ಅಡಿಕೆ ಎಲೆ ಹಳದಿ ರೋಗದ ತೋಟಗಳಲ್ಲಿ ಪರ್ಯಾಯ ಬೆಳೆ ಅನುಷ್ಠಾನ

ತೋಟಗಾರಿಕೆ ಇಲಾಖೆಯಿಂದ ಅರ್ಜಿ ಸ್ವೀಕಾರ ಆರಂಭ

Team Udayavani, Jun 14, 2022, 7:15 AM IST

ಅಡಿಕೆ ಎಲೆ ಹಳದಿ ರೋಗದ ತೋಟಗಳಲ್ಲಿ ಪರ್ಯಾಯ ಬೆಳೆ ಅನುಷ್ಠಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಳದಿ ಎಲೆ ರೋಗ ಬಾಧಿತ ಅಡಿಕೆ ತೋಟಗಳನ್ನು ಹಂತಹಂತವಾಗಿ ಇತರ ತೋಟಗಾರಿಕೆ ಬೆಳೆ ಬೆಳೆಯುವ ಮೂಲಕ ಪುನಶ್ಚೇತನಗೊಳಿಸುವ ಯೋಜನೆಯ ಅನುಷ್ಠಾನಕ್ಕೆ ತೋಟಗಾರಿಕೆ ಇಲಾಖೆ ಮುಂದಾಗಿದೆ.

ಮೊದಲ ಹಂತದಲ್ಲಿ ಸರಕಾರದಿಂದ 3.25 ಕೋಟಿ ರೂ. ಮಂಜೂರಾ ಗಿದೆ. ಹಳದಿ ಎಲೆ ರೋಗ ಪೀಡಿತ ಸುಳ್ಯ, ಪುತ್ತೂರು ತಾಲೂಕುಗಳ ಅಡಿಕೆ ಬೆಳೆಗಾರರಿಂದ ಅರ್ಜಿ ಸ್ವೀಕರಿಸುವ ಕಾರ್ಯಕ್ಕೆ ಚಾಲನೆ ದೊರೆತಿದೆ.
ಅಡಿಕೆ ತೋಟಗಳಲ್ಲಿ ಎಲೆ ಹಳದಿ ಬಣ್ಣಕ್ಕೆ ತಿರುಗಿ ಕ್ರಮೇಣ ಕೃಶವಾಗುವ ಮರಗಳು ಬಳಿಕ ಸಾವನ್ನಪ್ಪುತ್ತವೆ. ಇದರಿಂದ ಸಾವಿರಾರು ರೈತರು ತೊಂದರೆಗೀಡಾಗಿದ್ದಾರೆ. ಒಂದೆಡೆ ಕ್ಯಾಂಪ್ಕೊ ಈ ಕುರಿತು ಸಂಶೋಧನೆಗೆ ಮುಂದಾಗಿದೆ. ಇನ್ನೊಂದೆಡೆ ತೋಟಗಾರಿಕೆ ಇಲಾಖೆಯವರೂ ಪ್ರಾಥಮಿಕ ಸಮೀಕ್ಷೆ ನಡೆಸಿದ್ದು, ಪ್ಯಾಕೇಜ್‌ ನೆರವಿನೊಂದಿಗೆ ಕೇಂದ್ರೀಯ ತೋಟಗಾರಿಕೆ ಬೆಳೆಗಳ ಸಂಶೋಧನ ಸಂಸ್ಥೆ (ಸಿಪಿಸಿಆರ್‌ಐ)ಗೆ ಈ ಕುರಿತು ಸಂಶೋಧನೆ ನಡೆಸಲು ಕೇಳಿಕೊಂಡಿದ್ದಾರೆ.

ಸಂಶೋಧನೆ, ಬೆಳೆಗೆ ನೆರವು
ಸಿಪಿಸಿಆರ್‌ಐಯಿಂದ ನಡೆಯುವ ಸಂಶೋ ಧನೆಗೆ ರಾಜ್ಯದ ಪರಿಹಾರ ಪ್ಯಾಕೇಜ್‌ನಿಂದ 1 ಕೋಟಿ ರೂ. ಮೊತ್ತವನ್ನು ಮೀಸಲಿರಿಸಲಾಗುವುದು. ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ, ರೋಗ ನಿಯಂತ್ರಣದ ಸಂಶೋಧನೆ ಕೈಗೊಳ್ಳ ಲಾಗುವುದು.

ಇನ್ನುಳಿದ 2.25 ಕೋ.ರೂ. ಮೊತ್ತವನ್ನು ಪರ್ಯಾಯ ಬೆಳೆ ಬೆಳೆಯುವ ರೈತರಿಗೆ ನೆರವು ರೂಪದಲ್ಲಿ ನೀಡಲಾಗುವುದು. ಇದಕ್ಕಾಗಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವೆಚ್ಚದ ನಿಯಮಾವಳಿಯ ಅನ್ವಯವೇ ರೈತರು ಪರ್ಯಾಯ ಬೆಳೆಗೆ ಮಾಡುವ ವೆಚ್ಚದ ಶೇ. 50ನ್ನು ಭರಿಸಲಾಗುವುದು.
ಯಾವ ಬೆಳೆ ಎನ್ನುವುದನ್ನು ನಾವು ರೈತರಿಗೆ ಸೂಚಿಸಿಲ್ಲ. ಅವರ ಪರಿಸ್ಥಿತಿಗೆ ಅನುಗುಣವಾಗಿ ಅವರೇ ಸೂಕ್ತವೆನಿಸುವ ತೋಟಗಾರಿಕೆ ಬೆಳೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ತಾಳೆ, ಬಾಳೆ, ರಂಬುಟಾನ್‌, ಮ್ಯಾಂಗೊಸ್ಟೀನ್‌ನಂತಹ ಬೆಳೆ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಗಳಿವೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ಸಮೀಕ್ಷೆ
ಹಳದಿ ರೋಗ ಪ್ಯಾಕೇಜ್‌ಗೆ ಮುನ್ನ ತೋಟ ಗಾರಿಕೆ ಇಲಾಖೆಯವರು ರೋಗ ಬಾಧಿತ ಪ್ರದೇಶ ಗಳಲ್ಲಿ ಸಮೀಕ್ಷೆ ಕೈಗೊಂಡಿದ್ದರು. ಎರಡು ವರ್ಷಗಳ ಹಿಂದೆ ನಡೆದ ಸಮೀಕ್ಷೆಯಲ್ಲಿ 1217.38 ಹೆಕ್ಟೇರ್‌ ಪ್ರದೇಶ ಎಲೆಹಳದಿ ರೋಗಕ್ಕೆ ತುತ್ತಾ ಗಿರುವುದನ್ನು ಗುರುತಿಸಲಾಗಿತ್ತು. ಇದರಿಂದ ಒಟ್ಟು 5,588 ಅಡಿಕೆ ಬೆಳೆಗಾರರು ತೊಂದರೆಗೀಡಾಗಿರುವುದನ್ನು ಸರ್ವೇ ಗುರುತಿಸಿದೆ.

ಸರ್ವೇ ವೇಳೆ 2,092 ರೈತರು ತೆಂಗು ಬೆಳೆಸಲು, 581 ಮಂದಿ ಗೇರು ಬೆಳೆಸಲು, 1,546 ಮಂದಿ ಕೊಕ್ಕೊ, 97 ರೈತರು ತಾಳೆ ಬೆಳೆಸಲು; ಜತೆಯಲ್ಲಿ ಅಂತರ ಬೆಳೆ ಮತ್ತು ಮಿಶ್ರ ಬೆಳೆಯಾಗಿ ಕಾಳುಮೆಣಸು, ರಬ್ಬರ್‌, ಬಾಳೆ, ಜಾಯಿಕಾಯಿ ಬೆಳೆಸಲು ಆಸಕ್ತಿ ತೋರಿದ್ದರು. ಇದಕ್ಕಾಗಿ ಅವರಿಗೆ ಪ್ರೋತ್ಸಾಹಧನವಾಗಿ ಒಟ್ಟು 18.28 ಕೋಟಿ ರೂ. ನೀಡುವ ಪ್ರಸ್ತಾವವನ್ನು ತೋಟಗಾರಿಕೆ ಇಲಾಖೆಯು ಸರಕಾರಕ್ಕೆ ಸಲ್ಲಿಸಿತ್ತು.

ಅಡಿಕೆ ಮರ ಕಡಿದು ಬೇರೆ ನೆಡುವಂತಿಲ್ಲ
ಹಳದಿ ರೋಗ ಬಾಧಿತ ಪ್ರದೇಶಗಳಲ್ಲಿ ಪರ್ಯಾಯ ಬೆಳೆ ಬೆಳೆಯುವವರು ಅಂತರ ಬೆಳೆಯಾಗಿ ಮೊದಲು ಯಾವುದೇ ಬೆಳೆ ಹಾಕಬಹುದು. ಆದರೆ ಅಡಿಕೆ ಮರಗಳನ್ನು ಕಡಿದು ಬೇರೆ ನೆಡುವ ಹಾಗಿಲ್ಲ. ಅಡಿಕೆ ಮರಗಳಿಗೆ ಹಳದಿ ರೋಗ ತಗಲಿ ಅವು 5 ವರ್ಷಗಳಲ್ಲಿ ಸಾಯುತ್ತಿದ್ದು, ಆ ವೇಳೆಗೆ ಪರ್ಯಾಯ ಬೆಳೆ ಸಿದ್ಧವಾಗುವ ರೀತಿಯಲ್ಲಿ ನೋಡಿಕೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

20 ದಿನಗಳಿಂದ ಪರ್ಯಾಯ ಬೆಳೆಗಾಗಿ ರೈತರಿಂದ ಅರ್ಜಿ ಸ್ವೀಕರಿಸಲಾಗುತ್ತಿದೆ. ಯಾವ ರೀತಿ ಸ್ಪಂದನೆ ಇದೆ ಎನ್ನುವುದನ್ನು ನೋಡಿಕೊಂಡು ಮುಂದಿನ ಹಂತದ ಅನುದಾನ ಬಿಡುಗಡೆಯಾಗುವ ನಿರೀಕ್ಷೆ ಇದೆ.
– ಎಚ್‌.ಆರ್‌. ನಾಯಕ್‌, ತೋಟಗಾರಿಕೆ ಇಲಾಖೆ ಉಪನಿರ್ದೇಶಕರು, ಮಂಗಳೂರು

 

ಟಾಪ್ ನ್ಯೂಸ್

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

1(2)

Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್‌

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

5-belthanagdy

Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.