ವಕೀಲರು-ತಹಶೀಲ್ದಾರ್‌ ವಾಗ್ವಾದ: ಡಿಸಿ ಪ್ರವೇಶ


Team Udayavani, Apr 8, 2018, 11:26 AM IST

8-April-8.jpg

ಬೆಳ್ತಂಗಡಿ: ಚುನಾವಣೆ ಪ್ರಯುಕ್ತ ಶಾಂತಿ ಪಾಲನೆಗೆ ಸಂಬಂಧಿಸಿದಂತೆ ಮುಚ್ಚಳಿಕೆ ಬರೆಸಿಕೊಳ್ಳಲು ಸುಮಾರು 90ಕ್ಕೂ ಹೆಚ್ಚು ಮಂದಿಗೆ ತಾ| ದಂಡಾಧಿಕಾರಿಯಿಂದ ನೋಟಿಸ್‌ ಜಾರಿ ಮಾಡಲಾಗಿತ್ತು. ಈ ಮಧ್ಯೆ ತಾ| ದಂಡಾಧಿಕಾರಿಯೂ ಆಗಿರುವ ತಹಶೀಲ್ದಾರ್‌, ಕೋರ್ಟ್‌ ನಿಂದ ವಕೀಲರನ್ನು ಹೊರಹೋಗುವಂತೆ ಸೂಚಿಸಿದ್ದು, ವಕೀಲರನ್ನು ಕೆರಳಿಸಿದೆ. ಈ ವೇಳೆ ವಕೀಲರು ಹಾಗೂ ತಹಶೀಲ್ದಾರ್‌ ನಡುವೆ ವಾಗ್ವಾದ ನಡೆದಿದೆ.

ನೊಟೀಸ್‌ ಜಾರಿಯಾದ ಹಿನ್ನೆಲೆ, 90ಕ್ಕೂ ಹೆಚ್ಚು ಮಂದಿ ಮಿನಿ ವಿಧಾನಸೌಧಕ್ಕೆ ಆಗಮಿಸಿದ್ದರು. ಶಾಂತಿ ಭಂಗ ಉಂಟಾಗದಂತೆ, ಮುನ್ನೆಚ್ಚರಿಕೆಯಾಗಿ ವ್ಯಕ್ತಿಯ ವಿಚಾರಣೆ ನಡೆಸಿ, ನಿರ್ದಿಷ್ಟ ದಿನಗಳ ಮಟ್ಟಿಗೆ ಬಾಂಡ್‌ ಬರೆಸಿಕೊಳ್ಳಲಾಗುತ್ತದೆ. ಈ ಸಂದರ್ಭ ಬಾಂಡ್‌ ನೀಡಿದವರು ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿದಲ್ಲಿ ಆಸ್ತಿ ಮುಟ್ಟು ಗೋಲು ಹಾಕಿಕೊಳ್ಳುವ ಅಧಿಕಾರ ತಾ| ದಂಡಾಧಿಕಾರಿ ಹೊಂದಿದ್ದಾರೆ.

ಆದರೆ ಈ ವೇಳೆ ಕೆಲವರ ಪರವಾಗಿ ವಕೀಲರು ಆಗಮಿಸಿದ್ದರು. ಕೋರ್ಟ್‌ ನಿಯಮದಂತೆ ಕಲಾಪ ನಡೆಯುವ ವೇಳೆ ಕೂರುವ ಅವಕಾಶವಿದೆ. ಆದರೆ ತಮ್ಮನ್ನು ಹೊರ ಕಳುಹಿಸಲಾಗಿದೆ ಎಂದು ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ವಾಗ್ವಾದ ನಡೆದಿದ್ದು, ಸಮರ್ಪಕ ಕಾರ್ಯ ನಿರ್ವಹಣೆಗಾಗಿ ವಕೀಲರಿಂದ ಮನವಿ ನೀಡಲಾಗಿದೆ. 

ಜಿಲ್ಲಾಧಿಕಾರಿ ಮಧ್ಯ ಪ್ರವೇಶ
ತಾ| ದಂಡಾಧಿಕಾರಿ ಕೋರ್ಟ್‌ನಲ್ಲಿ ನಡೆಯುವ ಪ್ರಕ್ರಿಯೆಗಳ ಬಗ್ಗೆ ತಹಶೀಲ್ದಾರ್‌ ತಮ್ಮಣ್ಣ ಚಿನ್ನಪ್ಪ ಹಾದಿಮನಿ ಹಾಗೂ ವಕೀಲರ ಜತೆ ವಾಗ್ವಾದ ನಿರಂತರವಾಗಿ ಸಾಗಿತು. ಈ ವೇಳೆ ಚುನಾವಣೆ ಪ್ರಕ್ರಿಯೆ ಪ್ರಯುಕ್ತ ಮಿನಿ ವಿಧಾನಸೌಧಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಮಾತುಕತೆ ನಡೆಸಿ, ಸಮರ್ಪಕ ಕಾರ್ಯನಿರ್ವಹಣೆಗೆ ತಹಶೀಲ್ದಾರ್‌ಗೆ ಸೂಚನೆ ನೀಡಿದ್ದಾರೆ. ಬಳಿಕ ವಕೀಲರೂ ಸ್ಥಳದಿಂದ ತೆರಳಿದರು.

ಅಸಮಾಧಾನ
ಒಂದೇ ದಿನ 90ಕ್ಕೂ ಹೆಚ್ಚು ಮಂದಿಗೆ ಹಾಜರಾಗಲು ನೋಟಿಸು ಜಾರಿ ಮಾಡಿರುವುದು ಗೊಂದಲಕ್ಕೆ ಕಾರಣವಾಗಿದೆ. 90ಕ್ಕೂ ಹೆಚ್ಚು ಮಂದಿ ವಿಚಾರಣೆಗಾಗಿ ಬೆಳಗ್ಗೆ 10ರಿಂದಲೇ ತಹಶೀಲ್ದಾರ್‌ ಕೊಠಡಿ ಮುಂದೆ ಕಾಯುವ ಪರಿಸ್ಥಿತಿ ಉಂಟಾಯಿತು. 

ತಹಶೀಲ್ದಾರ್‌ಗೆ ಮನವಿ
ತಾ| ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ್‌ ಕುಮಾರ್‌ ಎ. ನೇತೃತ್ವದಲ್ಲಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ನ್ಯಾಯಾ ಲಯ ಕಲಾಪ ನಡೆಸಲು ವಕೀಲರು ತೊಂದರೆ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಯಾಗಿ ಮಾಹಿತಿ ನೀಡಿ ಮನವಿ ಸಲ್ಲಿಸಲಾಯಿತು. ತಾ| ದಂಡಾಧಿಕಾರಿ ನ್ಯಾಯಾಲಯದಲ್ಲಿ ನ್ಯಾಯವಾದಿಗಳಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ, ವಿನಾಕಾರಣ ಕಲಾಪ ಸ್ಥಗಿತಗೊಳಿಸುವ ಬಗ್ಗೆ ಮನವಿಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.