ಫಲ್ಗುಣಿಯ “ಜಲ ಮಾರ್ಗ’ದಲ್ಲಿ ಸರಕು ಸಾಗಾಟಕ್ಕೆ ಅಸ್ತು

ರಾಷ್ಟ್ರೀಯ ಜಲ ಮಾರ್ಗ ಅಭಿವೃದ್ಧಿಗೆ ಅನುಮೋದನೆ; ಶೀಘ್ರ ಜಾರಿ ನಿರೀಕ್ಷೆ

Team Udayavani, Jul 17, 2023, 8:15 AM IST

ಫಲ್ಗುಣಿಯ “ಜಲ ಮಾರ್ಗ’ದಲ್ಲಿ ಸರಕು ಸಾಗಾಟಕ್ಕೆ ಅಸ್ತು

ಮಂಗಳೂರು: ಮಂಗಳೂರು ಬಂದರಿನಿಂದ ಸರಕು ಸಾಗಾಟದ ವಾಹನಗಳು ನಗರ ಮಧ್ಯೆ ಸಂಚರಿಸುವ ಬದಲು “ಜಲ ಮಾರ್ಗ’ದಲ್ಲಿ ತೆರಳಿ ಹೆದ್ದಾರಿಯ ಸಂಪರ್ಕ ಪಡೆಯಬಹುದು!

ಹೀಗೊಂದು “ಜಲಮಾರ್ಗ’ ಯೋಜನೆ ಮಂಗಳೂರಿನಲ್ಲಿ ಫಲ್ಗುಣಿ ನದಿಯ ಮುಖೇನ ರೂಪುಗೊಳ್ಳಲಿದ್ದು, ಅಂತಿಮ ಹಂತದ ತಯಾರಿ ಸದ್ಯ ನಡೆಯುತ್ತಿದೆ. ಬಂದರಿನಿಂದ ಫಲ್ಗುಣಿ ನದಿಯಲ್ಲಿ ಕೂಳೂರು ಸೇತುವೆವರೆಗೆ ರೋರೋ ನೌಕೆ (ಬಾರ್ಜ್‌) ಮೂಲಕ ವಾಹನಗಳ ಕೊಂಡೊಯ್ಯುವ ಸೇವೆ ಇದು.

ಕೇಂದ್ರ ಸರಕಾರದಿಂದ ರಾಷ್ಟ್ರೀಯ ಜಲ ಮಾರ್ಗವಾಗಿ “ನೇತ್ರಾವತಿ ಎನ್‌ಡಬ್ಲ್ಯೂ 74′ ಹಾಗೂ “ಗುರುಪುರ (ಫಲ್ಗುಣಿ) ಎನ್‌ಡಬ್ಲೂ$Â 43′ ಎಂದು ಈಗಾಗಲೇ ಗುರುತಿಸಿದೆ. ಇದರಲ್ಲಿ ಪ್ರಥಮ ಹಂತದಲ್ಲಿ ಕರ್ನಾಟಕ ಜಲಸಾರಿಗೆ ಮಂಡಳಿಯಿಂದ ಫಲ್ಗುಣಿ ನದಿಯಲ್ಲಿ ಜಲಮಾರ್ಗ ಯೋಜನೆಯೊಂದು ಸಾಕಾರಗೊಳ್ಳುತ್ತಿದೆ.
ಒಟ್ಟು 29 ಕೋ.ರೂ. ವೆಚ್ಚದಲ್ಲಿ ಜಲ ಮಾರ್ಗ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ಇದಕ್ಕೆ ಸಮ ಪಾಲು ಒದಗಿಸಲಿದೆ. ಪ್ರಾರಂಭಿಕವಾಗಿ 2 ಜೆಟ್ಟಿ (ಬಂದರು ಹಾಗೂ ಕೂಳೂರು) ಹಾಗೂ ಕಟ್ಟಡ ನಿರ್ಮಾಣಕ್ಕಾಗಿ 16.40 ರೂ.ಗಳಿಗೆ ಟೆಂಡರ್‌ ಪೂರ್ಣಗೊಂಡಿದ್ದು, ಪರಿಸರ ಹಾಗೂ ಸಿಆರ್‌ಝಡ್‌ ಅನುಮತಿ ದೊರೆತ ಅನಂತರ ಕಾಮಗಾರಿ ಆರಂಭವಾಗಲಿದೆ. 2 ಜೆಟ್ಟಿಗಳ ಮಧ್ಯೆ ಸುಮಾರು 8 ಕಿ.ಮೀ. ಅಂತರವಿರಲಿದೆ.

ಬಾರ್ಜ್‌ಗೆ ಪ್ರತ್ಯೇಕ ಟೆಂಡರ್‌
ವಾಹನಗಳನ್ನು ಅತ್ತಿಂದಿತ್ತ ಕೊಂಡೊಯ್ಯಲು ಅನುಕೂಲ ವಾಗುವ ರೋರೋ ನೌಕೆಗೆ (ಬಾರ್ಜ್‌) ಬಂದರು ಇಲಾಖೆ ಪ್ರತ್ಯೇಕವಾಗಿ ಟೆಂಡರ್‌ ಕರೆಯಲಿದೆ. ಬಾರ್ಜ್‌ ಸೇವೆಯಲ್ಲಿ ಪರಿಣತರು ಟೆಂಡರ್‌ನಲ್ಲಿ ಪಾಲ್ಗೊಳ್ಳುತ್ತಾರೆ. ಜೆಟ್ಟಿ ನಿರ್ಮಾಣ ಕಾಮಗಾರಿ ಆಗುವ ಸಮಯದಲ್ಲಿ ಬಾರ್ಜ್‌ ಕುರಿತ ಟೆಂಡರ್‌ ಅಂತಿಮ ಮಾಡುವುದು ಕರ್ನಾಟಕ ಜಲಸಾರಿಗೆ ಮಂಡಳಿ ಲೆಕ್ಕಾಚಾರ.

ಬಾರ್ಜ್‌ಗೆ ಸಾಮಾನ್ಯವಾಗಿ 3 ಮೀ. ನೀರಿದ್ದರೂ ಸಂಚರಿಸಲು ಅನುಕೂಲವಾಗುತ್ತದೆ. ಹೀಗಾಗಿ ನದಿಯಲ್ಲಿ ಪ್ರತ್ಯೇಕ ಡ್ರೆಜ್ಜಿಂಗ್‌ ಮಾಡುವ ಅಗತ್ಯ ಇರುವುದಿಲ್ಲ.

ಕಾರ್ಗೊ; ಸಮಯ, ಇಂಧನ ಉಳಿತಾಯ
ಮಂಗಳೂರು ಬಂದರಿನಿಂದ ಕೂಳೂರು ಹೆದ್ದಾರಿ ಕಡೆಗೆ ರಸ್ತೆಯಲ್ಲಿ ಸರಕು ವಾಹನ ತೆರಳಲು ಸುಮಾರು 45 ನಿಮಿಷ ಅಗತ್ಯವಿದೆ. ಸರಕು ವಾಹನಗಳ ಸಂಚಾರವು ನಗರದ ಸಂಚಾರ ಒತ್ತಡದಿಂದ ಸಮಸ್ಯೆ ಎದುರಿಸುತ್ತಿದೆ. ಆದರೆ ಬಾರ್ಜ್‌ ಸೇವೆ ಆರಂಭವಾದರೆ 15-20 ನಿಮಿಷದಲ್ಲಿ ತೆರಳುವ ಸಾಧ್ಯತೆ ಇದೆ. ಸಮಯ, ಇಂಧನವೂ ಉಳಿತಾಯವಾಗಲಿದೆ ಎನ್ನುತ್ತಾರೆ ಅಧಿಕಾರಿಗಳು.

ನದಿಯ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಿಗೆ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ನಾವೆಗಳ ಮೂಲಕ ಪ್ರಯಾಣಿಕರ ಸಾಗಾಟ ಹಾಗೂ ನೌಕಾ ಚಟುವಟಿಕೆಗಳ ಮೂಲಕ ಸರಕು ಸಾಗಾಟಕ್ಕೆ ಅವಕಾಶ ಈ ಯೋಜನೆಯಿಂದ ದೊರೆಯಲಿದೆ. ರಸ್ತೆ ಸಂಚಾರಕ್ಕೆ ಹೋಲಿಸಿದರೆ ಜಲಮಾರ್ಗದ ಸಂಚಾರ ತುಂಬಾ ಅಗ್ಗವಾಗಲಿದೆ.

“ನೇತ್ರಾವತಿ ಜಲ ಮಾರ್ಗ’ಕ್ಕೂ ಒಲವು
ಗುರುಪುರ ಜಲಮಾರ್ಗ ಯೋಜನೆ ಯಶಸ್ವಿಯಾದ ಬಳಿಕ ನೇತ್ರಾವತಿ ನದಿಯಲ್ಲಿಯೂ ಇಂತಹ ಜಲಮಾರ್ಗ ಪರಿಚಯಿಸಲು ಕರ್ನಾಟಕ ಜಲಸಾರಿಗೆ ಮಂಡಳಿ ಆಸಕ್ತಿ ವಹಿಸಿದೆ. ಉಳ್ಳಾಲ ಅಥವಾ ಜಪ್ಪಿನಮೊಗರು ನೇತ್ರಾವತಿ ಸೇತುವೆ ಬಳಿಯಲ್ಲಿ ಜೆಟ್ಟಿ ನಿರ್ಮಿಸಿದರೆ ಸರಕು ಸಂಚಾರಕ್ಕೆ ಹೆಚ್ಚು ಅನುಕೂಲ ನಿರೀಕ್ಷಿಸಲಾಗಿದೆ. ಇದು ಸಾಧ್ಯವಾದರೆ ಬಂದರು ವ್ಯಾಪ್ತಿಯಿಂದ ಘನ/ಲಘುವಾಹನಗಳು ಮಂಗಳೂರು ನಗರಕ್ಕೆ ಬಾರದೆ, ಹೊರಭಾಗದಿಂದಲೇ ಹೆದ್ದಾರಿ ಸಂಪರ್ಕಿಸಲು ಅನುಕೂಲವಾಗಲಿದೆ.

ಏನಿದು ಯೋಜನೆ?
ಈ ಯೋಜನೆ ಪೂರ್ಣಗೊಂಡ ಬಳಿಕ ಮಂಗಳೂರಿನ ಹಳೆಬಂದರಿನಿಂದ ಸರಕು ತುಂಬಿದ ವಾಹನ ಅಥವಾ ಇತರ ವಾಹನ ಬಾರ್ಜ್‌ ಮುಖೇನ ಕೂಳೂರು ಸೇತುವೆ ಪಕ್ಕದಲ್ಲಿ ನಿರ್ಮಾಣವಾಗಲಿರುವ ಜೆಟ್ಟಿಯಲ್ಲಿಗೆ ತೆರಳುತ್ತದೆ. ಬಾರ್ಜ್‌ನಿಂದ ಕೆಳಗಿಳಿದ ವಾಹನ ನೇರವಾಗಿ ಉಡುಪಿ ಅಥವಾ ಇತರ ಕಡೆಗೆ ಸಾಗಲು ಹೆದ್ದಾರಿ ಸಂಪರ್ಕವಿದೆ. ಸಾಮಾನ್ಯವಾಗಿ ಏಕಕಾಲಕ್ಕೆ 6 ಲಾರಿಗಳನ್ನು ಬಾರ್ಜ್‌ನಲ್ಲಿ ಸಾಗಿಸಲು ಅವಕಾಶ ಕಲ್ಪಿಸುವ ಸಾಧ್ಯತೆಯಿದ್ದು, ಕಾರು ಸಹಿತ ಇತರ ವಾಹನಗಳಿಗೂ ಅವಕಾಶ ಇದೆ. ಜನರು ಕೂಡ ಇದರಲ್ಲಿ ತೆರಳಬಹುದಾಗಿದೆ.

ಗುರುಪುರ ಜಲಮಾರ್ಗದ ಅಭಿವೃದ್ಧಿ ಕಾಮಗಾರಿಗೆ ಈಗಾಗಲೇ ಗುತ್ತಿಗೆ ಅಂತಿಮಗೊಳಿಸಲಾಗಿದೆ. ಪರಿಸರ ಹಾಗೂ ಸಿಆರ್‌ಝಡ್‌ ನಿರಾಕ್ಷೇಪಣ ಪತ್ರ ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಅದಾದ ಬಳಿಕ ಬಂದರು ಹಾಗೂ ಕೂಳೂರಿನಲ್ಲಿ 2 ಜೆಟ್ಟಿಗಳು ನಿರ್ಮಾಣವಾಗಲಿವೆ. ಬಾರ್ಜ್‌ಗೆ ಪ್ರತ್ಯೇಕ ಟೆಂಡರ್‌ ಕರೆಯಲಾಗುತ್ತದೆ.
– ಪ್ರವೀಣ್‌ ಕುಮಾರ್‌, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ (ಪ್ರಭಾರ), ಬಂದರು ಇಲಾಖೆ

-ದಿನೇಶ್‌ ಇರಾ

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.