ಕುಕ್ಕೆ: ಸಂಜೆ ಆಶ್ಲೇಷಾ ಬಲಿ ಸೇವೆಗೆ ಚಾಲನೆ
Team Udayavani, Jul 6, 2018, 10:33 AM IST
ಸುಬ್ರಹ್ಮಣ್ಯ: ನಾಗಾರಾಧನೆಗೆ ಪ್ರಸಿದ್ಧಿ ಪಡೆದಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಸಂಜೆ ವೇಳೆಯಲ್ಲೂ ನಡೆಯುವ ಆಶ್ಲೇಷಾ ಬಲಿ ಸೇವೆಗೆ ಗುರುವಾರ ಸಂಜೆ ಚಾಲನೆ ನೀಡಲಾಯಿತು. ಮೊದಲ ದಿನ 56 ಸೇವಾರ್ಥಿಗಳು ಪಾಲ್ಗೊಂಡಿದ್ದರು. ದೇವಸ್ಥಾನದ ಅಧಿಕಾರಿಗಳು, ಸಿಬಂದಿ ಕೂಡ ಸೇವೆ ಸಲ್ಲಿಸಿದರು.
ಕ್ಷೇತ್ರದಲ್ಲಿ ಪ್ರತಿದಿನ ಬೆಳಗ್ಗೆ ಆಶ್ಲೇಷಾ ಬಲಿ ಸೇವೆ ಜರಗುತ್ತಿತ್ತು. ಇತ್ತೀಚಿನ ದಿನಗಳಲ್ಲಿ ಸೇವಾರ್ಥಿಗಳ ಸಂಖ್ಯೆ ಹೆಚ್ಚಳಗೊಂಡು ಅವರಿಗೆ ಅನನುಕೂಲ ಆಗುವುದನ್ನು ಗಮನಿಸಿದ ಆಡಳಿತ ಮಂಡಳಿ ಅಷ್ಟಮಂಗಲ ಪ್ರಶ್ನೆ ಚಿಂತನೆ ಇರಿಸಿ ಆ ಪ್ರಕಾರ ಸಂಜೆಯೂ ಸೇವೆ ನಡೆಸುವ ಬಗ್ಗೆ ತಿರ್ಮಾನಿಸಿತ್ತು. ಈ ಸೇವೆಗೆ ಯಾವುದೇ ಮುಂಗಡ ಬುಕ್ಕಿಂಗ್ ಇರುವುದಿಲ್ಲ. ಸಾಯಂಕಾಲದ ಸೇವೆಗೆ ಮಧ್ಯಾಹ್ನ 12.30 ರಿಂದ 4.30ರ ತನಕ ಸೇವಾ ರಶೀದಿ ಪಡೆಯಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.