ಅಂಗನವಾಡಿಗಳು ಬಾಲಸ್ನೇಹಿಯಾಗಿರಲಿ: ಅಹ್ಮದ್‌ ಹಾಜಿ


Team Udayavani, Apr 26, 2017, 3:44 PM IST

2404bteph7.jpg

ಬಂಟ್ವಾಳ : ಮಗುವಿನ ಭವಿಷ್ಯ ನಿರ್ಮಾಣದ ಮೊದಲನೆಯ ಹಂತವಾದ ಅಂಗನವಾಡಿಗಳು ಸಕಲ ವ್ಯವಸ್ಥೆಗಳೊಂದಿಗೆ ಬಾಲಸ್ನೇಹಿ ಯಾಗುವುದು ಅತ್ಯಗತ್ಯವಾಗಿದೆ ಎಂದು ಬಿ.ಎ. ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಬಿ.ಎ. ಅಹ್ಮದ್‌ ಹಾಜಿ ಮುಹಿಯುದ್ದೀನ್‌ ಹೇಳಿದರು.

ಅವರು  ದ.ಕ. ಜಿ. ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ತುಂಬೆ ಸರಕಾರಿ ಶಾಲೆ ಬಳಿ ಊರಿನ ದಾನಿಗಳ ಸಹಾಯದಿಂದ ನವೀಕೃತಗೊಂಡ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ  ಮಾತನಾಡಿದರು.

ತಾಯಿ ಮಗುವಿನ ಮೊದಲ ಶಿಕ್ಷಕಿಯಾದರೆ, ಅಂಗನವಾಡಿ ಮಗುವಿನ ಭವಿಷ್ಯ ನಿರ್ಮಾಣದ ಮೊದಲ ಮೆಟ್ಟಿಲಾಗಿದೆ. ಆದ್ದರಿಂದ ಅಂಗನವಾಡಿ ಕಟ್ಟಡಗಳು ಸಕಲ ವ್ಯವಸ್ಥೆಗಳನ್ನು ಹೊಂದಿ ಉತ್ತಮ ಶಿಕ್ಷಣ ನೀಡುವಂತಾಗಬೇಕು ಎಂದು ಹೇಳಿದರು.

ತುಂಬೆ ಗ್ರಾ.ಪಂ.  ಉಪಾಧ್ಯಕ್ಷ ಪ್ರವೀಣ್‌ ಬಿ. ತುಂಬೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ, ಒಂದು ಲಕ್ಷ ರೂ. ಅನುದಾನ ಸಹಿತ ಊರಿನ ದಾನಿಗಳ ಸಹಾಯ ಸಹಕಾರದೊಂದಿಗೆ ಈ ಅಂಗನವಾಡಿ ಕೇಂದ್ರ ಸುಂದರವಾಗಿ ಮೂಡಿ ಬಂದಿದೆ. ತುಂಬೆ ಗ್ರಾಮದಲ್ಲಿ
ರುವ ಒಟ್ಟು ಆರು ಅಂಗನವಾಡಿ ಗಳನ್ನು ನವೀಕರಿಸುವ ಕನಸನ್ನು ಹೊಂದಲಾಗಿದ್ದು ಆ ಪೈಕಿ ಈಗಾಗಲೇ ಮೂರು ಅಂಗನವಾಡಿ ಗಳನ್ನು ನವೀಕರಿಸಿ ಲೋಕಾರ್ಪಣೆಗೊಳಿಸಲಾಗಿದೆ. ಈ ಅಂಗನವಾಡಿಯ ನವೀಕರಣಕ್ಕೆ ಎಲ್ಲ ರೀತಿಯ ಸಹಾಯ, ಸಹಕಾರ ನೀಡಿದವನ್ನು ಸ್ಮರಿಸಿದರು.
 
ಕಾರ್ಯಕ್ರಮದಲ್ಲಿ ಅಂಗನವಾಡಿಯ ನವೀಕರ ಣಕ್ಕೆ ವಿವಿಧ ರೀತಿಯಲ್ಲಿ ಸಹಾಯ, ಸಹಕಾರ ನೀಡಿದ ದಾನಿಗಳಿಗೆ ಹಾಗೂ ಸ್ಥಳವಕಾಶ ಹಾಗೂ ಅಂಗನವಾಡಿ ಕಟ್ಟಡ ಒದಗಿಸಿಕೊಟ್ಟ ಬಿ.ಅಹ್ಮದ್‌ ಹಾಜಿ ಮುಹಿಯುದ್ದೀನ್‌ ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಜಿಪಂ ಸದಸ್ಯ ರವೀಂದ್ರ ಕಂಬಳಿ, ಗ್ರಾಮ ಪಂಚಾಯತ್‌ ಅಧ್ಯಕ್ಷತೆ ಹೇಮಾವತಿ, ಮಾಜಿ ಅಧ್ಯಕ್ಷ ಮಹಮ್ಮದ್‌ ವಳವೂರು, ಸದಸ್ಯ ಪ್ರಕಾಶ್‌ ಆಚಾರ್ಯ, ಮಾಜಿ ಸದಸ್ಯ ಮೋನಪ್ಪ ಮಜಿ ಮಾತನಾಡಿದರು.

ತುಂಬೆ ಫಾದರ್‌ ಮುಲ್ಲರ್‌ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಕಿರಣ್‌ ಶೆಟ್ಟಿ, ತಾಪಂ ಸದಸ್ಯ ಗಣೇಶ್‌ ಸುವರ್ಣ ತುಂಬೆ, ಗ್ರಾಪಂ ಸದಸ್ಯರಾದ ಝಹೂರ್‌ ಅಹ್ಮದ್‌, ಸಂಜೀವ ಪೂಜಾರಿ, ಶೋಭಾ ಲತಾ, ಹರಿಣಾಕ್ಷಿ, ನೇತ್ರಾ, ಆತಿಕಾ ಬಾನು, ಮಾಜಿ ಸದಸ್ಯರಾದ ಅಝೀಝ್ ತುಂಬೆ, ಶ್ರೀನಿವಾಸ್‌ ಮೊದಲಾದವರು ಉಪಸ್ಥಿತರಿದ್ದರು. ಅಂಗನವಾಡಿ ಶಿಕ್ಷಕಿ ಸಂದ್ಯಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.