ಪಿಂಚಣಿಗಾಗಿ ಅಂಗನವಾಡಿ ಸಿಬಂದಿ ಕಾನೂನು ಹೋರಾಟ


Team Udayavani, Nov 26, 2021, 7:08 AM IST

ಪಿಂಚಣಿಗಾಗಿ ಅಂಗನವಾಡಿ ಸಿಬಂದಿ ಕಾನೂನು ಹೋರಾಟ

ಮಂಗಳೂರು: ಪಿಂಚಣಿಗಾಗಿ ಸುದೀರ್ಘ‌ ಹೋರಾಟ ಮಾಡಿ ದಣಿದ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರು ಇದೀಗ ಕಾನೂನು ಹೋರಾಟದ ಮೊರೆ ಹೋಗಿದ್ದಾರೆ.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಜತೆಗೆ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ರಾಜ್ಯ ಸಮಿತಿ ಸಭೆ ನಡೆಸಿ ಕಾನೂನು ಹೋರಾಟಕ್ಕೆ ತಯಾರಿ ಆರಂಭಿಸಿದೆ.

1975ರಲ್ಲಿ ಆರಂಭಗೊಂಡ ಅಂಗನವಾಡಿಗಳ ಸಿಬಂದಿಯ ಕರ್ತವ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆಯೇ ವಿನಃ ಸರಕಾರ ಮಾತ್ರ ಕನಿಷ್ಠ ವೇತನವನ್ನಾಗಲೀ, ಜೀವನ ನಿರ್ವಹಣೆಗೆ ಬೇಕಾದಂತಹ ಗೌರವಧನವನ್ನಾಗಲೀ ನೀಡಿಲ್ಲ. 4 ದಶಕಗಳಿಂದ ಸಿಬಂದಿ ಹೋರಾಡುತ್ತಲೇ ಇದ್ದಾರೆ. ಸರಕಾರ ಮಾತ್ರ ಕಣ್ಣು-ಕಿವಿ ಮುಚ್ಚಿ ಕುಳಿತಿದೆ. ಈ ಮಧ್ಯೆ ಕೇಂದ್ರ ಸರಕಾರವು ಅಸಂಘಟಿತ ವಲಯದಲ್ಲಿ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರನ್ನು ಸೇರಿಸುವ ಬಗ್ಗೆ ಪ್ರಸ್ತಾವ ಮಾಡಿತಾದರೂ ಇನ್ನೂ ಯಾವುದೇ ಸಿದ್ಧತೆ ಕಾಣುತ್ತಿಲ್ಲ ಎಂಬುದು ನೌಕರರ ಅಳಲು.

ಕೆಲಸ ಮಾತ್ರ ಸಮಾನ!:

ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರು ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಕರ್ತವ್ಯಗಳನ್ನು ನಿರ್ವಹಿಸುತ್ತಾ ಸರಕಾರದ ಎಲ್ಲ ಯೋಜನೆಗಳನ್ನು ಮನೆಬಾಗಿಲಿಗೆ ಮುಟ್ಟಿಸುವ ಗುರುತರ ಕೆಲಸಗಳನ್ನು ಸರಕಾರಿ ನೌಕರರಷ್ಟೇ ಜವಾಬ್ದಾರಿಯಿಂದ ನಿರ್ವಹಿಸುತ್ತಿದ್ದರೂ ಸಮಾನ ವೇತನ ಸಿಗುತ್ತಿಲ್ಲ.

ಶಿಫಾರಸು ಜಾರಿಯಾಗಿಲ್ಲ:

39 ವರ್ಷಗಳಿಂದ ಮಾಡಿದ ಕೆಲಸಗಳ ಬಗ್ಗೆ ಹಾಗೂ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಕೆಲಸದ ಒತ್ತಡದ ಬಗ್ಗೆ 2010-11ನೇ ಸಾಲಿನಲ್ಲಿ 30 ಮಹಿಳಾ ಸಂಸದರು ಮಹಿಳಾ ಸಬಲೀಕರಣ ಹಾಗೂ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಅಧ್ಯಯನ ನಡೆಸಿ ಲೋಕಸಭೆ, ರಾಜ್ಯ ಸಭೆಯಲ್ಲಿ ವರದಿ ಮಂಡಿಸಿದ್ದಾರೆ.

ವರದಿಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ಜಾಗತೀಕರಣಗೊಳಿಸಬೇಕು ಹಾಗೂ ಅಂಗನವಾಡಿ ಸಿಬಂದಿಯ ಕೆಲಸದ ಒತ್ತಡದ ಬಗ್ಗೆ ಹಾಗೂ ಸಂಭಾವನೆಗಳ

ಕುರಿತು ಕ್ರಮಬದ್ಧವಾದ ನೀತಿಯನ್ನು ಜಾರಿ ಮಾಡಿ ಕಾಲಕಾಲಕ್ಕೆ ಇತರ ಸವಲತ್ತುಗಳು ಹಾಗೂ ಸಂಭಾವನೆಯಲ್ಲಿ ವಾರ್ಷಿಕ ಹೆಚ್ಚಳ ಹಾಗೂ ಇತರ ಭತ್ತೆಗಳನ್ನು ನೀಡುವಂತೆ ಶಿಫಾರಸು ಇದೆಯಾದರೂ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಯಾವುದೇ ಕ್ರಮ ಕೈಗೊಂಡಿಲ್ಲ.

ನಿವೃತ್ತಿ ವೇಳೆ ಸಿಗುವುದು   30, 50 ಸಾವಿರ ರೂ.! :

ನೌಕರರಿಗೆ 2010ರ ವರೆಗೆ ನಿವೃತ್ತಿ ವಯಸ್ಸಿನ ಮಿತಿ ಇರದಿದ್ದ ಕಾರಣ ವೃದ್ಧಾಪ್ಯದ ವರೆಗೂ ಸೇವೆ ಸಲ್ಲಿಸುತ್ತಿದ್ದರು. 2010-11ರಲ್ಲಿ ಸರಕಾರವು ನಿವೃತ್ತಿ ವಯಸ್ಸನ್ನು 60 ವರ್ಷಕ್ಕೆ ನಿಗದಿ ಮಾಡಿತು. ಆಗ ಕಾರ್ಯಕರ್ತೆಯರಿಗೆ 50 ಸಾವಿರ ರೂ., ಸಹಾಯಕಿಯರಿಗೆ 30 ಸಾವಿರ ರೂ. ಇಡುಗಂಟನ್ನು ನೀಡಲಾಗುತ್ತಿದೆ. ಆದರೆ ಪಿಂಚಣಿಯ ವ್ಯವಸ್ಥೆಯಿಲ್ಲದೆ ಅತ್ಯಲ್ಪ ಇಡುಗಂಟಿನೊಂದಿಗೆ ನಿವೃತ್ತರಾಗುವ ಅವರು ಮುಪ್ಪಿನಲ್ಲಿ ಆರ್ಥಿಕ ವ್ಯವಸ್ಥೆ ಇಲ್ಲದೆ ನರಳುತ್ತಿದ್ದಾರೆ. ಇಂತಹ ಪರಿಸ್ಥಿತಿ ಯಾರಿಗೂ ಬರಬಾರದು ಎಂಬುದು ಅವರ ಕೂಗು.

ಅಂಗನವಾಡಿ ಸಿಬಂದಿಗೆ ನಿವೃತ್ತಿ ಸಮಯದಲ್ಲಿ ಪಿಂಚಣಿ ದೊರೆಯಬೇಕು ಹಾಗೂ ಇಲಾಖೇತರ ಕೆಲಸಗಳನ್ನು ನಮಗೆ ವಹಿಸಬಾರದು ಎಂದು ಸರಕಾರವನ್ನು ಕೇಳುತ್ತಲೇ ಬಂದಿದ್ದೇವೆ. ಈ ಬಗ್ಗೆ ಈಗಾಗಲೇ ಮಾಡಿದ ಹೋರಾಟಗಳು ಫಲಕಾರಿಯಾಗದೇ ಇರುವುದರಿಂದ ಇದೀಗ ಕಾನೂನು ಹೋರಾಟಕ್ಕೆ ಇಳಿಯಬೇಕಾಯಿತು.– ಜಯಲಕ್ಷ್ಮೀ ಬಿ.ಆರ್‌.,ಅಂಗನವಾಡಿ ಕಾರ್ಯಕರ್ತೆಯರ / ಸಹಾಯಕಿಯರ ಸಂಘದ ರಾಜ್ಯಾಧ್ಯಕ್ಷೆ

 

-ದಿನೇಶ್‌ ಇರಾ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.