ಪತ್ರಕರ್ತರ ಸಂಘದ ಅಧಿಕೃತ ವಾಹನ ಸ್ಟಿಕ್ಕರ್‌ ಬಿಡುಗಡೆ


Team Udayavani, Dec 30, 2017, 4:10 PM IST

30-Dec-17.jpg

ನಗರ: ಪುತ್ತೂರು ಪತ್ರಕರ್ತರ ಸಂಘದಿಂದ ಸದಸ್ಯರ ವಾಹನಗಳಿಗೆ ಹಾಕಲು ಸಂಘದ ಅಧಿಕೃತ ಸ್ಟಿಕ್ಕರ್‌
ಬಿಡುಗಡೆ ಕಾರ್ಯಕ್ರಮ ಗುರುವಾರ ಪ್ರಸ್‌ ಕ್ಲಬ್‌ನಲ್ಲಿ ನಡೆಯಿತು.

ನೂತನವಾಗಿ ವಿನ್ಯಾಸಗೊಳಿಸಲಾದ ಸ್ಟಿಕ್ಕರ್‌ನ್ನು ಬಿಡುಗಡೆಗೊಳಿಸಿದ ಪುತ್ತೂರು ಸಂಚಾರ ಪೊಲೀಸ್‌ ಠಾಣೆಯ ಸಹಾಯಕ ಉಪ ನಿರೀಕ್ಷಕ ಸುರೇಶ್‌ ಶರ್ಮ ಮಾತನಾಡಿ, ಪತ್ರಕರ್ತರು ಹಾಗೂ ಪೊಲೀಸರ ಮಧ್ಯೆ ಬಹಳಷ್ಟು ನಂಟು ಇದೆ. ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ವ್ಯವಸ್ಥೆ ನಿರ್ವಹಣೆಯಲ್ಲಿ ಇಬ್ಬರಿಗೂ ಜವಾಬ್ದಾರಿ ಇದೆ. ಪತ್ರಕರ್ತರಿಗೆ ಸಂಘದ ಮೂಲಕ ಅಧಿಕೃತವೆನಿಸುವ ಸ್ಟಿಕ್ಕರ್‌ ನೀಡುವುದು ಸಂದೇಹಗಳ ನಿವಾರಣೆಗೆ ಪ್ರಯೋಜನ ಕಾರಿಯಾಗಲಿದೆ ಎಂದರು.

ವಿಭಿನ್ನ ಕಾರ್ಯನಿರ್ವಹಣೆ
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಗರಸಭಾ ಸದಸ್ಯ ರಾಜೇಶ್‌ ಬನ್ನೂರು ಮಾತನಾಡಿ, ಪುತ್ತೂರಿನ ಪತ್ರಕರ್ತರು
ತಮ್ಮ ವಿಭಿನ್ನ ಶೈಲಿಯ ಕಾರ್ಯನಿರ್ವಹಣೆಯಿಂದ ಗುರುತಿಸಿಕೊಂಡಿದ್ದಾರೆ. ಸಮಾಜ ಸೇವೆಯಲ್ಲಿಯೂ ಸಂಘದ ಸದಸ್ಯರು ತೊಡಗಿಸಿಕೊಂಡಿರುವುದು ಉತ್ತಮ ಬೆಳವಣಿಗೆ. ಸ್ಟಿಕ್ಕರ್‌ ಮೂಲಕ ಮಾದ್ಯಮ ಅವಕಾಶ ದುರುಪಯೋಗವಾಗುವುದು ತಪ್ಪಲಿದೆ ಎಂದು ಹೇಳಿದರು.

ಹೊಸತನ ಬೇಕು
ಪತ್ರಕರ್ತರ ಸಂಘದ ಮಾರ್ಗದರ್ಶಕರು, ಕಾನೂನು ಸಲಹೆಗಾರ ಬಿ. ಪುರಂದರ ಭಟ್‌ ಅವರು ಮಾತನಾಡಿ,
ಹೊಸತನವಿಲ್ಲದೆ ಯಾವುದೇ ಕ್ಷೇತ್ರ ಬೆಳೆಯಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಪುತ್ತೂರು ಪತ್ರಕರ್ತರ ಸಂಘವು
ಬೇರೆ ಬೇರೆ ಕಾರ್ಯಕ್ರಮಗಳ ಮೂಲಕ ತನ್ನ ಅಸ್ತಿತ್ವವನ್ನು ತೋರಿಸಿಕೊಂಡು ಬಂದಿದೆ ಎಂದು ಮೆಚ್ಚುಗೆ
ವ್ಯಕ್ತಪಡಿಸಿದರು.

ನಿಯಮಗಳನ್ನು ಪಾಲಿಸೋಣ
ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಪತ್ರಕರ್ತರ ಸಂಘದ ಅಧ್ಯಕ್ಷ ಮಹೇಶ್‌ ಪುಚ್ಚಪ್ಪಾಡಿ ಮಾತನಾಡಿ, ಕೆಲವೊಂದು
ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸಮರ್ಪಕ ರೀತಿಯ ಸ್ಟಿಕ್ಕರನ್ನು ಸದಸ್ಯರಿಗೆ ನೀಡಿಲಾಗಿದೆ. ಸದಸ್ಯರ
ಎಲ್ಲ ವಿವರಗಳುಳ್ಳ ಪಟ್ಟಿಯನ್ನು ಪೊಲೀಸ್‌ ಇಲಾಖೆಗೂ ನೀಡಲಾಗುತ್ತದೆ ಎಂದರು. ಸಂಚಾರ ನಿಯಮಗಳನ್ನು
ಪಾಲಿಸಿಕೊಂಡು, ದಾಖಲೆಗಳನ್ನು ಇಟ್ಟುಕೊಂಡು ಪತ್ರಕರ್ತರು ವಾಹನಗಳನ್ನು ಚಲಾಯಿಸಬೇಕು ಎಂದು ವಿನಂತಿಸಿದರು.

ಸಂಘದ ಸದಸ್ಯ ಮೇಘ ಪಾಲೆತ್ತಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯ ಸಂಶುದ್ದೀನ್‌ ಸಂಪ್ಯ ಸ್ವಾಗತಿಸಿ,
ಸಂಘದ ಕಾರ್ಯದರ್ಶಿ ವಂದಿಸಿದರು. ಉಪಾಧ್ಯಕ್ಷ ಸುಧಾಕರ ಸುವರ್ಣ ತಿಂಗಳಾಡಿ ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಅನಂತರ ಸಂಘದ ಸಾಮಾನ್ಯ ಸಭೆ ನಡೆಯಿತು.

ಟಾಪ್ ನ್ಯೂಸ್

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!

“Koragajja” Movie producer gifted a car to the director

Kannada Film; ʼಕೊರಗಜ್ಜʼ ನಿರ್ದೇಶಕರಿಗೆ ಕಾರ್‌ ಗಿಫ್ಟ್ ಮಾಡಿದ ನಿರ್ಮಾಪಕ

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!

5-

Mangaluru: ಸೆನ್‌ ಪೊಲೀಸ್‌ ಠಾಣೆಗಳು ಮೇಲ್ದರ್ಜೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.