ದೇಶವಿರೋಧಿ ದುಷ್ಟ ಶಕ್ತಿಗಳು ಬಿಲದಿಂದ ಹೊರಗೆ ಬರುತ್ತಿವೆ; ಡಾ. ಭರತ್ ಶೆಟ್ಟಿ
Team Udayavani, Jul 19, 2023, 5:44 PM IST
ಸುರತ್ಕಲ್ :ಕಾಂಗ್ರೆಸ್ ಪಕ್ಷ ಅಧಿಕಾರ ಬಂದ ಕೂಡಲೇ ಬಿಲದಲ್ಲಿ ಅಡಗಿ ಕುಳಿತಿದ್ದ ದುಷ್ಟ ಶಕ್ತಿಗಳು ಒಂದೊಂದಾಗಿ ಹೊರಗೆ ಬರುತ್ತಿವೆ . ಇದಕ್ಕೆ ಕಾಂಗ್ರೆಸ್ ಪಕ್ಷದ ಮೇಲೆ, ಹಾಗೂ ಅದರ ಆಡಳಿತದ ಮೇಲೆ ಯಾವುದೇ ಹೆದರಿಕೆ ಇಲ್ಲದಿರುವುದೇ ಕಾರಣ ಎಂದು ಡಾ. ಭರತ್ ಶೆಟ್ಟಿ ಹೇಳಿದ್ದಾರೆ.
ಬಿಜೆಪಿ ಅಧಿಕಾರದಲ್ಲಿದ್ದಾಗ ಉಗ್ರರ ಚಟುವಟಿಕೆಗಳನ್ನ ಸಂಪೂರ್ಣ ಮಟ್ಟ ಹಾಕಲಾಗಿತ್ತು.ಇದೀಗ ರಾಜಾರೋಷವಾಗಿ ಬಾಂಬುಗಳ ತಯಾರಿಕೆಗೆ ಬೇಕಾದ ವಸ್ತುಗಳನ್ನು ಖರೀದಿಸಲು ಬೆಂಗಳೂರಿನಲ್ಲಿ ಓಡಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಉಗ್ರ ವಿದ್ವಾಂಸಕ ಕೃತ್ಯ ನಡೆಸಲು ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ. ಇವರ ಗುರಿ ಹಿಂದೂ ಸಮುದಾಯವೇ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.
ಕಾಂಗ್ರೆಸ್ ಸರ್ಕಾರವು ತಕ್ಷಣ ರಾಜ್ಯದ ಜನರ ಸುರಕ್ಷತೆಯ ಬಗ್ಗೆ ಮೊದಲ ಆದ್ಯತೆಯನ್ನು ನೀಡಬೇಕು. ಸಿಂಧನೂರು ಬಂಗಾಳಿ ಕ್ಯಾಂಪ್ ಗೆ ನುಗ್ಗಿ ದಾಂಧಲೆಗೈದವರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಓಟ್ ಬ್ಯಾಂಕ್ ಸಮುದಾಯಕ್ಕೆ ನೋವಾಗುತ್ತದೆ ಎಂದು ಮೀನಾ ಮೇಷ ಎಣಿಸದೆ ಇಂತಹ ಉಗ್ರ ಕೃತ್ಯಗಳನ್ನು ಬೇರು ಸಹಿತ ಕಿತ್ತು ಹಾಕಲು ಯಾವುದೇ ತಪಾಸಣೆ,ವಿಚಾರಣೆಗಾಗಿ ಪೊಲೀಸ್ ಇಲಾಖೆ ಸೂಕ್ತ ಕ್ರಮವನ್ನು ಕೈಗೊಳ್ಳಲು ಮುಕ್ತ ಅವಕಾಶ ನೀಡಬೇಕು ಎಂದು ಡಾ.ಭರತ್ ಶೆಟ್ಟಿ ವೈ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ದಿನ ಕಾರ್ಯಕ್ರಮ
Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ
Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು
Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ
Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ
MUST WATCH
ಹೊಸ ಸೇರ್ಪಡೆ
Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ
Bengaluru: ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ 2 ಮೊಬೈಲ್
Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು
ನಿಯಮಗಳ ಉಲ್ಲಂಘನೆ, ಹೈಬೀಮ್ ಲೈಟ್ಗಳ ಬಳಕೆ: 5.79 ಲಕ್ಷ ದಂಡ
Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.