ವೇಗ ಪಡೆಯಬೇಕಿದೆ ಬೈರಾಡಿ ಕರೆ ಅಭಿವೃದ್ಧಿ: 1 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ


Team Udayavani, Dec 19, 2022, 5:30 AM IST

ವೇಗ ಪಡೆಯಬೇಕಿದೆ ಬೈರಾಡಿ ಕರೆ ಅಭಿವೃದ್ಧಿ: 1 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ

ಪಡೀಲ್‌: ಅನೇಕ ವರ್ಷಗಳ ಹಿಂದೆ ಸುತ್ತಮುತ್ತಲಿನ ಪ್ರದೇಶಗಳ ಕೃಷಿ ಭೂಮಿಗಳಿಗೆ ನೀರುಣಿಸುತ್ತಿದ್ದ ಪಡೀಲ್‌ ಬಳಿಯ ಬೈರಾಡಿ ಕೆರೆ ಅಭಿವೃದ್ಧಿ ಕಾಮ ಗಾರಿಗೆ ಮತ್ತಷ್ಟು ವೇಗ ಸಿಗಬೇಕಿದೆ.

ಸುಮಾರು 2.5 ಎಕರೆ ವಿಸ್ತೀರ್ಣದ ಬೈರಾಡಿ ಕೆರೆಯ ಅಭಿವೃದ್ಧಿಯನ್ನು ಮುಡಾ ವಹಿಸಿಕೊಂಡಿದ್ದು, ಮೊದಲನೇ ಹಂತದ ಕಾಮಗಾರಿಗಳು ಪೂರ್ಣಗೊಂಡಿದೆ. ಇದೀಗ ಎರಡನೇ ಹಂತದಲ್ಲಿ ನಡೆಯುವ ಕಾಮಗಾರಿಗಳಿಗೆ ಮತ್ತಷ್ಟು ಅನುದಾನ ಅಗತ್ಯವಿದ್ದು, ಅದನ್ನು ಹೊಂದಿಸುವ ಕೆಲಸ ನಡೆಯುತ್ತಿದೆ.

ಬೈರಾಡಿ ಕೆರೆಯನ್ನು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಸುಮಾರು 1.3 ಎಕರೆ ಪ್ರದೇಶ ನೀರಿನ ಜಾಗ ಇದೆ. ಇದೀಗ ರೂಪಿಸಿದ ನೂತನ ಯೋಜನೆಯ ಪ್ರಕಾರ ಉದ್ಯಾನವನ, ಇಂಟರ್‌ಲಾಕ್‌ ಅಳವಡಿಕೆ, ವಾಕಿಂಗ್‌ ಟ್ರಾÂಕ್‌, ಮಕ್ಕಳ ಅಟದ ಪ್ರದೇಶ, ಕೆರೆಯ ಹೂಳು ತೆಗೆಯುವುದು ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯಬೇಕಿದೆ. ಕೆರೆಯ ನೀರನ್ನು ಆವಿ ಮಾಡಿ, ಹೂಳೆತ್ತುವ ಕಾಮಗಾರಿ ಎರಡು ಬಾರಿ ನಡೆದಿದೆ. ಆದರೂ ಸದ್ಯ ಕೆರೆ ತುಂಬಾ ನೀರು ಇದ್ದು, ಹೂಳಿನಿಂದ ತುಂಬಿಕೊಂಡಿದೆ.

ಕೆರೆಯಯ ಸುತ್ತ ಆವರಣ ಗೋಡೆ ನಿರ್ಮಿಸಿ ಕಬ್ಬಿಣದ ಗ್ರಿಲ್ಸ್‌ ಅಳವಡಿಸಲಾಗಿದೆ. ಕೆರೆಯ ಮೆಟ್ಟಿಲುಗಳನ್ನು ಸರಿಪಡಿಸಲಾಗಿದ್ದು, ನೀರಿಗೆ ಇಳಿಯಲು ಸಹಕಾರಿಯಾಗುವಂತೆ ಹೆಚ್ಚುವರಿಯಾಗಿ ಕಡಿಮೆ ಎತ್ತರದ ಮ್ಟೆಟಿಲು ನಿರ್ಮಾಣ ನಿರ್ಮಾಣ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿಯಿಂದ ನೇರವಾಗಿ ಕೆರೆ ಪ್ರವೇಶಕ್ಕೆ ಸ್ವಾಗತ ಕಮಾನು ನಿರ್ಮಾಣ ಮಾಡಲಾಗಿದೆ. ಕೆರೆ ಪ್ರವೇಶಕ್ಕೆ ರಸ್ತೆಯನ್ನೂ ನಿರ್ಮಾಣವಾಗಿದೆ.

ಆಟದ ಪ್ರದೇಶ ಕೆಲಸ ಬಾಕಿ
ಕೆರೆಯ ಒಂದು ಬದಿಯಲ್ಲಿ ಜಾಗ ಇದ್ದು, ಅಲ್ಲಿ ಮಕ್ಕಳಿಗೆ ಆಟದ ಪ್ರದೇಶ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಅದಕ್ಕೆ ಸಂಬಂಧಿಸಿದ ಕೆಲವು ಕಾಮಗಾರಿಗಳು ಸದ್ಯ ಬಾಕಿ ಇದೆ. ಈ ಎಲ್ಲಾ ಕಾಮಗರಿಗಳನ್ನು ತ್ವತರಿ ಗೊಳಿಸಿ ಎರಡು ತಿಂಗಳೊಳಗೆ ಉದ್ಘಾಟನೆ ಗೊಳಿಸಲು ಮುಡಾ ನಿರ್ಧರಿಸಿದೆ.

ಕಾಮಗಾರಿಗೆ ವೇಗ
ಬೈರಾಡಿ ಕೆರೆಯನ್ನು ಮುಡಾದಿಂದ ಅಭಿವೃದ್ಧಿಗೊಳಿಸಿ ಸಾರ್ವಜನಿಕರಿಗೆ ಉಪಯೋಗವಾಗುವಂತೆ ಮಾಡುವ ಉದ್ದೇಶವಿದೆ. ಕೆರೆಯ ಅಭಿವೃದ್ಧಿ ಕೆಲಸಗಳಿಗೆ ವೇಗ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತ್ವರಿತವಾಗಿ ಬಾಕಿ ಉಳಿದಿರುವ ಕಾಮಗಾರಿ ನಡೆಸಿ ಸದ್ಯದಲ್ಲೇ ಉದ್ಘಾಟಿಸಲಾಗುವುದು.
-ರವಿಶಂಕರ ಮಿಜಾರು, ಮುಡಾ ಅಧ್ಯಕ್ಷ

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.