ಬಳಕೆಗಿಲ್ಲದೆ ಪಾಳುಬಿದ್ದಿದೆ ಅಂಬೇಡ್ಕರ್‌ ಭವನ!


Team Udayavani, Aug 8, 2018, 12:10 PM IST

8-agust-7.jpg

ನೆಹರೂನಗರ : ಇಲ್ಲಿನ ಕಾರುಕ್ಕಾಡುನಲ್ಲಿ 15 ವರ್ಷಗಳ ಹಿಂದೆ ನಿರ್ಮಾಣಗೊಂಡ ಸುಸಜ್ಜಿತ ಅಂಬೇಡ್ಕರ್‌ ಭವನ ಇಂದು ನಿರುಪಯೋಗಿಯಾಗಿ ಪಾಳುಬಿದ್ದಿದೆ. ಅಂಬೇಡ್ಕರ್‌ ಭವನ ನಿರ್ಮಾಣಗೊಂಡ ಆರಂಭದ ಹಂತದಲ್ಲಿ ಇಲ್ಲಿ ನಿರಂತರ ಕಾರ್ಯಕ್ರಮಗಳು ನಡೆಯುತ್ತಿದ್ದವು. ಬಳಿಕ ನಿರ್ವಹಣೆ ಇಲ್ಲದೆ ಭವನ ಗಿಡಗಂಟಿಗಳಿಂದ ಆವೃತವಾಗಿದೆ.

ಪಡೀಲು ಸಂಪರ್ಕ ರಸ್ತೆಯ ನಡು ಭಾಗದಲ್ಲಿ ಬರುವ ಕಾರೆಕ್ಕಾಡು ಎಂಬಲ್ಲಿ ರಸ್ತೆ ಬದಿಯೇ ಈ ಅಂಬೇಡ್ಕರ್‌ ಭವನ ಇದೆ. ಐದೂವರೆ ಸೆಂಟ್ಸ್‌ ಜಾಗದಲ್ಲಿರುವ ಈ ಭವನವು ವೇದಿಕೆ, ಶೌಚಾಲಯ, ಸ್ನಾನದ ಕೋಣೆ, ಆಲಂಕಾರಿಕ ಕೊಠಡಿ, ಭವನದ ಎದುರು ಇಂಟರ್‌ಲಾಕ್‌ ನೆಲಹಾಸು, ಕಾಂಪೌಂಡ್‌, ಹಾಲ್‌, ಗೇಟ್‌ ಮುಂತಾದ ಎಲ್ಲ ಸೌಲಭ್ಯಗಳನ್ನು ಹೊಂದಿದ್ದರೂ 10-15 ವರ್ಷಗಳಿಂದ ನಿರ್ವಹಣೆ ಮಾಡದೆ ಉಪಯೋಗಕ್ಕೆ ಸಿಗುತ್ತಿಲ್ಲ.

ಭವನದ ಹಿಂಭಾಗದ ಮೂಲೆ ಹಂಚುಗಳು ಕೆಳಕ್ಕೆ ಉರುಳಿದ್ದು, ಮಳೆ ನೀರು ಹೀರಿಕೊಂಡ ಹಿಂಬದಿಯ ಗೋಡೆ ಕುಸಿತದ ಭೀತಿಯಲ್ಲಿದೆ. ಭವನದ ಸುತ್ತಲೂ ಗಿಡಗಂಟಿಗಳು ಬೆಳೆದಿವೆ. ಭವನದ ಒಳಾಂಗಣ ಬಲೆ, ಕಸಗಳಿಂದ ಕೂಡಿದೆ. ಧ್ವಜ ಕಟ್ಟೆಯೂ ಜೀರ್ಣಾವಸ್ಥೆಗೆ ತಲುಪಿದೆ. ಪ್ರಸ್ತುತ ಈ ಭವನ ಹೊಸ ವರ್ಷಾಚರಣೆ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗಿದೆ. ಉಳಿದಂತೆ ಇಲ್ಲಿ ಯಾವುದೇ ಕಾರ್ಯಕ್ರಮಗಳು ನಡೆದದ್ದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ.

ದಲಿತ ಸಂಘಟನೆಗಳು ತಾಲೂಕಿಗೆ ಅಂಬೇಡ್ಕರ್‌ ಭವನ ಒದಗಿಸುವಂತೆ ಶಾಸಕರು, ಜನಪ್ರತಿನಿಧಿಗಳಿಗೆ ಮನವಿ ಮಾಡುತ್ತಾ, ಆಗ್ರಹಿಸುತ್ತಾ ಬಂದಿದ್ದಾರೆ. ಆದರೆ ಇರುವ ವ್ಯವಸ್ಥೆಯನ್ನು ಬಳಸಿಕೊಳ್ಳುವ, ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಯಾರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ನೋವಿನಿಂದಲೇ ಹೇಳುತ್ತಿದ್ದಾರೆ.

ಸ್ಪಂದನೆಯಿಲ್ಲ
ಅಂಬೇಡ್ಕರ್‌ ಭವನವನ್ನು ಸಮುದಾಯ ಅಂಬೇಡ್ಕರ್‌ ಭವನವಾಗಿ ಪರಿವರ್ತಿಸಿ ದುರಸ್ತಿ ಕಾರ್ಯಗಳನ್ನು ಮಾಡಿ ಸುಸಜ್ಜಿತ ಭವನ ರೂಪಿಸಬೇಕೆಂದು ಶಾಸಕರು, ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೆ ಯಾರೂ ಸ್ಪಂದನೆ ನೀಡುತ್ತಿಲ್ಲ. ತಾಲೂಕಿನಲ್ಲಿ ಅಂಬೇಡ್ಕರ್‌ ಭವನಗಳ ನಿರ್ಮಾಣಕ್ಕೆ 8 ಕೋಟಿ ರೂ. ಬಿಡುಗಡೆಗೊಂಡಿದ್ದು, ಆ ಭವನ ನಿರ್ಮಾಣದ ಜತೆಗೆ ಕಾರೆಕ್ಕಾಡಿನಲ್ಲಿರುವ ಅಂಬೇಡ್ಕರ್‌ ಭವನವನ್ನೂ ದುರಸ್ತಿ ಮಾಡಿಕೊಡಬೇಕು ಎಂಬುದು ನಮ್ಮ ಬೇಡಿಕೆ.
– ಅಧ್ಯಕ್ಷರು, ದಲಿತ ಸೇವಾ
ಸಮಿತಿ ತಾಲೂಕು ಘಟಕ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.