ಮಳೆ ವಿಳಂಬದಿಂದ ಕಂಗೆಟಿದ್ದ ರೈತರಿಗೆ ಮತ್ತೊಂದು ಸಂಕಷ್ಟ

ಭತ್ತದ ಬೆಳೆಗೆ ಸೈನಿಕ ಹುಳುಗಳ ಬಾಧೆ!

Team Udayavani, Jul 20, 2023, 5:28 AM IST

SAINIKA HULU

ಕಾಪು: ವಿವಿಧೆಡೆ ಭತ್ತದ ಗದ್ದೆಗಳಲ್ಲಿ ನೇಜಿಗೆ ಸೈನಿಕ ಹುಳುವಿನ ಬಾಧೆ ಕಾಣಿಸಿಕೊಂಡಿದೆ. ಮೊದಲೇ ಮಳೆ ವಿಳಂಬದಿಂದ ಕೃಷಿ ಕಾರ್ಯಗಳು ನಿಧಾನ ಗತಿಯಲ್ಲಿದ್ದು ಈಗ ಸೈನಿಕ ಹುಳುಗಳ ಕಾಟ ರೈತರಲ್ಲಿ ಆತಂಕ ಮೂಡಿಸಿದೆ.

ಇವುಗಳ ವೈಜ್ಞಾನಿಕ ಹೆಸರು Spodoptera mauritia ಮತ್ತು Mythmimna separata. ಇವು ಭತ್ತ ಮಾತ್ರವಲ್ಲದೇ ಇತರ ಬೆಳೆ-ಕಳೆಗಳ ಮೇಲೂ ಇರುತ್ತವೆ. ಬೀಸುವ ಗಾಳಿ, ಕಡಿಮೆ ಮಳೆ, ಅಧಿಕ ಕಳೆ, ನೀರಿನ ಕೊರತೆ, ಒಣ ನೇಜಿ, ಶಿಫಾರಸಿಗಿಂತ ಹೆಚ್ಚಿನ ಸಾರಜನಕದ ಬಳಕೆ, ಭತ್ತದ ನೇರ ಬಿತ್ತನೆ, ವಿಳಂಬವಾಗಿ ಮಳೆ ಆರಂಭ ಇತ್ಯಾದಿ ಇವುಗಳ ಬಾಧೆ ಹೆಚ್ಚಲು ಕಾರಣ. ಪೂರಕ ವಾತಾವರಣ ನಿರ್ಮಾಣವಾದ ಕೂಡಲೇ ರಾತ್ರಿ ಹೊತ್ತು ಗುಂಪಾಗಿ ಯುದ್ಧ ಸನ್ನದ್ಧ ಸೈನಿಕರಂತೆ ಹರಿದಾಡುತ್ತ ಪ್ರಮುಖವಾಗಿ ಭತ್ತದ ಸಸಿಗಳಿಗೆ ದಾಳಿಯಿಟ್ಟು ಸಂಪೂರ್ಣ ನಾಶ ಮಾಡುತ್ತವೆ. ಇವುಗಳಿಂದಾಗಿ ರೈತರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗುತ್ತದೆ.

ಪರಿಶೀಲನೆ
ಸೈನಿಕ ಹುಳು ಬಾಧಿತ ಉಚ್ಚಿಲ ಬಡಾ ಗ್ರಾಮದ ಭಾಸ್ಕರ ಶೆಟ್ಟಿ ಅವರ ಗದ್ದೆಗೆ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ| ಬಿ. ಧನಂಜಯ ಅವರ ಮಾರ್ಗದರ್ಶನದಲ್ಲಿ ಕಾಪು ತಾಲೂಕು ಕೃಷಿ ಇಲಾಖೆ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಅರುಣ್‌ ಕುಮಾರ್‌, ಕೀಟಶಾಸ್ತ್ರ ವಿಜ್ಞಾನಿ ಡಾ| ರೇವಣ್ಣ ಮತ್ತು ಮಣ್ಣು ವಿಜ್ಞಾನಿ ಡಾ| ಜಯಪ್ರಕಾಶ್‌ ಆರ್‌. ನೇತೃತ್ವದ ತಂಡವು ಭೇಟಿ ನೀಡಿ ಪರಿಶೀಲಿಸಿ ಇದು ಸೈನಿಕ ಹುಳುವಿನ ಬಾಧೆಯೆಂದು ಖಚಿತಪಡಿಸಿದ್ದಾರೆ.

ಶ್ರೀ ಪದ್ಧತಿಯಲ್ಲಿ ಹೆಚ್ಚು
ಶ್ರೀ ಪದ್ಧತಿ ಕೃಷಿಯ ಗದ್ದೆಗಳಲ್ಲಿ ಸೈನಿಕ ಹುಳುವಿನ ಬಾಧೆಯ ಸಾಧ್ಯತೆ ಹೆಚ್ಚು. ಸಸಿ ಹಂತದಲ್ಲಿ ಪ್ರಾರಂಭವಾಗಿ ನಾಟಿ ಮಾಡಿದ 6-7 ವಾರಗಳ ವರೆಗೆ ದಾಳಿ ಇರುತ್ತದೆ. ಜುಲೈ-ಸೆಪ್ಟಂಬರ್‌ ವರೆಗೆ ಇದು ಮುಂದುವರಿಯಬಹುದು.

ಕಾಪು ತಾಲೂಕಿನ ಮಣಿಪುರ, ಉಚ್ಚಿಲ ಬಡಾ, ಕಟಪಾಡಿ, ಉಳಿಯಾರಗೋಳಿ ಯಲ್ಲಿ ಹುಳುಗಳ ದಾಳಿ ಕಂಡು ಬಂದಿದ್ದು, ಉಚ್ಚಿಲ ಬಡಾ ಗ್ರಾಮದಲ್ಲಿ 100 ಟ್ರೇಯಷ್ಟು ಭತ್ತದ ನೇಜಿ ಸೈನಿಕ ಹುಳು ಬಾಧೆಗೆ ಸಿಲುಕಿ ನಾಶವಾಗಿದೆ. ಉಳಿದಂತೆ ಕರಾವಳಿಯ ಇತರೆಡೆ ಇದುವರೆಗೆ ಈ ಸಮಸ್ಯೆ ಕಾಣಿಸಿಲ್ಲ.

ಸಮಗ್ರ ಹತೋಟಿಗೆ ಕೃಷಿ ವಿಜ್ಞಾನಿಗಳ ಸಲಹೆ
ಭತ್ತ ಕೊಯ್ಲು ಮುಗಿದ ಅನಂತರ ಮಾಗಿ ಉಳುಮೆ, ಕಳೆಗಳ ನಿಯಂತ್ರಣ ಮಾಡಬೇಕು. ಗದ್ದೆಯಲ್ಲಿ ಅವಶ್ಯವಿರುವಷ್ಟು ನೀರು ನಿಲ್ಲಿಸಬೇಕು. ಸೈನಿಕ ಹುಳುವಿನ ಪ್ರೌಢ ಕೀಟಗಳನ್ನು ವಿದ್ಯುತ್‌ ದೀಪಕ್ಕೆ ಆಕರ್ಷಿಸಿ ನಾಶ ಮಾಡಬೇಕು. ಗದ್ದೆಯಲ್ಲಿ ಕೆಲಸ ಮಾಡುವಾಗ ಹುಳು ಕಂಡರೆ ಹೆಕ್ಕಿ ನಾಶ ಮಾಡಬೇಕು. ತೆಂಗಿನ ನಾರಿನ ಹಗ್ಗವನ್ನು ಭತ್ತದ ಬೆಳೆಯ ಮೇಲೆ ಎಳೆಯುವ ಮೂಲಕ ಹುಳುಗಳನ್ನು ಕೆಳಕ್ಕೆ ಬೀಳುವಂತೆ ಮಾಡಿ ಬಳಿಕ ಸೀಮೆ ಎಣ್ಣೆ ಅಥವಾ ಡೀಸೆಲನ್ನು ಎಕರೆಗೆ 1 ಲೀ.ನಂತೆ ಬೂದಿಯೊಂದಿಗೆ ಮಿಶ್ರಮಾಡಿ ಗದ್ದೆಯಲ್ಲಿ ನಿಂತ ನೀರಿನ ಮೇಲೆ ಚೆಲ್ಲಬೇಕು.

ಹುಳುಗಳ ಬಾಧೆ ಕಡಿಮೆಯಾಗದೆ ಇದ್ದರೆ 2-3 ಮಿ.ಲೀ. ಅಜಾಡಿರಾಕ್ಟಿನ್‌ (ಬೇವಿನ ಎಣ್ಣೆ) ಅಥವಾ 5 ಗ್ರಾಂ ಬ್ಯಾಸಿಲಸ್‌ ಥೂರೆಂಜೆನೆಸಿಸ್‌ ಅನ್ನು ಒಂದು ಲೀಟರ್‌ ನೀರಿಗೆ ಬೆರೆಸಿ ಸಿಂಪಡಿಸಬೇಕು ಅಥವಾ ಒಂದು ಎಕರೆಗೆ 10 ಕಿಗ್ರಾಂ ಮೆಲಾಥಿಯಾನ್‌ ಶೇ. 5 ಅಥವಾ 10 ಕಿಗ್ರಾಂ ಕ್ಲೋರ್‌ಪೈರಿಫಾಸ್‌ ಶೇ. 1.5 ಸಿಂಪಡಿಸಬೇಕು ಅಥವಾ 2 ಮಿ.ಲೀ. ಕ್ಲೋರ್‌ಪೈರಿಫಾಸ್‌ 20 ಇ.ಸಿ. ಅಥವಾ 2 ಮಿ.ಲೀ. ಕಿನಾಲ್‌ಫಾಸ್‌ 25 ಇ.ಸಿ. ಅಥವಾ 2 ಮಿ.ಲೀ. ಸೈಪರ್‌ವೆುಥ್ರಿನ್‌ 1ಲೀಟರ್‌ ನೀರಿಗೆ ಬೆರೆಸಿ ಭತ್ತದ ಬೆಳೆಗೆ ಸಿಂಪಡಿಸಿದರೆ ಸೈನಿಕ ಹುಳುಗಳನ್ನು ಸಮಗ್ರ
ವಾಗಿ ಹತೋಟಿ ಮಾಡಬಹುದು ಎಂದು ಕೃಷಿ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

Belthangady: ತೋಡಿಗೆ ಅಡಿಕೆ ಮರವೇ ಸಂಕ!

Belthangady: ತೋಡಿಗೆ ಅಡಿಕೆ ಮರವೇ ಸಂಕ!

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

1-dddasasa

Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

14

Kannada Sahitya Ranga: ಅಮೆರಿಕದಲ್ಲಿ ವಸಂತೋತ್ಸವ; ಕನ್ನಡ‌ ಸಾಹಿತ್ಯ ರಂಗದ ಸಾರ್ಥಕ ಸೇವೆ

Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !

Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.