![1-wqwewewq](https://www.udayavani.com/wp-content/uploads/2024/07/1-wqwewewq-415x293.jpg)
Mangaluru ಠಾಣೆಯಲ್ಲಿ ಯುವತಿಯ ಆಕ್ರಮಣಕಾರಿ ವರ್ತನೆ ವೀಡಿಯೋ ವೈರಲ್
Team Udayavani, Sep 9, 2023, 11:18 PM IST
![Mangaluru ಠಾಣೆಯಲ್ಲಿ ಯುವತಿಯ ಆಕ್ರಮಣಕಾರಿ ವರ್ತನೆ ವೀಡಿಯೋ ವೈರಲ್](https://www.udayavani.com/wp-content/uploads/2023/09/vdeo-620x403.jpg)
ಮಂಗಳೂರು: ನಗರದ ಪೊಲೀಸ್ ಠಾಣೆಯಲ್ಲಿ ಯುವತಿಯೋರ್ವಳು ಆಕ್ರಮಣಕಾರಿಯಾಗಿ ವರ್ತಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾದಕ ದ್ರವ್ಯ ವ್ಯಸನಿ ಎಂಬ ಶೀರ್ಷಿಕೆಯಲ್ಲಿ ವೀಡಿಯೋ ಹರಿದಾಡಿದೆ.
ಡ್ರಗ್ಸ್ ವ್ಯಸನಿಯಲ್ಲ
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು, ಸೆ.1ರಂದು ಪಂಪ್ವೆಲ್ನಲ್ಲಿರುವ ಮೆಡಿಕಲ್ನಲ್ಲಿ ಓರ್ವ ಯುವತಿ ಆಕ್ರಮಣಕಾರಿ ರೀತಿಯಲ್ಲಿ ವರ್ತನೆ ಮಾಡುತ್ತಿರುವ ಬಗ್ಗೆ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ಲಭಿಸಿತ್ತು. ಆಕೆ ಮಾದಕ ದ್ರವ್ಯ ಸೇವನೆ ಮಾಡಿರಬೇಕೆಂಬ ಸಂದೇಹದಿಂದ ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗಲು ಪ್ರಯತ್ನಿಸಿದಾಗ ಆಕೆ ಅಧಿಕಾರಿಗಳ ಮೇಲೆ ಆಕ್ರಮಣಕಾರಿಯಾಗಿ ವರ್ತಿಸಿದ್ದಳು. ಆ ಬಳಿಕ ಠಾಣೆಯ ಮಹಿಳಾ ಸಿಬಂದಿ ಜತೆ ಇಲಾಖಾ ವಾಹನದಲ್ಲಿ ಅಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ನಡೆಸಿದಾಗ ಪೂರಕ ಫಲಿತಾಂಶ ಬಂದಿಲ್ಲ. ಅನಂತರ ಅಕೆಯನ್ನು ಆಕೆಯ ಪೋಷಕರ ವಶಕ್ಕೆ ವಹಿಸಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಅಗರ್ವಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
![1-wqwewewq](https://www.udayavani.com/wp-content/uploads/2024/07/1-wqwewewq-415x293.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-150x105.jpg)
Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್
![Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್ ಆಗ್ರಹ](https://www.udayavani.com/wp-content/uploads/2024/07/ravikumar-150x86.jpg)
Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್ ಆಗ್ರಹ
![ಸುರತ್ಕಲ್ ಟೋಲ್ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು](https://www.udayavani.com/wp-content/uploads/2024/07/9-4-150x90.jpg)
ಸುರತ್ಕಲ್ ಟೋಲ್ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು
![CC Camera ದೃಶ್ಯಾವಳಿ; ಫೂರೆನ್ಸಿಕ್ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ](https://www.udayavani.com/wp-content/uploads/2024/07/courts-150x102.jpg)
CC Camera ದೃಶ್ಯಾವಳಿ; ಫೂರೆನ್ಸಿಕ್ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ
![Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್ ರಾವ್](https://www.udayavani.com/wp-content/uploads/2024/07/kum-150x110.jpg)
Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್ ರಾವ್
MUST WATCH
ಹೊಸ ಸೇರ್ಪಡೆ
![1-wqwewewq](https://www.udayavani.com/wp-content/uploads/2024/07/1-wqwewewq-150x106.jpg)
T20 ಸರಣಿ ಸಮಬಲ: ಜಿಂಬಾಬ್ವೆ ವಿರುದ್ಧ 100 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ
![renukaacharya](https://www.udayavani.com/wp-content/uploads/2024/07/renukaacharya-150x100.jpg)
Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ
![BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!](https://www.udayavani.com/wp-content/uploads/2024/07/BSNL-150x84.jpg)
BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!
![BJP 2](https://www.udayavani.com/wp-content/uploads/2024/07/BJP-2-2-150x91.jpg)
LDF ; ಸುರೇಶ್ ಗೋಪಿಯವರನ್ನು ಹೊಗಳಿದ್ದ ತ್ರಿಶೂರ್ ಮೇಯರ್ ಬೆಂಬಲಕ್ಕೆ ನಿಂತ ಬಿಜೆಪಿ
![Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !](https://www.udayavani.com/wp-content/uploads/2024/07/road-2-150x81.jpg)
Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.