ವಿಜಯಪುರ ರೈಲಿಗೆ ಅನಿಶ್ಚಿತತೆಯ ಆತಂಕ

ನಿರೀಕ್ಷಿತ ಆದಾಯ ಬರುತ್ತಿಲ್ಲ; ಸದ್ಯಕ್ಕೆ ಆರು ತಿಂಗಳು ವಿಸ್ತರಣೆ

Team Udayavani, Feb 15, 2020, 5:37 AM IST

1402MLR32A

ಮಂಗಳೂರು: ಮಂಗಳೂರು ಜಂಕ್ಷನ್‌-ವಿಜಯಪುರ ನಡುವೆ ತಾತ್ಕಾಲಿಕ ನೆಲೆಯಲ್ಲಿ ಸಂಚರಿಸುತ್ತಿರುವ ರೈಲು ಇಲಾಖೆಗೆ ನಿರೀಕ್ಷಿತ ಮಟ್ಟದಲ್ಲಿ ಆದಾಯ ನೀಡುತ್ತಿಲ್ಲ. ಆದರೂ 6 ತಿಂಗಳು ವಿಸ್ತರಣೆ ಮಾಡಲಾಗಿದ್ದು ಜೂನ್‌ ಅಂತ್ಯಕ್ಕೆ ಮುಕ್ತಾಯ ವಾಗಲಿದೆ. ವಿಸ್ತರಣೆ ಅವಧಿಯಲ್ಲಿ ಆದಾಯದಲ್ಲಿ ಸುಧಾರಣೆ ಕಾಣದಿದ್ದರೆ ಮುಂದುವರಿಕೆ ಅನಿಶ್ಚಿತವಾಗುವ ಸಾಧ್ಯತೆಯಿದೆ.

ಪ್ರಸ್ತುತ ಇಲಾಖೆಯ ಮಾಹಿತಿ ಯಂತೆ ನ. 11ರಿಂದ ಜ. 10ರ ವರೆಗೆ ಈ ಮಾರ್ಗದಲ್ಲಿ 3.89 ಕೋ.ರೂ. ಆದಾಯ ನಿರೀಕ್ಷಿಸಲಾಗಿತ್ತು. ಆದರೆ 1.37 ಕೋ.ರೂ. ಮಾತ್ರ ಗಳಿಕೆ ಯಾಗಿದೆ. 65,582 ಪ್ರಯಾಣಿಕರನ್ನು ಇಲಾಖೆ ನಿರೀಕ್ಷಿಸಿ ದ್ದರೂ ಈ ವರೆಗೆ ಸಂಚರಿಸಿದ ಪ್ರಯಾಣಿಕರ ಸಂಖ್ಯೆ 29,308ರಲ್ಲೇ ಇದೆ.

ರೈಲಿನಲ್ಲಿ 1 ಎಸಿ ಟು-ಟೈರ್‌, 1 ಎಸಿ ತ್ರಿ ಟೈರ್‌, 6 ದ್ವಿತೀಯ ದರ್ಜೆ ಸ್ಲಿàಪರ್‌ ಮತ್ತು 4 ಸಾಮಾನ್ಯ ದ್ವಿತೀಯ ದರ್ಜೆಯ ಬೋಗಿಗಳನ್ನು ಅಳವಡಿಸಲಾಗಿದೆ. ಇದರಲ್ಲಿ ಎಸಿ ಟು ಟೈರ್‌ ಮತ್ತು ಎಸಿ ತ್ರಿ ಟೈರ್‌ ಬೋಗಿಗಳಿಗೆ ಪ್ರಸ್ತುತ ಪ್ರಯಾಣಿಕರಿಂದ ಹೆಚ್ಚಿನ ಸ್ಪಂದನೆ ಕಂಡುಬಂದಿಲ್ಲ. ಈ ಬೋಗಿಗಳು ಶೇ. 35ರಿಂದ 40ರಷ್ಟು ಮಾತ್ರ ಭರ್ತಿಯಾಗುತ್ತಿವೆ. ದ್ವಿತೀಯ ದರ್ಜೆ ಸ್ಲಿàಪರ್‌ ಬೋಗಿಗಳಿಗೆ ಸ್ಪಂದನೆ ಸಾಮಾನ್ಯವಾಗಿದೆ. ಆದರೆ ನಾಲ್ಕು ಜನರಲ್‌ ಬೋಗಿಗಳು ಭರ್ತಿಯಾಗುತ್ತಿವೆ.

ಪೂರಕ ಕ್ರಮಗಳು ಅಗತ್ಯ
ಈ ರೈಲನ್ನು ಉಳಿಸಿಕೊಳ್ಳಲು ಪೂರಕ ಕ್ರಮಗಳು ಅವಶ್ಯ. ರೈಲು ಪ್ರಸ್ತುತ ಮಂಗಳೂರು ಜಂಕ್ಷನ್‌ ವರೆಗೆ ಮಾತ್ರ ಇದೆ. ಇದನ್ನು ಮಂಗಳೂರು ಸೆಂಟ್ರಲ್‌ವರೆಗೆ ವಿಸ್ತರಿಸಬೇಕು ಮತ್ತು ಸಂಚಾರ ವೇಳಾಪಟ್ಟಿಯನ್ನು ಬದಲಾಯಿಸಬೇಕು, ಅವಧಿಯನ್ನು ಕಡಿಮೆಗೊಳಿಸಬೇಕು ಎಂದು ರೈಲ್ವೇ ಹೋರಾಟಗಾರ ಜಿ.ಕೆ. ಭಟ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ರೈಲು ಸಂಜೆ 6.40ಕ್ಕೆ ವಿಜಯಪುರದಿಂದ ಹೊರಟು ರಾತ್ರಿ 12.30ಕ್ಕೆ ಹುಬ್ಬಳ್ಳಿ ತಲುಪುತ್ತದೆ. ಮರು ಮಧ್ಯಾಹ್ನ 12.40ಕ್ಕೆ ಮಂಗಳೂರು ಜಂಕ್ಷನ್‌ಗೆ ಬರುತ್ತದೆ. ಮಧ್ಯಾಹ್ನ 1ಕ್ಕೆ ವಿಜಯಪುರದಿಂದ ಹೊರಟು ರಾತ್ರಿ 7ಕ್ಕೆ ಹುಬ್ಬಳ್ಳಿಗೆ ಬಂದು, ಮರು ಬೆಳಗ್ಗೆ 8.30ಕ್ಕೆ ಮಂಗಳೂರು ತಲುಪುವಂತಾದರೆ ಹಾಗೂ ಮಂಗಳೂರಿನಿಂದ ಸಂಜೆ 4.30ರ ಬದಲು ರಾತ್ರಿ 7 ಗಂಟೆಗೆ ಹೊರಟು ಮರು 8 ಗಂಟೆಗೆ ಹುಬ್ಬಳ್ಳಿಗೆ ತಲುಪುವಂತೆ ಆದರೆ ಹೆಚ್ಚು ಅನುಕೂಲ.

ಸಾಮಾನ್ಯ ಬೋಗಿ ಹೆಚ್ಚಿಸಿದರೆ ಆದಾಯ ವೃದ್ಧಿ ಸಾಧ್ಯ
ಉತ್ತರ ಕರ್ನಾಟಕದಿಂದ ಕರಾವಳಿಗೆ ಗಣನೀಯ ಸಂಖ್ಯೆಯಲ್ಲಿ ಬರುವವರು ವಿದ್ಯಾರ್ಥಿಗಳು, ಕಾರ್ಮಿಕರು. ಮುಖ್ಯವಾಗಿ ಬಾಗಲಕೋಟೆ, ಬಾದಾಮಿ, ಗದಗ, ಹಾವೇರಿ, ರಾಣೆಬೆನ್ನೂರು, ಬನವಾಸಿ, ಬಾಗೇವಾಡಿ, ಆಲಮಟ್ಟಿ ಮುಂತಾದೆಡೆಗಳ ಕಾರ್ಮಿಕರ ಸಂಖ್ಯೆಯೇ ಹೆಚ್ಚು. ಅವರಿಗೆ ಈ ರೈಲು ಅತಿ ಉಪಯುಕ್ತ. ಈ ಸಾಮಾನ್ಯ ವರ್ಗದ ಜನತೆ ಜನರಲ್‌ ಅಥವಾ ದ್ವಿತೀಯ ದರ್ಜೆ ಸ್ಲಿàಪರ್‌ ಬೋಗಿಗಳಲ್ಲಿಯೇ ಪ್ರಯಾಣಿಸುತ್ತಾರೆ. ಸಾಮಾನ್ಯ ಬೋಗಿಗಳ ಸಂಖ್ಯೆಯನ್ನು ಜಾಸ್ತಿ ಮಾಡುವುದರಿಂದ ಇಲಾಖೆಗೆ ಹೆಚ್ಚಿನ ಆದಾಯ ಬರಲಿದೆ.

ಲಭ್ಯ ಮಾಹಿತಿ ಪ್ರಕಾರ ಈ ರೈಲಿಗೆ ನಿರೀಕ್ಷಿತ ಆದಾಯ ಬರುತ್ತಿಲ್ಲವಾದರೂ ನಷ್ಟವಾಗುತ್ತಿಲ್ಲ. ಅದುದರಿಂದ ಈ ರೈಲನ್ನು ಖಾಯಂ ನೆಲೆಯಲ್ಲಿ ಓಡಿಸಬೇಕು. ನಿರೀಕ್ಷಿತ ಆದಾಯ ಬರುತ್ತಿಲ್ಲ ಎಂಬ ಕಾರಣ ನೀಡಿ ಇದನ್ನು ಕೈಬಿಡುವ ಪ್ರಯತ್ನ ನಡೆದರೆ ಪ್ರಬಲ ಹೋರಾಟ ನಡೆಸುತ್ತೇವೆ ಮತ್ತು ಈ ರೈಲನ್ನು ಉಳಿಸಿಕೊಳ್ಳುತ್ತೇವೆ.
– ಕುತುದ್ದೀನ್‌ ಖಾಜಿ,
ಅಧ್ಯಕ್ಷರು ಕರ್ನಾಟಕ ರಾಜ್ಯ
ರೈಲ್ವೇ ಅಭಿವೃದ್ಧಿ ಹೋರಾಟ ಸಮಿತಿ.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.