35 ವರ್ಷಗಳ ಬಳಿಕ ಬೆಳ್ಳೂರು ಬೈಲು ಜನರ ಕನಸು ನನಸು


Team Udayavani, Mar 7, 2018, 1:43 PM IST

7-March-14.jpg

ಬೆಳ್ತಂಗಡಿ : ಸುಮಾರು 35 ವರ್ಷಗಳ ಬಳಿಕ ಬೆಳ್ಳೂರು ಬೈಲು ಜನರ ಬೇಡಿಕೆ ಈಡೇರಿದೆ. ತಿಂಗಳೊಳಗಾಗಿ ಟೆಂಡರ್‌ ಪ್ರಕ್ರಿಯೆ ಮುಗಿಸಿ 4 ಕೋಟಿ ರೂ. ವೆಚ್ಚದ ಸೇತುವೆ ನಿರ್ಮಾಣ ಕಾರ್ಯ ಆರಂಭಿಸಲಾಗುವುದು ಎಂದು ಶಾಸಕ ಕೆ. ವಸಂತ ಬಂಗೇರ ತಿಳಿಸಿದರು. ಅವರು ಕಡಿರುದ್ಯಾವರ, ಇಂದಬೆಟ್ಟು ಗ್ರಾಮದ ಬೆಳ್ಳೂರುಬೈಲಿನ ಎತ್ತಿನಗಂಡಿ ಬಳಿ ನೇತ್ರಾವತಿ ನದಿಗೆ 4 ಕೋ. ರೂ. ವೆಚ್ಚದ ಸೇತುವೆ ಕಾಮ ಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಹಲವು ವರ್ಷಗಳಿಂದ ಸೇತುವೆ ನಿರ್ಮಾಣಕ್ಕೆ ಪ್ರಯತ್ನಿಸಿದ್ದರೂ ಸಾಧ್ಯವಾಗಿರಲಿಲ್ಲ. ಇದೀಗ ಜನರ ಬಹುದಿನಗಳ ಬೇಡಿಕೆ ಈಡೇರಿದೆ ಎಂದರು.

ಡಯಾಲಿಸಿಸ್‌ ಯಂತ್ರ
ತಾ| ಆಸ್ಪತ್ರೆಯಲ್ಲಿ ಈಗಾಗಲೇ 3 ಡಯಾಲಿಸಿಸ್‌ ಯಂತ್ರಗಳು ಕಾರ್ಯ ನಿರ್ವಹಿಸುತ್ತಿವೆ. ಸದ್ಯದಲ್ಲೇ ಇನ್ನೊಂದು ಆರಂಭವಾಗಲಿದ್ದು, ವಾರಕ್ಕೆ 50 ಜನರಿಗೆ ಪ್ರಯೋಜನವಾಗಲಿದೆ ಎಂದರು.

ಐದು ಜನರಿದ್ದ ಕಾಲೇಜು
ತಾಲೂಕಿನ ಕಾಲೇಜು ಆರಂಭವಾಗುವಾಗ ಕೇವಲ 5 ವಿದ್ಯಾರ್ಥಿಗಳಿದ್ದರು. ತಾಲೂಕಿಗಾಗಿ ಮಂಜೂರು ಮಾಡಿಸಲಾಗಿತ್ತು. ಅಂದಿನ ಶಿಕ್ಷಣ ಮಂತ್ರಿ ಕಾಲೇಜು ಉದ್ಘಾಟನೆಗೆ ಒಪ್ಪಿರಲಿಲ್ಲ. ಕೊನೆಗೂ ಮನವೊಲಿಸಿ ಉದ್ಘಾಟನೆ ಮಾಡಿಸಲಾಗಿತ್ತು. ಇಂದು ತಾಲೂಕಿನ ಸುಮಾರು 900 ವಿದ್ಯಾರ್ಥಿಗಳು ಪ್ರಯೋಜನ ಪಡೆಯುತ್ತಿದ್ದಾರೆ ಎಂದರು.

ತಿಂಗಳೊಳಗೆ ಶಂಕುಸ್ಥಾಪನೆ
ಸುಮಾರು 40 ಕೋ. ರೂ. ಬಿಡುಗಡೆಯಾಗಿದ್ದು, ಎಲ್ಲ ಕಾಮಗಾರಿಗಳಿಗೂ ಮಾ. 30ರೊಳಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಬಳಿಕ ಕಾಮಗಾರಿ ಮುಂದುವರಿಯುತ್ತದೆ. ನೀತಿ ಸಂಹಿತೆ ಜಾರಿಯಾದಲ್ಲಿ ಶಂಕುಸ್ಥಾಪನೆ ನೆರವೇರಿಸಲು ಸಾಧ್ಯವಾಗುವುದಿಲ್ಲ ಎಂದರು.

ಉತ್ತಮ ಕೆಲಸದಿಂದ ಅಭಿವೃದ್ಧಿ
ಜನತೆ ಅಭಿವೃದ್ಧಿ ಕಾರ್ಯಗಳನ್ನು ಗಮನಿಸುತ್ತಾರೆ. ಉತ್ತಮ ಕೆಲಸ ಮಾಡಿದಲ್ಲಿ ಆಶೀರ್ವಚಿಸುತ್ತಾರೆ. ಸ್ಥಳೀಯ ಪ್ರದೇಶಗಳಾದ ಕೋಲೋಡಿ, ಬಾಂಜಾರು ಮತ್ತಿತರ ಕಡೆ ಅಭಿವೃದ್ಧಿ ಕಾರ್ಯ ನಡೆಸಲಾಗಿದೆ. ಕಳೆದ 4 ವರ್ಷ 10 ತಿಂಗಳ ಅವಧಿಯಲ್ಲಿ 1 ಸಾವಿರ ಕೋಟಿ ರೂ.ಗೂ ಅಧಿಕ ವೆಚ್ಚದ ಕಾಮಗಾರಿ ನಡೆಸಲಾಗಿದೆ ಎಂದು ತಿಳಿಸಿದರು.

ಸುದಿನ ವರದಿ ಫ‌ಲಶ್ರುತಿ
ಸೇತುವೆ ಬಗ್ಗೆ ಸುದಿನದಲ್ಲಿ ಹಲವು ಬಾರಿ ವರದಿ ಪ್ರಕಟಿಸಿ ಸೇತುವೆ ಮಂಜೂರಾತಿಗೆ ಒತ್ತಾಯಿಸಿ, ಅಧಿಕಾರಿಗಳು ಜನಪ್ರತಿನಿಧಿಗಳ ಗಮನ ಸೆಳೆಯಲಾಗಿತ್ತು.

ಬಂಗಾಡಿ ಸೊಸೈಟಿ ಅಧ್ಯಕ್ಷ ಲಕ್ಷ್ಮಣ ಗೌಡ ಪ್ರಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪಚಾಯತ್‌ ಸದಸ್ಯೆ ಸೌಮ್ಯಲತಾ, ಪಿಡಬ್ಲ್ಯುಡಿ ಎಂಜಿನಿಯರ್‌ ಶಿವಪ್ರಕಾಶ್‌ ಅಜಿಲ, ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಸುಂದರ ಗೌಡ, ಮಂಜುನಾಥ್‌ ಕಾಮತ್‌, ಗ್ರಾಪಂ ಅಧ್ಯಕ್ಷೆ ವನಿತಾ ಸಾಲ್ಯಾನ್‌, ಉಪಾಧ್ಯಕ್ಷ ಸಂತೋಷ್‌ ಗೌಡ, ಇಬ್ರಾಹಿಂ, ಗ್ರಾಪಂ ಸದಸ್ಯರಾದ ನೋಣಯ್ಯ ಗೌಡ, ಯಶೋದಾ, ಶೋಭಾ, ರೇಣುಕಾ ಮೊದಲಾದವರಿದ್ದರು.

ಮುಂಡಾಜೆ ಯಂಗ್‌ ಚಾಲೆಂಜರ್ ನ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ನಾಮ ದೇವರಾವ್‌ ನಿರೂಪಿಸಿದರು. ಗ್ರಾಮ ಪಂಚಾಯತ್‌ ಸದಸ್ಯ ನೇಮಿರಾಜ್‌ ಗೌಡ ಸ್ವಾಗತಿಸಿದರು. 

ಅಪಪ್ರಚಾರಕ್ಕೆ ಕಿಡಿ
ನಾನು ಕೇವಲ ಶಂಕುಸ್ಥಾಪನೆ ಮಾಡುತ್ತೇನೆ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ರಸ್ತೆ, ಶಾಲೆ, ವಿದ್ಯುತ್‌, ನೀರು ಮತ್ತಿತರ ಸೌಲಭ್ಯಗಳನ್ನು ಕುಗ್ರಾಮಗಳಿಗೂ ತಲುಪಿಸಲಾಗಿದೆ. ಅಪಪ್ರಚಾರ ನಡೆಸುವವರು ಅಧಿಕಾರದಲ್ಲಿದ್ದಾಗ ತಾಲೂಕಿನಲ್ಲಿ ಎಷ್ಟು ಅಭಿವೃದ್ಧಿ ಕಾರ್ಯ ನಡೆಸಿದ್ದಾರೆ ಎಂಬುದನ್ನು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದು ಶಾಸಕ ಕೆ. ವಸಂತ ಬಂಗೇರ ತಿಳಿಸಿದರು.

ಟಾಪ್ ನ್ಯೂಸ್

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

vijayaendra

MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

17-v-somanna

Hubli: ಈ ಆರೋಪದಿಂದ ಹೊರಬರುವವರೆಗೂ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿ.ಸೋಮಣ್ಣ

Israel: ಲೈವ್‌ ಸಂದರ್ಶನದ ವೇಳೆಯೇ ಪತ್ರಕರ್ತನ ಮನೆ ಮೇಲೆ ಇಸ್ರೇಲ್‌ ಮಿಸೈಲ್‌ ದಾಳಿ!

Israel: ಲೈವ್‌ ಸಂದರ್ಶನದ ವೇಳೆಯೇ ಪತ್ರಕರ್ತನ ಮನೆ ಮೇಲೆ ಇಸ್ರೇಲ್‌ ಮಿಸೈಲ್‌ ದಾಳಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Puttur: ಟ್ರೀ ಪಾರ್ಕ್‌ ನಿರ್ಲಕ್ಷ್ಯಕ್ಕೆ ದುಡ್ಡಿನ ಕೊರತೆ ನೆಪ

2(2)

Vitla: ಟ್ರಾಫಿಕ್‌ ಜಾಮ್‌ ವಿಟ್ಲ ಪೇಟೆಯಲ್ಲಿ ನಿತ್ಯ ಸಂಕಟ

6-belthanagdy

ಬೆಳ್ತಂಗಡಿ:ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ‘ಕುತ್ಲೂರು ಗ್ರಾಮ’ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Bantwal: ಮುಂಬಯಿ ಪೊಲೀಸರೆಂದು ಹೇಳಿ ವಂಚನೆ

Bantwal: ಮುಂಬಯಿ ಪೊಲೀಸರೆಂದು ಹೇಳಿ ವಂಚನೆ

sulliaHindu ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ

Hindu ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

14

Chikkamagaluru: ವಿದ್ಯುತ್ ತಂತಿ ತುಳಿದು 5 ಹಸುಗಳು ಸಾವು

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

13

Panaji: ಇಲೆಕ್ಟ್ರಿಕ್ ಮೀಟರ್ ಕಳ್ಳತನ ಪ್ರಕರಣ; ಆರೋಪಿ ಬಂಧನ

vijayaendra

MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.