ಅಮಿತ್‌ ಶಾ ಭೇಟಿ ಹಿನ್ನೆಲೆ : ಎಲ್ಲರ ಚಿತ್ತ ಪುಣ್ಯ ಕ್ಷೇತ್ರದೆಡೆಗೆ


Team Udayavani, Feb 14, 2018, 10:36 AM IST

14-Feb-3.jpg

ಸುಬ್ರಹ್ಮಣ್ಯ: ನಾಗಾರಾಧನೆಗೆ ಪ್ರಸಿದ್ಧಿ ಪಡೆದ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ರಾಜಕೀಯ ಕ್ಷೇತ್ರದವರಿಗೂ ಶಕ್ತಿ ಕೇಂದ್ರವಾಗಿ ಪರಿಣಮಿಸುತ್ತಿದೆ.

ಕುಕ್ಕೆಗೂ ಗಣ್ಯರಿಗೂ ಹಿಂದಿನಿಂದಲೂ ನಂಟು. ಕ್ರೀಡೆ, ಸಿನಿಮಾ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು ತಮ್ಮ ಕುಟುಂಬದ ಉತ್ತರೋತ್ತರ ಅಭಿವೃದ್ಧಿಯನ್ನು ಆಶಿಸಿ ಇಲ್ಲಿಗೆ ಬಂದು ಸರ್ಪ ಸಂಸ್ಕಾರ ಇತ್ಯಾದಿ ಸೇವೆ ಸಲ್ಲಿಸಿದ್ದು ಉಂಟು.

ರಾಜಕೀಯ ಮುತ್ಸದ್ಧಿಗಳು ಚುನಾವಣೆಗೆ ಮುನ್ನ ದೇವಿ ಕ್ಷೇತ್ರಗಳಿಗೆ ಹೋಗುವುದು ವಾಡಿಕೆ. ಆದರೀಗ ಕುಕ್ಕೆಯತ್ತಲೂ ಪಾದ ಬೆಳೆಸುತ್ತಿದ್ದಾರೆ. ಈಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಸರ್ಪ ದೋಷ ನಿವಾರಣೆಗಾಗಿ ಧಾರ್ಮಿಖ ಉದ್ದೇಶದಿಂದ ಕುಕ್ಕೆ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದರೂ, ಇದರ ಹಿಂದೆ ಬೇರೆಯದೆ ಲೆಕ್ಕಾಚಾರವಿದೆ ಎನ್ನಲಾಗುತ್ತಿದೆ.

ದೇವಸ್ಥಾನಗಳಿಂದ ಆರಂಭ
ಉತ್ತರ ಭಾರತ ಚುನಾವಣೆ ಆರಂಭದಲ್ಲಿ ಪ್ರಖ್ಯಾತ ಕಾಶಿ ವಿಶ್ವನಾಥ ದೇಗುಲಕ್ಕೆ ಭೇಟಿ ನೀಡಿ ಅಮಿತ್‌ ಶಾ ತಮ್ಮ ಚುನಾವಣ ಕಾರ್ಯವನ್ನು ಆರಂಭಿಸಿದ್ದರು. ಅದರಂತೆ ಕರ್ನಾಟಕ ವಿಧಾನಸಭಾ ಚುನಾವಣೆ ಕಾರ್ಯಕ್ಕೆ ಕುಕ್ಕೆಯಿಂದಲೇ ಚಾಲನೆ ನೀಡುವ ಸಂಭವವಿದೆ. ಆ ಮೂಲಕ ಕರಾವಳಿಯಿಂದ ತಮ್ಮ ರಾಜಕೀಯ ಜೈತ್ರ ಯಾತ್ರೆಯನ್ನು ಆರಂಭಿಸಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಉದ್ದೇಶ ಅವರದ್ದು ಎಂದು ವಿಶ್ಲೇಷಿಸಲಾಗುತ್ತಿದೆ.

ಸಹೋದರಿಯಿಂದ ಸೇವೆ
ಶಾ ಅವರ ಕುಟುಂಬಕ್ಕೂ ಕುಕ್ಕೆಗೂ ಹಿಂದಿನಿಂದ ನಂಟಿದೆ. ಇಲ್ಲಿಯ ಭಕ್ತರಲ್ಲಿ ಅಮಿತ್‌ ಶಾ ಅವರೂ ಒಬ್ಬರು. ಎರಡು ವರ್ಷದ ಹಿಂದೆ ಶಾ ಅವರ ಸಹೋದರಿ ಹಾಗೂ ಭಾವ ಇಲ್ಲಿಗೆ ಆಗಮಿಸಿ ಸೇವೆಗಳನ್ನು ಪೂರೈಸಿದ್ದರು. ಈ ಹಿಂದೆಯೇ ಅಮಿತ್‌ ಶಾ ಆಗಮಿಸುವ ನಿರೀಕ್ಷೆ ಈಡೇರಿರಲಿಲ್ಲ.

ರಾಜಕಾರಣಿಗಳೂ ಹಿಂದೆ ಬಿದ್ದಿಲ್ಲ 
ಇಲ್ಲಿಗೆ ಈ ಹಿಂದೆ ಆಗಮಿಸಿದ ರಾಜಕೀಯ ನಾಯಕರ ಪಟ್ಟಿ ದೊಡ್ಡದಿದೆ. ಮಾಜಿ ಪ್ರಧಾನಿ ಹೆಚ್‌ ಡಿ ದೇವೆಗೌಡ, ಮನೇಕಾ ಗಾಂಧಿ, ವರುಣ್‌ ಗಾಂಧಿ, ಬಿ.ಎಸ್‌ ಯಡಿಯೂರಪ್ಪ, ಅನಂತಕುಮಾರ್‌ ಸೇರಿದಂತೆ ಹಲವರು ಭೇಟಿ ನೀಡಿದ್ದರು. ಇದಲ್ಲದೇ ಸಚಿನ್‌ ತೆಂಡುಲ್ಕರ್‌ ಸಹಿತ ಕ್ರಿಕೆಟ್‌ ದಿಗ್ಗಜರು, ವಿಜಯ ಮಲ್ಯ ಸೇರಿದಂತೆ ಹಲವು ಉದ್ಯಮಿಗಳೂ ಆಗಮಿಸಿದ್ದಾರೆ. 

ಆಶ್ಲೇಷ ಬಲಿ ಸೇವೆ
ಫೆ.19ರಂದು ಕ್ಷೇತ್ರಕ್ಕೆ ಆಗಮಿಸುವ ಅಮಿತ್‌ ಶಾ ರಾತ್ರಿ ಇಲ್ಲಿ ತಂಗುವರು. ಫೆ.20ರ ಬೆಳಗ್ಗೆ ದೇಗುಲಕ್ಕೆ ಭೇಟಿ ನೀಡಿ
ದೇವರ ದರ್ಶನ ಪಡೆಯುವರು. ಬಳಿಕ ಸರ್ಪದೋಷಗಳ ನಿವಾರಣೆಯ ಸೇವೆಗಳಲ್ಲಿ ಒಂದಾದ ಆಶ್ಲೇಷ ಬಲಿ
ಸೇವೆ ಪೂರೈಸುವರು. ಬಳಿಕ ನಗರದ ಬೂತ್‌ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುವರು. ರೂಪು
ರೇಷೆ ಹಾಗೂ ಇನ್ನಿತರ ಕುರಿತು ಪಕ್ಷದ ಮುಖಂಡರು ಸಿದ್ಧತೆ ನಡೆಸುತ್ತಿದ್ದಾರೆ . 

ಸಹಜ ಭೇಟಿ
‘ಹಿಂದೂ ದೇಗುಲಕ್ಕೆ ಧಾರ್ಮಿಕ ನಂಬಿಕೆಯ ಅಮಿತ್‌ ಶಾ ಭೇಟಿ ನೀಡುವುದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಅವರ ಭೇಟಿ ಅವಧಿ ಚುನಾವಣೆ ಸಮಯವಾಗಿರುವುದರಿಂದ ಕಾರ್ಯಕರ್ತರ ಸಭೆ ಹಾಗೂ ಪಕ್ಷದ ಶಕ್ತಿ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ. ಅದೇನೂ ಹೊಸತಲ್ಲ ಹಾಗೂ ಬೇರೆ ಬಣ್ಣ ಹಚ್ಚುವ ಅವಶ್ಯಕತೆ ಇಲ್ಲ.
ಸಂಜೀವ ಮಠಂದೂರು,
  ಜಿಲ್ಲಾ ಬಿಜೆಪಿ ಅಧ್ಯಕ್ಷ

ವಿಶೇಷ ವರದಿ

ಟಾಪ್ ನ್ಯೂಸ್

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.