ಏಳು ರಸ್ತೆಗೆ ಅನುದಾನ ಮಂಜೂರು: ಶಕುಂತಳಾ


Team Udayavani, Oct 29, 2017, 4:00 PM IST

29-Mng–15.jpg

ವಿಟ್ಲ: ಲೋಕೋಪಯೋಗಿ ಇಲಾಖೆಯ 50-54 ಯೋಜನೆಯಡಿ ಒಂದು ಬಾರಿ ಅಭಿವೃದ್ಧಿ ಶೀರ್ಷಿಕೆಯಡಿ ರಸ್ತೆ ಅಭಿವೃದ್ಧಿ ಪಡಿಸುವ ಹೊಸ ಯೋಜನೆಯಡಿಯಲ್ಲಿ ಈ ಕ್ಷೇತ್ರದ ಏಳು ರಸ್ತೆಯ ಅಭಿವೃದ್ಧಿಗಾಗಿ ಅನುದಾನ ಮಂಜೂರಾಗಿತ್ತು. ಆರು ರಸ್ತೆಗಳ ಗುದ್ದಲಿ ಪೂಜೆ ಈಗಾಗಲೇ ನೆರವೇರಿಸಲಾಗಿದೆ. ಬದನಾಜೆ-ಕುಂಡಡ್ಕ-ಪರಿಯಾಲ್ತಡ್ಕ ರಸ್ತೆಗೂ 1.20 ಕೋ.ರೂ. ಅನುದಾನ ಮಂಜೂರಾಗಿತ್ತು. ಆದರೆ ಅಷ್ಟೊಂದು ಕಡಿಮೆ ಮೊತ್ತದಲ್ಲಿ ಈ ರಸ್ತೆ ಅಭಿವೃದ್ಧಿಪಡಿಸಲು ಕಷ್ಟ ಎಂದು ಎಂಜಿನಿಯರ್‌ ಅವರು ತಿಳಿಸಿದ ಹಿನ್ನೆಲೆಯಲ್ಲಿ ಅಳಕೆಮಜಲಿಗಾಗಿ ಮಂಜೂರಾದ ಒಂದು ಕೋ.ರೂ. ಅನುದಾನವನ್ನು ಈ ರಸ್ತೆಗೆ ಬಳಸಲಾಗಿದೆ. ಆದುದರಿಂದ ಟೆಂಡರ್‌ ಪ್ರಕಟಿಸಲು ತಡವಾಗಿದೆ ಎಂದು ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.

ವಿಟ್ಲ-ವಿಟ್ಲಮುಟ್ನೂರು ಗ್ರಾಮ ಸಂಪರ್ಕಿಸುವ ಬದನಾಜೆ-ಕುಂಡಡ್ಕ- ಪರಿಯಾಲ್ತಡ್ಕ ರಸ್ತೆಗೆ ಶನಿವಾರ ಬದನಾಜೆಯಲ್ಲಿ ಶಾಸಕಿ ಶಕುಂತಳಾ ಶೆಟ್ಟಿ ಅವರು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಅಪಪ್ರಚಾರ
ಇದರ ಲಾಭ ಗಳಿಸಲು ಕೆಲವರು ಪ್ರತಿಭಟನೆ ಆಯೋಜಿಸಿದರು. ಹಿಂದಿನ ಅವಧಿಗಳಲ್ಲಿ ಬಿಜೆಪಿಗೆ ಈ ರಸ್ತೆ ಅಭಿವೃದ್ಧಿ ಮಾಡಿಸಲು ಸಾಧ್ಯವಾಗಲಿಲ್ಲ. ಈಗ ನಾನು ಅನುದಾನ ಮಂಜೂರು ಮಾಡಿಸಿರುವ ವಿಚಾರ ತಿಳಿದ ಬಳಿಕ ಪ್ರತಿಭಟನೆಗೆ ಮುಂದಾಗಿದ್ದಾರೆ. ಪ್ರತಿಭಟನೆಗೆ ಮಣಿದು ರಸ್ತೆ ನಿರ್ಮಾಣವಾಯಿತೆಂದು ಅಪಪ್ರಚಾರಮಾಡುವ ಕೆಟ್ಟ ಯೋಚನೆ ಇವರದು ಎಂದು ಆರೋಪಿಸಿದರು.

ಜಿ.ಪಂ. ರಸ್ತೆಗೆ ಲೋಕೋಪಯೋಗಿ ಇಲಾಖೆ ಅನುದಾನ ಮಂಜೂರು ಮಾಡಿಸಿ ರಸ್ತೆ ಅಭಿವೃದ್ಧಿಗೆ ಪ್ರಯತ್ನಿಸಿದ್ದೇನೆ ಎನ್ನುವ ತೃಪ್ತಿ ನನಗಿದೆ. ಇದೇ ರಸ್ತೆಗೆ ಕೆಲ ವರ್ಷಗಳ ಹಿಂದೆ ಪಿಎನ್‌ಜಿಎಸ್‌ವೈ ಮೂಲಕ ಆರೂವರೆ ಕೋ.ರೂ. ಬಿಡುಗಡೆ ಮಾಡುವಂತೆ ಬರೆದಿದ್ದು, ಅದು ಮಂಜೂರಾಗಿಲ್ಲ. ಇದೀಗ ಕುಂಡಡ್ಕ-ನಾಟೆಕಲ್ಲುರಸ್ತೆ ಅಭಿವೃದ್ಧಿಗಾಗಿ ಪುನಃ 3 ಕೋ. ರೂ. ಬಿಡುಗಡೆಗೊಳಿಸುವಂತೆ ಪತ್ರ ಬರೆದಿದ್ದೇನೆ ಬದನಾಜೆ-ಕುಂಡಡ್ಕ- ಪರಿಯಾಲ್ತಡ್ಕ ರಸ್ತೆ ಕಾಮಗಾರಿ ಕೂಡಲೇ ಆರಂಭಗೊಳ್ಳುತ್ತದೆ. ರಸ್ತೆ ಕಾಮಗಾರಿ ಪೂರ್ತಿಯಾಗುತ್ತದೆ ಎಂದರು.

ಕಾಂಗ್ರೆಸ್‌ ತೊರೆಯುವ ಪ್ರಶ್ನೆಯೇ ಇಲ್ಲ
ಬಿಜೆಪಿ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಕಾಂಗ್ರೆಸ್‌ ನನ್ನನ್ನು ಕರೆದು ಸೀಟು ನೀಡಿ ಶಾಸಕಿಯನ್ನಾಗಿ ಮಾಡಿ ಬಳಿಕ ನನಗೆ ಉನ್ನತ ಸ್ಥಾನ ನೀಡಿದ ಪಕ್ಷ. ಚುನಾವಣೆಯಲ್ಲಿ ಈ ಪಕ್ಷದಲ್ಲಿ 18 ಮಂದಿ ಸ್ಪರ್ಧಿಸಲು ಸಿದ್ಧವಾಗಿದ್ದಾಗ ನನಗೆ ಸ್ಪರ್ಧಿಸಲು ಅವಕಾಶ ನೀಡಿದರು. ಆದ್ದರಿಂದ ನನ್ನ ಸ್ವಾಭಿಮಾನ ಬಿಡುವುದಿಲ್ಲ. ಇನ್ನು ಮುಂದೆ ನಾನು ಯಾವತ್ತಿದ್ದರೂ ಕಾಂಗ್ರೆಸ್‌ನಲ್ಲೇ ಇರುವವಳು. ನಾನು ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ.
-ಶಕುಂತಳಾ ಶೆಟ್ಟಿ, ಶಾಸಕಿ 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Kalladka: ಹೊಟೇಲ್‌ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್‌

Kalladka: ಹೊಟೇಲ್‌ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್‌

ಅಮ್ಮೆಮಾರ್‌ನಲ್ಲಿ ತಲವಾರು ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ಅಮಿತ್‌ ಸಿಂಗ್‌ ಭೇಟಿ

ಅಮ್ಮೆಮಾರ್‌ನಲ್ಲಿ ತಲವಾರು ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ಅಮಿತ್‌ ಸಿಂಗ್‌ ಭೇಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.