Ayush ಆಸ್ಪತ್ರೆಗೆ ಉಪಕರಣ ಖರೀದಿ ಅವ್ಯವಹಾರ ಆರೋಪ: ತನಿಖೆಗೆ ಆರೋಗ್ಯ ಸಚಿವರ ಸೂಚನೆ


Team Udayavani, Sep 2, 2024, 11:54 PM IST

Ayush ಆಸ್ಪತ್ರೆಗೆ ಉಪಕರಣ ಖರೀದಿ ಅವ್ಯವಹಾರ ಆರೋಪ: ತನಿಖೆಗೆ ಆರೋಗ್ಯ ಸಚಿವರ ಸೂಚನೆ

ಮಂಗಳೂರು: ಆಯುಷ್‌ ಆಸ್ಪತ್ರೆಯ ಉಪಕರಣ ಖರೀದಿಗೆ 28 ಲಕ್ಷ ರೂ. ವೆಚ್ಚದ ಸಿಎಸ್‌.ಆರ್‌ ಯೋಜನೆ ಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ಆದೇಶಿಸಿದ್ದಾರೆ.

ಪ್ರಕರಣ ಕುರಿತಂತೆ ಮಂಗಳೂರು ಜಿಲ್ಲಾ ಆಯುಷ್‌ ಅಧಿಕಾರಿ ಖುದ್ದು ಸಚಿವರನ್ನು ಭೇಟಿ ಮಾಡಿ ಉದ್ದೇಶಪೂರ್ವಕವಾಗಿ ಆರೋಪ ಹೊರಿಸಲಾಗುತ್ತಿದ್ದು, ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂದು ಅಳಲು ತೋಡಿಕೊಂಡರು.

ಮೂವರು ಸಾಮಾಜಿಕ ಕಾರ್ಯಕರ್ತರು ಅನಗತ್ಯ ದೂರು ಸಲ್ಲಿಸಿ ಆಯುಷ್‌ ಆಸ್ಪತ್ರೆಯ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಸಿಎಸ್‌.ಆರ್‌ ಯೋಜನೆ ಮೂಲಕ ಹಣ ತಂದು ಆಯುಷ್‌ ಆಸ್ಪತ್ರೆಗೆ ಮೂಲಸೌಕರ್ಯ ಒದಗಿಸಲು ಶ್ರಮಿಸಲಾಗಿತ್ತು. ಆದರೆ ಮೂವರು ತಮ್ಮ ವೈಯಕ್ತಿಕ ಹಿತಾಸಕ್ತಿಯ ರಕ್ಷಣೆಗಾಗಿ ಸರಕಾರಿ ಕಾರ್ಯಕ್ಕೆ ಅಡ್ಡಿಯುಂಟು ಮಾಡಿದ್ದಾರೆ ಎಂದು ದೂರಿದ್ದರು. ಇನ್ನೊಂದಡೆ ಈ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪವೂ ಕೇಳಿಬಂದಿತ್ತು.

ಆರೋಪದಲ್ಲಿ ಸತ್ಯಾಸತ್ಯತೆ ಇದೆಯೇ ಅಥವಾ ವೃಥಾ ದೂರು ಸಲ್ಲಿಸಲಾಗಿದೆಯೇ ಎಂಬುದರ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶದಲ್ಲಿ ಹೇಳಲಾಗಿದೆ. ಪ್ರಕರಣದಲ್ಲಿ ಆಯುಷ್‌ ಅಧಿಕಾರಿಗಳು ತಪ್ಪು ಎಸಗಿದ್ದರೆ ಸೂಕ್ತ ಶಿಸ್ತುಕ್ರಮಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಒಂದು ವೇಳೆ ಆಯುಷ್‌ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ದುರುದ್ದೇಶದಿಂದ ದೂರುದಾರರು ಆರೋಪ ಮಾಡಿರುವುದು ಕಂಡುಬಂದರೆ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗುವಂತೆ ಸಚಿವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.