ಕರಾವಳಿಯಲ್ಲಿ ಹಿಗ್ಗಿದ ಆಟೋಮೊಬೈಲ್‌ ವಹಿವಾಟು: ಒಂದೇ ವರ್ಷದಲ್ಲಿ 90 ಸಾವಿರ ವಾಹನ ನೋಂದಣಿ


Team Udayavani, Jan 1, 2023, 7:50 AM IST

ಕರಾವಳಿಯಲ್ಲಿ ಹಿಗ್ಗಿದ ಆಟೋಮೊಬೈಲ್‌ ವಹಿವಾಟು: ಒಂದೇ ವರ್ಷದಲ್ಲಿ 90 ಸಾವಿರ ವಾಹನ ನೋಂದಣಿ

ಮಂಗಳೂರು : ಕರಾವಳಿ ಭಾಗದಲ್ಲಿ ಎರಡು ವರ್ಷಗಳ ಬಳಿಕ ವಾಹನ ಖರೀದಿಯಲ್ಲಿ ಭಾರೀ ಚೇತರಿಕೆ ಕಂಡುಬಂದಿದೆ. ಎರಡು ವರ್ಷಗಳ ಹಿಂದೆ ಕೋವಿಡ್‌ನಿಂದಾಗಿ ಆಟೋಮೊಬೈಲ್‌ ಕ್ಷೇತ್ರಕ್ಕೆ ಪೆಟ್ಟು ಬಿದ್ದಿತ್ತು. ಪರಿಣಾಮವಾಗಿ ಜನರು ವಾಹನ ಖರೀದಿಗೆ ಅಷ್ಟೊಂದು ಉತ್ಸಾಹ ತೋರುತ್ತಿರಲಿಲ್ಲ. ಈಗ ಒಂದು ವರ್ಷದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಒಟ್ಟು 90 ಸಾವಿರಕ್ಕೂ ಅಧಿಕ ವಾಹನಗಳು ನೋಂದಣಿಯಾಗಿವೆ.

ಮಂಗಳೂರು ನಗರ ಆರ್‌ಟಿಒ ವ್ಯಾಪ್ತಿಯಲ್ಲಿ 2019ರಲ್ಲಿ 37,635 ವಾಹನಗಳು ನೋಂದಣಿ ಯಾಗಿದ್ದವು. 2020ರಲ್ಲಿ 31,499 ವಾಹನ ನೋಂದಣಿಯಾಗಿದ್ದು, 2021ರಲ್ಲಿ 35,417 ಮತ್ತು 2022ರಲ್ಲಿ 43,258 ಆಗಿವೆ. ಇದು ವಾಹನ ಖರೀದಿಯಲ್ಲಿ ಏರಿಕೆಯನ್ನು ಸೂಚಿಸುತ್ತಿದೆ. ಪುತ್ತೂರು ತಾಲೂಕಿನಲ್ಲಿ 2019ರಲ್ಲಿ 11,675, 2020ರಲ್ಲಿ 9,928, 2021ರಲ್ಲಿ 10,830 ಮತ್ತು 2022ರಲ್ಲಿ 13,084 ವಾಹನ ನೋಂದಣಿಯಾಗಿವೆ. ಬಂಟ್ವಾಳ ತಾಲೂಕಿನಲ್ಲಿ 2019ರಲ್ಲಿ 9,264, 2020ರಲ್ಲಿ 6,504, 2021ರಲ್ಲಿ 6,559 ಮತ್ತು 2022ರಲ್ಲಿ 6,809 ವಾಹನ ನೋಂದಣಿಯಾಗಿವೆ.

ಉಡುಪಿಯಲ್ಲಿ ನೋಡಿದರೆ 2019ರಲ್ಲಿ 27,230, 2020ರಲ್ಲಿ 23,157, 2021ರಲ್ಲಿ 25,362 ಮತ್ತು 2022ರಲ್ಲಿ 31,166 ವಾಹನ ನೋಂದಣಿಯಾಗಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಉಭಯ ಜಿಲ್ಲೆಗಳಲ್ಲಿ 16 ಸಾವಿರ ಹೆಚ್ಚಿನ ವಾಹನಗಳ ನೊಂದಣಿಯಾಗಿದೆ.

ಕರಾವಳಿ ಭಾಗದಲ್ಲಿ ಇತ್ತೀಚೆಗೆ ಎಲೆಕ್ಟ್ರಿಕ್‌ ವಾಹನ ಗಳತ್ತಲೂ ಸಾರ್ವಜನಿಕರು ಆಕರ್ಷಿತರಾಗುತ್ತಿದ್ದಾರೆ. ತೈಲ ಬೆಲೆ ಗಗನಕ್ಕೇರುತ್ತಿರುವುದು ಹಾಗೂ ಸರಕಾರದ ಸಬ್ಸಿಡಿಯ ಲಾಭ ಪಡೆಯುವ ಉದ್ದೇಶದಿಂದ ಇಂಧನವಿಲ್ಲದ ಪರಿಸರಸ್ನೇಹಿ ವಾಹನಗಳನ್ನು ಜನರು ಖರೀದಿಸುತ್ತಿದ್ದಾರೆ. ಕಳೆದ ಒಂದು ವರ್ಷದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 8,690 ಎಲೆಕ್ಟ್ರಿಕ್‌ ವಾಹನಗಳು ನೋಂದಣಿಯಾಗಿವೆ. ಕೆಲವು ಕಡೆಗಳಲ್ಲಿ ಇ-ಚಾರ್ಜಿಂಗ್‌ ಸ್ಟೇಷನ್‌ ಕೂಡ ತೆರೆಯಲಾಗಿದೆ.

ಹೊಸ ವರ್ಷಕ್ಕೆ ಮತ್ತಷ್ಟು ಖರೀದಿ
ಹೊಸ ವರ್ಷದ ಹಿನ್ನೆಲೆಯಲ್ಲಿ ಹೊಸ ಕಾರು, ಇತರ ವಾಹನ ಖರೀದಿಗೆ ವಿವಿಧ ರೀತಿಯ ಕೊಡುಗೆಗಳನ್ನು ನೀಡಲಾಗುತ್ತಿದೆ. ಸಾಮಾನ್ಯವಾಗಿ ಜನವರಿಯಲ್ಲಿ ಕಾರುಗಳ ದರ ಏರಿಕೆಯಾಗುವ ಹಿನ್ನೆಲೆಯಲ್ಲಿ ಡಿಸೆಂಬರ್‌ನಲ್ಲಿಯೇ ಕಾರು ಖರೀದಿ ಏರಿಕೆ ದಾಖಲಿಸುವುದು ಸಾಮಾನ್ಯ. ಭಾರತ್‌ ಆಟೋ ಕಾರ್ನ ಸೇಲ್ಸ್‌ ಹೆಡ್‌ ಡೆನ್ನಿಸ್‌ ಗೋನ್ಸಾಲ್ವಿಸ್‌ ಅವರು “ಉದಯವಾಣಿ’ಗೆ ಪ್ರತಿಕ್ರಿಯಿಸಿ, “ಇತ್ತೀಚೆಗಿನ ಕೆಲವು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ವಾಹನ ಮಾರಾಟದಲ್ಲಿ ಚೇತರಿಕೆ ಕಂಡಿದೆ. ಆಟೋಮೊಬೈಲ್‌ ಕ್ಷೇತ್ರ ಚೇತರಿಕೆಯತ್ತ ಮರಳುತ್ತಿದೆ’ ಎಂದಿದ್ದಾರೆ. ಪೈ ಸೇಲ್ಸ್‌ ಪ್ರç.ಲಿ. ವ್ಯವಸ್ಥಾಪಕ ನಿರ್ದೇಶಕ ಗಣಪತಿ ಪೈ, “ಕಳೆದ ವರ್ಷಕ್ಕೆ ಹೋಲಿಸಿದರೆ ಆಟೋಮೊಬೈಲ್‌ ಕ್ಷೇತ್ರ ಚೇತರಿಕೆ ಕಂಡಿದೆ. ಈಗಿನ ಬಿಎಸ್‌-6 ಎಂಜಿನ್‌ಗೆ ಬಳಕೆ ಮಾಡುವ ಚಿಪ್‌ನಲ್ಲಿ ಕೊರತೆ ಉಂಟಾಗಿದೆ. ಚಿಪ್‌ಗ್ಳನ್ನು ಹೊರದೇಶದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಭಾರತದಲ್ಲಿ ಈಗಷ್ಟೇ ಉತ್ಪಾದನೆ ಆರಂಭಗೊಂಡಿದೆ’ ಎನ್ನುತ್ತಾರೆ.

ಮತ್ತಷ್ಟು ಪ್ರಗತಿ ನಿರೀಕ್ಷೆ
ಎರಡು ವರ್ಷಗಳ ಹಿಂದಿನ ಕೋವಿಡ್‌ ಸಮಯಕ್ಕೆ ಹೋಲಿಸಿದರೆ ಜಿಲ್ಲೆಯಲ್ಲಿ ವಾಹನ ನೋಂದಣಿ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಗತಿ ಕಾಣುವ ನಿರೀಕ್ಷೆ ಇದೆ. ಸದ್ಯ ವಾಹನ ಖರೀದಿ ಹೋಲಿಸಿದಾಗ ದ್ವಿಚಕ್ರ ವಾಹನ ಖರೀದಿಯತ್ತ ಜನರು ಆಸಕ್ತಿ ತೋರುತ್ತಿದ್ದಾರೆ.
– ಭೀಮನಗೌಡ ಪಾಟೀಲ್‌, ಆರ್‌ಟಿಒ, ಮಂಗಳೂರು

- ನವೀನ್‌ ಭಟ್‌, ಇಳಂತಿಲ

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.