ಮಂಗಳೂರು: ಖಾಸಗಿ ಟಿವಿ ವರದಿಗಾರನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಬಂಧನ
Team Udayavani, Nov 23, 2021, 11:50 AM IST
![gkgjhgf](https://www.udayavani.com/wp-content/uploads/2021/11/gkgjhgf-620x372.jpg)
![gkgjhgf](https://www.udayavani.com/wp-content/uploads/2021/11/gkgjhgf-620x372.jpg)
ಮಂಗಳೂರು: ಖಾಸಗಿ ಟಿವಿ ವಾಹಿನಿ ವರದಿಗಾರೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಖಾಸಗಿ ಟಿವಿ ವರದಿಗಾರರಾಗಿರುವ ಸುಖ್ ಪಾಲ್ ಪೊಳಲಿ ಅವರ ಮೇಲೆ ಯದುನಂದನ್ ಎನ್ನುವವರು ಸೋಮವಾರ ಸಂಜೆ ರಾಡ್ ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ತಲೆಗೆ ಪೆಟ್ಟು ಬಿದ್ದ ಸುಖ್ ಪಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಕಾಂಗ್ರೆಸ್ ತೊರೆದ ಕೀರ್ತಿ ಆಜಾದ್, ಬ್ಯಾನರ್ಜಿಯ ಟಿಎಂಸಿ ಪಕ್ಷಕ್ಕೆ ಸೇರ್ಪಡೆ
ಈ ಕುರಿತು ಯದುನಂದನ್ ಮೇಲೆ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
ವೈಯಕ್ತಿಕ ವಿಚಾರದ ದ್ವೇಷ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.