ಬಣ್ಣ ಬಳಿದು ಸುಂದರಗೊಳಿಸುವ ಕಾರ್ಯ ಆರಂಭ

ಬಿ.ಸಿ.ರೋಡ್‌ನ‌ ಫ್ಲೈ ಓವರ್‌

Team Udayavani, May 6, 2022, 9:20 AM IST

fly-over

ಬಂಟ್ವಾಳ: ನಿರ್ಮಾಣ ಹಂತದಲ್ಲೇ ಸಾಕಷ್ಟು ಟೀಕೆಗಳಿಗೆ ಗುರಿ ಯಾಗಿ ಪ್ರಸ್ತುತ ಬಣ್ಣ ಮಾಸಿ ಸಂಪೂರ್ಣ ಕಳೆಗುಂದಿದ್ದ ಬಿ.ಸಿ.ರೋಡ್‌ನ‌ ಫ್ಲೈ ಓವರ್‌ಗೆ ಇದೀಗ ಬಣ್ಣ ಬಳಿದು ಸುಂದರಗೊಳಿಸುವ ಕಾರ್ಯ ಆರಂಭಗೊಂಡಿದೆ. ಮುಂದಿನ ದಿನಗಳಲ್ಲಿ ಫ್ಲೈ ಓವರ್‌ ವಿವಿಧ ಚಿತ್ತಾರಗಳಿಂದ ಮಿಂಚಲಿದೆ.

ಬಿ.ಸಿ.ರೋಡ್‌ ಸುಂದರೀಕರಣದ ಭಾಗವಾಗಿ ಈ ಕಾಮಗಾರಿ ನಡೆ ಯುತ್ತಿದೆ. ಇದೀಗ ಫ್ಲೈ ಓವರ್‌ ಮೇಲ್ಭಾಗದಲ್ಲಿ ಸಾರಿಗೆ ನಿಯಮದಂತೆ ಎರಡೂ ಬದಿಯ ತಡೆಗೋಡೆಗಳಿಗೆ ಕಪ್ಪು ಹಾಗೂ ಹಳದಿ ಬಣ್ಣ ಬಳಿಯುವ ಕಾರ್ಯ ನಡೆಯುತ್ತಿದೆ. ಉಳಿದಂತೆ ಅದರ ಬದಿಯನ್ನು ತೊಳೆಯುವ ಕಾರ್ಯ ಕೂಡ ಪ್ರಗತಿಯಲ್ಲಿದೆ. ತಳಭಾಗದಲ್ಲಿ ತೊಳೆಯುವ ಕಾರ್ಯ ಪೂರ್ಣಗೊಂಡ ಬಳಿಕ ಮ್ಯಾಟ್‌ ಫಿನಿಶ್‌ ಬಣ್ಣ ಬಳಿಯಲಾಗುತ್ತದೆ.

ಫ್ಲೈ ಓವರ್‌ ನಿರ್ಮಾಣದ ಬಳಿಕ ಯಾವುದೇ ರೀತಿಯ ನಿರ್ವಹಣೆ ಮಾಡದ ಹಿನ್ನೆಲೆಯಲ್ಲಿ ಫ್ಲೈ ಓವರ್‌ ಸಂಪೂರ್ಣ ಕಳೆಗುಂದಿದ ಸ್ಥಿತಿಗೆ ಬಂದಿತ್ತು. ಒಂದು ಹಂತದಲ್ಲಿ ಬಿ.ಸಿ.ರೋಡ್‌ನ‌ ಫ್ಲೈ ಓವರನ್ನು ತೆಗೆಯುವ ಮಾತುಗಳು ಕೇಳಿಬಂದಿದ್ದು, ಪ್ರಸ್ತುತ ಅದರ ಪ್ರಸ್ತಾಪವೇ ಇಲ್ಲದಾಗಿದೆ. ಮಳೆ ನೀರು ಅದರ ಕೆಳಭಾಗಕ್ಕೆ ಇಳಿದು ಪಾಚಿ ಹಿಡಿದ ಸ್ಥಿತಿಗೆ ತಲುಪಿತ್ತು. ನಿರ್ಮಾಣ ಗೊಂಡ ಬಳಿಕ ಇದೇ ಮೊದಲ ಬಾರಿಗೆ ಬಣ್ಣ ಬಳಿಯುವ ಕಾರ್ಯ ನಡೆಯುತ್ತಿದ್ದು ಮುಂದೆ ಫ್ಲೈ ಓವರ್‌ ಬಣ್ಣಗಳೊಂದಿಗೆ ಮಿಂಚುವ ಸಾಧ್ಯತೆ ಇದೆ.

ಮಿಂಚಲಿದೆ ಬಣ್ಣದ ಚಿತ್ತಾರ

ಫ್ಲೈ ಓವರ್‌ನ ತಳಭಾಗದಲ್ಲಿ ಮ್ಯಾಟ್‌ ಫಿನಿಶ್‌ ಬಣ್ಣ ಬಳಿಯುವ ಕಾರ್ಯ ಪೂರ್ಣಗೊಂಡ ಬಳಿಕ ವಿವಿಧ ಬಗೆಯ ಕಲಾಕೃತಿಗಳನ್ನು ಬಿಡಿಸುವ ಚಿಂತನೆ ನಡೆಸಲಾಗಿದೆ. ಮಂಗಳೂರಿನ ಕೊಟ್ಟಾರಚೌಕಿ, ಕೂಳೂರು, ಸುರತ್ಕಲ್‌ನ ಫ್ಲೈ ಓವರ್‌ಗಳ ತಳಭಾಗದಲ್ಲಿ ಈಗಾಗಲೇ ಚಿತ್ತಾರಗಳನ್ನು ಬಿಡಿಸಲಾಗಿದ್ದು, ಅದೇ ಮಾದರಿಯಲ್ಲಿ ಬಿ.ಸಿ.ರೋಡ್‌ನ‌ಲ್ಲೂ ಚಿತ್ರಗಳನ್ನು ಬಿಡಿಸಲು ಉದ್ದೇಶಿಸಲಾಗಿದೆ.

ತಳಭಾಗಕ್ಕೆ ಇಂಟರ್‌ಲಾಕ್‌

ಕೆಸರು ನೀರು, ಕಲ್ಲು ತುಂಡುಗಳು ತುಂಬಿ ನಿರ್ಲಕ್ಷ್ಯ ಸ್ಥಿತಿಯಲ್ಲಿದ್ದ ಫ್ಲೈ ಓವರ್‌ನ ತಳಭಾಗಕ್ಕೆ ಇಂಟರ್‌ ಲಾಕ್‌ ಹಾಕುವ ದೃಷ್ಟಿಯಿಂದ ಈಗಾಗಲೇ ಸಮತಟ್ಟು ಮಾಡುವ ಕಾಮಗಾರಿ ಪೂರ್ಣಗೊಂಡಿದೆ. ಮುಂದೆ ಪಿಲ್ಲರ್‌ಗಳಲ್ಲಿ ಚಿತ್ರಗಳನ್ನು ಬಿಡಿಸುವ ಮುನ್ನ ಇಂಟರ್‌ಲಾಕ್‌ ಅಳವಡಿಕೆಯ ಕಾಮಗಾರಿ ಪೂರ್ಣಗೊಳ್ಳಲಿದೆ. ಫ್ಲೈ ಓವರ್‌ ಒಂದು ಬದಿಯ ತಳಭಾಗದಲ್ಲಿ ಸಾರ್ವಜನಿಕ ಶೌಚಾಲಯದ ಕಾಮಗಾರಿ ಕೂಡ ಪೂರ್ಣಗೊಂಡರೆ ಬಿ.ಸಿ.ರೋಡ್‌ ನಗರದ ಸೌಂದರ್ಯ ವೃದ್ಧಿಯಾಗಲಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.