ಆ್ಯಂಬುಲೆನ್ಸ್ ಚಾಲಕ- ಮಾಲಕರಿಂದ ಪ್ರತಿಭಟನೆ
Team Udayavani, Jul 19, 2017, 2:50 AM IST
ಮಹಾನಗರ: ವೆನಾÉಕ್ ಜಿಲ್ಲಾ ಸರಕಾರಿ ಆಸ್ಪತ್ರೆ ಸಹಿತ ಜಿಲ್ಲೆಯ ಎಲ್ಲ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಆವರಣದಲ್ಲಿ ಆ್ಯಂಬುಲೆನ್ಸ್ ಚಾಲಕರಿಗೆ ಮೂಲ ಸೌಕರ್ಯ ಒದಗಿಸಲು ಆಗ್ರಹಿಸಿ ತುಳುನಾಡ ರಕ್ಷಣಾ ವೇದಿಕೆಯ “ಆ್ಯಂಬುಲೆನ್ಸ್ ಮಾಲಕರ ಹಾಗೂ ಚಾಲಕರ ಘಟಕ’ದ ವತಿಯಿಂದ ಜು. 17ರಂದು ವೆನಾÉಕ್ ಆಸ್ಪತ್ರೆಯ ಬಳಿ ಪ್ರತಿಭಟನೆ ನಡೆಯಿತು.
ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಮಾತನಾಡಿ, ಮಂಗಳೂರು ವಿಶ್ವದಲ್ಲೇ ಮಾನ್ಯತೆ ಪಡೆದ ನಗರ ವಾಗಿದ್ದು, ಇಲ್ಲಿ ವಿಶ್ವದರ್ಜೆ ಗುಣಮಟ್ಟದ ಶಿಕ್ಷಣ ಸಂಸ್ಥೆಗಳು, ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳಿವೆ. ಆರೋಗ್ಯ ಕ್ಷೇತ್ರ ದಲ್ಲಿ ಆ್ಯಂಬುಲೆನ್ಸ್ ವಾಹನಗಳ ಸೇವೆ ಪ್ರಮುಖವಾದುದು. ಆ್ಯಂಬುಲೆನ್ಸ್ ಚಾಲಕರು ಜೀವರಕ್ಷಕರು. ಸೇವಾ ಮನೋಭಾವ ಹೊಂದಿರುವ ಇವರು ಎಂಥ ಪರಿಸ್ಥಿತಿಯಲ್ಲೂ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗುತ್ತಾರೆ ಎಂದರು.
ಕೂಡಲೇ ಸರಿಪಡಿಸಿ
2010ರಲ್ಲಿ ಸಂಭವಿಸಿದ್ದ ಮಂಗಳೂರು ವಿಮಾನ ದುರಂತದ ಸಂದರ್ಭದಲ್ಲಿ ಇವರು ನಿರ್ವಹಿಸಿದ ಸೇವೆ ಶ್ಲಾಘನೀಯ. ಆ್ಯಂಬುಲೆನ್ಸ್ನಲ್ಲೇ ಜೀವನೋಪಾಯ ಕಂಡುಕೊಂಡಿರುವ ಇವರಿಗೆ ಆಸ್ಪತ್ರೆಗಳ ಆವರಣದಲ್ಲಿ ಮೂಲ ಸೌಕರ್ಯದ ಸಮಸ್ಯೆ ಎದುರಾಗುತ್ತಿದ್ದು, ಅದನ್ನು ಕೂಡಲೇ ಸರಿಪಡಿಸಬೇಕು ಎಂದು ಅವರು ಆಗ್ರಹಿಸಿದರು.
ನೈರ್ಮಲ್ಯ ಕಾಪಾಡಿ
ವೆನಾÉಕ್ ಆಸ್ಪತ್ರೆಯ ಹೊರಗೆ ಆ್ಯಂಬುಲೆನ್ಸ್ ನಿಲ್ಲಿಸುವ ಪ್ರದೇಶದಲ್ಲಿ ಸಾರ್ವಜನಿಕರು ಕಸ ಬಿಸಾಡುವುದು ಹಾಗೂ ಮೂತ್ರ ವಿಸರ್ಜಿಸುವುದರಿಂದ ಈ ಪ್ರದೇಶದಲ್ಲಿ ಶುಚಿತ್ವಕ್ಕೆ ತೊಂದರೆ ಯಾಗಿದ್ದು, ಆಂಬ್ಯುಲೆನ್ಸ್ ಚಾಲಕರಿಗೆ ಮಲೇರಿಯಾ, ಡೆಂಗ್ಯು ರೋಗಗಳು ಬರುವ ಸಾಧ್ಯತೆಗಳಿವೆ. ಜಿಲ್ಲಾಡಳಿತವು ತತ್ಕ್ಷಣ ಈ ಪ್ರದೇಶದಲ್ಲಿ ಶುಚಿತ್ವ ಹಾಗೂ ನೈರ್ಮಲ್ಯ ಕಾಪಾಡಲು ಕ್ರಮ ಜರಗಿಸಬೇಕು. ಜತೆಗೆ ಇವರಿಗಾಗಿ ಈ ಪ್ರದೇಶದಲ್ಲಿ ಶೌಚಾಲಯ ಹಾಗೂ ಸ್ನಾನಗೃಹ ನಿರ್ಮಿಸಬೇಕು. ಸುಸಜ್ಜಿತ ಪಾರ್ಕಿಂಗ್ (ಮೇಲ್ಛಾವಣಿ ಸಹಿತ) ವ್ಯವಸ್ಥೆ ಮಾಡಬೇಕು ಹಾಗೂ ಜಿಲ್ಲೆಯಲ್ಲಿರುವ ಇತರ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಆ್ಯಂಬುಲೆನ್ಸ್ ಚಾಲಕರಿಗೂ ಸೂಕ್ತ ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿದರು.
ಪ್ರಶಾಂತ್ ಭಟ್ ಕಡಬ, ಆನಂದ್ ಅಮೀನ್ ಅಡ್ಯಾರ್, ಅಬ್ದುಲ್ ರಶೀದ್ ಜಪ್ಪು, ತು.ರ.ವೇ. ಆ್ಯಂಬುಲೆನ್ಸ್ ಮಾಲಕರ ಹಾಗೂ ಚಾಲಕರ ಘಟಕದ ಅಧ್ಯಕ್ಷ ಗಂಗಾಧರ್, ಉಪಾಧ್ಯಕ್ಷರಾದ ನಿತ್ಯಾನಂದ ವಾಮಂಜೂರು, ದೇವಿಪ್ರಸಾದ್ ಕಾವೂರು, ಪ್ರಧಾನ ಕಾರ್ಯದರ್ಶಿ ಸಿ.ಎಸ್. ರಾಧಿಕಾ, ಮಹಮ್ಮದ್ ಸಿರಾಜ್ ಅಡ್ಕರೆ, ರಕ್ಷಿತ್ ಬಂಗೇರ ಕುಡುಪು, ಹರೀಶ್ ಶೆಟ್ಟಿ ಶಕ್ತಿನಗರ, ಜ್ಯೋತಿಕಾ ಜೈನ್, ಉಮೇಶ್ ಮಂಕಿಸ್ಟಾಂಡ್, ಗಂಗಾಧರ್ ಅತ್ತಾವರ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.