಿರದಲ್ಲಿ 11 ನಾಯಿ ಮರಿಗಳು ಹಾಗೂ 4 ಬೆಕ್ಕಿನ ಮರಿಗಳನ್ನು ಅರ್ಹರಿಗೆ ದತ್ತು ನೀಡಲಾಯಿತು. ದತ್ತು ಪಡೆಯಲು ಇಚ್ಛಿಸುವ ಜನರು ನಿಗದಿತ ಮೊತ್ತ ಪಾವತಿಸಿ, ಸೂಕ್ತ ದಾಖಲೆಗಳೊಂದಿಗೆ ಶಿಬಿರಕ್ಕೆ ಆಗಮಿಸಿ ತಮಗೆ ಮೆಚ್ಚುಗೆಯಾದ ನಾಯಿ ಹಾಗೂ ಬೆಕ್ಕುಗಳನ್ನು ದತ್ತು ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ದತ್ತು ನೀಡಿದ ನಾಯಿ ಅಥವಾ ಬೆಕ್ಕಿನ ಮರಿಗಳ ತಿಂಗಳಿಗೊಮ್ಮೆ ಅನಿಮಲ್‌ ಕೇರ್‌ ಟ್ರಸ್ಟ್‌ಗೆ ವರದಿಯನ್ನು ನೀಡಬೇಕಾಗುತ್ತದೆ.

ರಸ್ತೆ ಬದಿಗಳಲ್ಲಿ ಅನಾಥವಾಗಿ ಬಿದ್ದ, ಗಾಯಗೊಂಡ ನಾಯಿ, ಬೆಕ್ಕು, ದನ ಹಾಗೂ ಪಕ್ಷಿಗಳು ಸೇರಿದಂತೆ ಸುಮಾರು 300ಕ್ಕೂ ಅಧಿಕ ಪ್ರಾಣಿಗಳಿಗೆ ಶಕ್ತಿ ನಗರದ ಅನಿಮಲ್‌ ಕೇರ್‌ ಟ್ರಸ್ಟ್‌ ನಲ್ಲಿ ನೆಲೆ ನೀಡಲಾಗಿದೆ. 2000ರಲ್ಲಿ ಆರಂಭಗೊಂಡ ಸಂಸ್ಥೆಯಲ್ಲಿ 50ಕ್ಕೂ ಅಧಿಕ ಮಂದಿ ಸ್ವಯಂಸೇವಕರಿದ್ದು, ಒಬ್ಬ ಕನ್ಸಲ್ಟೆಂಟ್‌ ವೈದ್ಯರಿದ್ದಾರೆ. ತಿಂಗಳಿಗೆ ಎರಡು ಬಾರಿ ವಿವಿಧ ಭಾಗದಲ್ಲಿ ದತ್ತು ನೀಡುವ ಕಾರ್ಯಕ್ರಮವನ್ನು ಆಯೋಜಿಸಿ ಸಂಸ್ಥೆಯಲ್ಲಿ ಪ್ರಾಣಿಗಳನ್ನು ದತ್ತು ನೀಡುತ್ತದೆ. ದತ್ತು ನೀಡಿದ ಬಳಿಕ ಅಲ್ಲಿನ ಸ್ವಯಂಸೇವಕರು ಕರೆ ಮಾಡಿ ಅಥವಾ ಭೇಟಿ ನೀಡಿ ಪ್ರಾಣಿಗಳ ಯೋಗ ಕ್ಷೇಮಗಳನ್ನು ವಿಚಾರಿಸುತ್ತಾರೆ. 

ತಿಂಗಳಿಗೊಮ್ಮೆ ದತ್ತು ಕಾರ್ಯಕ್ರಮ
ನಮ್ಮ ಸಂಸ್ಥೆಗೆ ಪ್ರತಿ ತಿಂಗಳು ಸುಮಾರು 300 ಸಾಕು ಪ್ರಾಣಿಗಳನ್ನು ಸಾರ್ವಜನಿಕರು ಕರೆ ತಂದು ಬಿಡುತ್ತಾರೆ. ಒಂದುವೇಳೆ ಅವು ಗಾಯಗೊಂಡಿದ್ದರೆ ಸೂಕ್ತ ಚಿಕಿತ್ಸೆ ನೀಡಿ ಪೋಷಣೆ ಮಾಡಲಾಗುತ್ತದೆ. ಅಂಥಹ ಸಾಕು ಪ್ರಾಣಿಗಳನ್ನು ತಿಂಗಳಿಗೊಮ್ಮೆ ದತ್ತು ನೀಡುವ ಕಾರ್ಯಕ್ರಮ ಆಯೋಜಿಸುತ್ತೇವೆ. ಈ ಕಾರ್ಯಕ್ರಮದ ಮೂಲಕ ಬೀದಿ ನಾಯಿ, ಬೆಕ್ಕುಗಳಿಗೆ ಪ್ರೀತಿಯ ನೆಲೆ ದೊರೆಯುತ್ತದೆ.
 – ಚೇತನಾ,
ಟ್ರಸ್ಟ್‌ನ ಸ್ವಯಂ ಸೇವಕಿ

ಟಾಪ್ ನ್ಯೂಸ್

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

Paduvari-Someshwara-beach

Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Salmana

Baba Siddiqui Case: ಸಲ್ಮಾನ್‌ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್‌ ಬಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

Paduvari-Someshwara-beach

Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.