ಸ್ವಚ್ಛತಾ ಕಾರ್ಯಕ್ಕೆ ಅಂಗನವಾಡಿ ಕೇಂದ್ರ ಸಾಥ್‌


Team Udayavani, Mar 26, 2018, 11:58 AM IST

26-March-7.jpg

ಪಡುಪಣಂಬೂರು: ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛ ಭಾರತ ಕಲ್ಪನೆಯ ಕಾರ್ಯಕ್ಕೆ ಆದ್ಯತೆ ನೀಡಿ ದೇಶದಲ್ಲಿಯೇ ಸಂಚಲನ ಮೂಡಿಸುವಂತೆ ಮಾಡಿದ್ದರಿಂದ ಕೇವಲ ನಗರಕ್ಕೆ ಸೀಮಿತವಾಗದೇ ಇಂದು ಗ್ರಾಮೀಣ ಭಾಗದಲ್ಲೂ ಗ್ರಾಮ ಪಂಚಾಯತ್‌ ಮೂಲಕ ಸ್ವಚ್ಛತಾ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಇಂತಹ ವಿಶೇಷ ಕಾರ್ಯಕ್ಕೆ ಈಗ ಅಂಗನವಾಡಿ ಕೇಂದ್ರವು ಸಹ ಸೇರ್ಪಡೆಗೊಂಡಿದೆ.

ಇಲ್ಲಿನ ಪಡುಪಣಂಬೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವಾರು ಸಂಘ- ಸಂಸ್ಥೆಗಳು ವಾರಕ್ಕೆ ಮೂರರಿಂದ ನಾಲ್ಕು ಬಾರಿ ತಮ್ಮ ಪರಿಸರದಲ್ಲಿ ಸ್ವಚ್ಛತೆಯ ಶ್ರಮದಾನದಲ್ಲಿ ತೊಡಗಿಸಿಕೊಂಡಿದೆ. ಈಗ ಗ್ರಾಮದ ಎಲ್ಲ 6 ಅಂಗನವಾಡಿ ಕೇಂದ್ರಗಳು ಪ್ಲಾಸ್ಟಿಕ್‌ ಸಂಗ್ರಹ ಕೇಂದ್ರವಾಗಿ ಪರಿವರ್ತನೆಗೊಂಡಿರುವುದರಿಂದ ಇನ್ನಷ್ಟು ಪರಿಣಾಮಕಾರಿಯಾಗಿ ಸ್ವಚ್ಛತ ಕಾರ್ಯ ನಿರ್ವಹಿಸುವ ಜವಾಬ್ದಾರಿಯು ಹಂಚಿಕೆಯಾದಂತಾಗಿದೆ.

ಸಂಗ್ರಹ ಹೇಗೆ?
ಅಂಗನವಾಡಿ ಕೇಂದ್ರದ ಸುತ್ತ ಮುತ್ತ ವ್ಯಾಪ್ತಿಯ ಗ್ರಾಮಸ್ಥರು ಪ್ಲಾಸ್ಟಿಕ್‌ನ ಕೈ ಚೀಲ, ಹಾಲಿನ ಚೀಲ, ಇನ್ನಿತರ ಪ್ಲಾಸ್ಟಿಕ್‌
ನಂತಹ ವಸ್ತುಗಳು ಬಳಕೆಯಾಗಿ ತ್ಯಾಜ್ಯಕ್ಕೆ ಸೇರುವ ಪ್ಲಾಸ್ಟಿಕ್‌ಗಳನ್ನು ಮಾತ್ರ ಅಂಗನವಾಡಿ ಕೇಂದ್ರಕ್ಕೆ ನೀಡಬೇಕು. ಒಣ ಕಸ ಮತ್ತು ಹಸಿ ಕಸದೊಂದಿಗೆ ಸೇರಿಸದೇ ಪ್ಲಾಸ್ಟಿಕನ್ನು ಮರು ಬಳಕೆಯಂತೆ ಮಾಡಲು ಕೇಂದ್ರಕ್ಕೆ ನೀಡಬೇಕು. ಪ್ರತಿ ಶನಿವಾರ ಕೇಂದ್ರಗಳಿಗೆ ಬಂದು ಪಂಚಾಯತ್‌ನ ತ್ಯಾಜ್ಯ ವಾಹನಗಳು ವಿಶೇಷವಾಗಿ ಸಂಗ್ರಹಿಸುತ್ತದೆ. ಇದನ್ನು ಅನಂತರ ಜಿಲ್ಲಾ ಕೇಂದ್ರಕ್ಕೆ ವಿಲೇವಾರಿ ಮಾಡಲು ಬಳಕೆ ಯಾಗುತ್ತದೆ. ಜಿಲ್ಲೆಯ ಎಲ್ಲ ಗ್ರಾ.ಪಂ.ಗಳು ಗ್ರಾಮದ ಅಂಗನವಾಡಿ ಕೇಂದ್ರವನ್ನು ಈ ರೀತಿಯಾಗಿ ಬಳಸಿಕೊಳ್ಳಲು ಸುತ್ತೋಲೆ ಹೊರಡಿಸಲಾಗಿದೆ.

ಪಂಚಾಯತ್‌ ವ್ಯಾಪ್ತಿಯ ತೋಕೂರು ಸುಬ್ರಹ್ಮಣ್ಯ, ತೋಕೂರು ಹಿಂದೂಸ್ತಾನಿ, ಕಲ್ಲಾಪು, ಕೆರೆಕಾಡು-ಬೆಳ್ಳಾಯರು, ಕಂಬಳಬೆಟ್ಟು, ಪಡುಪಣಂಬೂರು ಅಂಗನವಾಡಿ ಕೇಂದ್ರಗಳು ತ್ಯಾಜ್ಯ ಸಂಗ್ರಹಿಸಿ ನೀಡುತ್ತಿವೆ. ಪಂಚಾಯತ್‌ನಿಂದ ವಿತರಿಸಿರುವ ರೇಡಿಯೋ ಬಳಸಿಕೊಂಡು ಪ್ರತಿ ಶುಕ್ರವಾರ ಪ್ರಸಾರ ವಾಗುವ ಸ್ವಚ್ಛತಾ ಕಾರ್ಯಕ್ರಮದ ಬಗ್ಗೆ ಆಲಿಸಿ ಗ್ರಾಮದಲ್ಲಿ ಸ್ವಚ್ಛತೆಯ ಜಾಗೃತಿ ಕಾರ್ಯಕ್ರಮ ಸಂಯೋಜಿಸುವಾಗ ಸಹಕಾರ ನೀಡುತ್ತಿದೆ.

ಸ್ವಚ್ಛತೆ ನಮ್ಮ ಕರ್ತವ್ಯ
ಅಂಗನವಾಡಿ ಕೇಂದ್ರವನ್ನು ಸ್ವಚ್ಛತೆಯಲ್ಲಿ ಗ್ರಾ.ಪಂ.ಗೆ ಸಹಕಾರ ನೀಡುವುದನ್ನು ನಮ್ಮ ಕರ್ತವ್ಯ ಎಂದು ಭಾವಿಸಿದ್ದೇವೆ. ಕಾರ್ಯಕರ್ತರಿಗೆ ಕೇಂದ್ರದಲ್ಲಿಯೇ ಸಾಕಷ್ಟು ಕೆಲಸಗಳಿದೆ. ಆ ನಡುವೆಯೂ ಇಂತಹ ಕಾರ್ಯಕ್ಕೆ ಕೈ ಜೋಡಿಸಿದ್ದೇವೆ. ಜನರು ಸಹ ಪ್ಲಾಸ್ಟಿಕ್‌ನ್ನು ನೀಡುವಾಗ ಆದಷ್ಟು ಬಿಡಿಬಿಡಿಯಾಗಿ, ನೇರವಾಗಿ ಮರು ಬಳಕೆಯಾಗುವಂತೆ ನೀಡಿದರೆ ಸಹಕಾರಿಯಾಗುತ್ತದೆ.
– ನಾಗರತ್ನಾ,ಮೇಲ್ವಿಚಾರಕರು,
 ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಂಗಳೂರು

ಸ್ವಚ್ಛತೆ ಜಾಗೃತಿ ನಿರಂತರ
ಗ್ರಾಮದಲ್ಲಿ ಅಂಗನವಾಡಿ ಕೇಂದ್ರವು ಬಹಳ ಹತ್ತಿರದ ಸಂಪರ್ಕ ಕೇಂದ್ರವಾಗಿರುವುದರಿಂದ ಮಹಿಳೆಯರು ಹೆಚ್ಚಾಗಿ ಮಕ್ಕಳೊಂದಿಗೆ ಭೇಟಿ ನೀಡುತ್ತಾರೆ. ಜತೆಗೆ ಬಾಣಂತಿಯರು, ಗರ್ಭಿಣಿಯರು ನಿಕಟವಾಗಿ ಕೇಂದ್ರದ ಅವಕಾಶ ಪಡೆಯುವಾಗ ಇಂತಹ ಸ್ವಚ್ಛತಾ ಜಾಗೃತಿಯನ್ನು ಪ್ರಚಾರ ಪಡಿಸಲು ಹಾಗೂ ಕೇಂದ್ರವನ್ನು ಇದಕ್ಕಾಗಿ ಬಳಸಿಕೊಳ್ಳುವ ಉದ್ದೇಶವು ಸ್ವಲ್ಪ ಮಟ್ಟನಲ್ಲಿ ಪರಿಣಾಮ ಬೀರಿದೆ.
-ಲೋಕನಾಥ ಭಂಡಾರಿ, ಕಾರ್ಯದರ್ಶಿ.
ಸುಬ್ರಹ್ಮಣ್ಯ, ತೋಕೂರು ಹಿಂದೂಸ್ತಾನಿ,

ನರೇಂದ್ರ ಕೆರೆಕಾಡು

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.