ಆಯುಧಪೂಜೆ,ವಾಹನ ಪೂಜೆಯ ಸಂಭ್ರಮ


Team Udayavani, Oct 25, 2020, 1:18 PM IST

ಆಯುಧಪೂಜೆ,ವಾಹನ ಪೂಜೆಯ ಸಂಭ್ರಮ

ಉರ್ವಸ್ಟೋರ್‌ ಮಹಾಗಣಪತಿ ದೇವಸ್ಥಾನದ ಮುಂಭಾಗ ವಾಹನ ಪೂಜೆ ನೆರವೇರಿತು.

ಮಹಾನಗರ, ಅ. 24: ಮಂಗಳೂರಿನ ವಿವಿಧ ದೇಗುಲಗಳಲ್ಲಿ ಶನಿವಾರ ಆಯುಧ ಪೂಜೆಯ ಸಂಭ್ರಮ. ದೇಗುಲಗಳಲ್ಲಿ ವಿಶೇಷ ಪೂಜೆ ನೆರವೇರಿತು. ಭಕ್ತರು ತಮ್ಮ ವಾಹನಗಳನ್ನು ದೇಗುಲಕ್ಕೆ ಕೊಂಡೊಯ್ದು ಪೂಜೆ ಸಲ್ಲಿಸಿದರು.

ಆಯುಧ ಪೂಜೆಯಂದು ವಾಹನ ಸಹಿತ ಮನೆ, ಇನ್ನಿತರ ಸಂಸ್ಥೆಗಳಲ್ಲಿರುವ ಆಯುಧಗಳಿಗೆ ಪೂಜೆ ಸಲ್ಲಿಸುವುದು ವಾಡಿಕೆ.  ದೇಗುಲಗಳ ಮುಂಭಾಗದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಎಲ್ಲೆಡೆ ಕೋವಿಡ್‌ ನಿಯಮಾವಳಿಗಳನ್ನು ಪಾಲಿಸಿ ಕೊಂಡೇ ಪೂಜೆ ಸಲ್ಲಿಸಲಾಯಿತು. ಈ ಬಾರಿ ರವಿವಾರವೂ ಆಯುಧ ಪೂಜೆ ಸಲ್ಲಿಸಲು ಭಕ್ತರಿಗೆ ಅವಕಾಶವಿದೆ. ಶನಿವಾರ ದುರ್ಗಾಷ್ಟಮಿಯ ಅಂಗವಾಗಿ ವಿವಿಧ ದೇಗುಲಗಳಲ್ಲಿ ವಿಶೇಷ ಅಲಂಕಾರ, ಮಹಾಪೂಜೆ, ವಿವಿಧ ಧಾರ್ಮಿಕ ಸೇವೆಗಳು ಜರಗಿದವು.

ದೇಗುಲಗಳಲ್ಲಿ ಪೂಜೆ :  ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶನಿವಾರ ಚಂಡಿಕಾ ಹೋಮ, ಹಗಲೋತ್ಸವ, ಶ್ರೀ ದೇವಿ ಪುಷ್ಪಾಲಂಕಾರ ಮಹಾಪೂಜೆ (ದುರ್ಗಾ ಷ್ಟಮಿ), ಭಜನೆ ಜರಗಿತು.

ಕುದುರಿದ ಬೇಡಿಕೆ : ಆಯುಧ ಪೂಜೆ ಹಿನ್ನೆಲೆಯಲ್ಲಿ ಸೇವಂತಿಗೆ, ಹಸಿಮೆಣಸು, ಲಿಂಬೆಹಣ್ಣಿನ ಮಾಲೆಗಳಿಗೆ ವಿಶೇಷ ಬೇಡಿಕೆ ಕುದುರಿತು. ತೆಂಗಿನಕಾಯಿ ಕೂಡ ಸಾಕಷ್ಟು ಪ್ರಮಾಣದಲ್ಲಿ ಮಾರಾಟವಾಗಿತ್ತು. ದೇಗುಲಗಳ ಮುಂಭಾಗದಲ್ಲಿಯೇ ಹೆಚ್ಚಿನ ವ್ಯಾಪಾರಿಗಳು ತಾತ್ಕಾಲಿಕ ಮಾರಾಟದಲ್ಲಿ ತೊಡಗಿದ್ದರು.

ಇಂದಿನ ಕಾರ್ಯಕ್ರಮ :

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ರವಿವಾರ ಬೆಳಗ್ಗೆ 10ಕ್ಕೆ ಸರಸ್ವತಿ ದುರ್ಗಾಹೋಮ, 11.30ಕ್ಕೆ ಶತ ಸೀಯಾಳ ಅಭಿಷೇಕ, ಮಧ್ಯಾಹ್ನ 12.30ಕ್ಕೆ ಶಿವಪೂಜೆ (ಮಹಾನವಮಿ), 1.30ಕ್ಕೆ ಅನ್ನಸಂತರ್ಪಣೆ, ಸಂಜೆ 7ಕ್ಕೆ ಭಜನೆ, 9ರಿಂದ ಶ್ರೀ ದೇವಿ ಪುಷ್ಪಾಲಂಕಾರ ಮಹಾಪೂಜೆ, ಉತ್ಸವ ನಡೆಯಲಿದೆ. ಮಹತೋಭಾರ ಶ್ರೀ ಮಂಗಳಾ ದೇವಿ ದೇಗುಲದಲ್ಲಿ ಮಹಾನವಮಿ, ಚಂಡಿಕಾ ಹೋಮ, ರಾತ್ರಿ ದೊಡ್ಡ ರಂಗಪೂಜೆ, ಸಣ್ಣ ರಥೋತ್ಸವ ನಡೆಯಲಿದೆ.

ಉರ್ವ ಶ್ರೀ ಮಾರಿಯಮ್ಮ ದೇಗುಲದಲ್ಲಿ ಬೆಳಗ್ಗೆ 7ಕ್ಕೆ ಪೂಜೆ, ಮಧ್ಯಾಹ್ನ 12.30ಕ್ಕೆ ಸರ್ವಾಲಂಕಾರ ಪೂಜೆ, ಮಹಾಪೂಜೆ, ಸಂಜೆ 7.30ಕ್ಕೆ ಸರ್ವಾಲಂಕಾರ ಪೂಜೆ, ಮಹಾಪೂಜೆ, ರಾತ್ರಿ 8ಕ್ಕೆ ಶ್ರೀ ದೇವಿ ಮಹಾ ರಂಗಪೂಜೆ, 8.30ಕ್ಕೆ ರಥೋತ್ಸವ ನಡೆಯಲಿದೆ.

ಪಡುಪಣಂಬೂರು ಕಲ್ಲಾಪು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದಲ್ಲಿ ಅ. 25ರಂದು ಬೆಳಗ್ಗೆ 8.30ಕ್ಕೆ ಮಹಾನವಮಿಯ ಪ್ರಯುಕ್ತ ಚಂಡಿಕಾಯಾಗ ಜರಗಲಿದೆ ಎಂದು ಆಡಳಿತ ಮಂಡಳಿ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.